ಆ್ಯಪ್ನಗರ

ಕೆ.ಆರ್ ಪೇಟೆಯಂತೆ ಶಿರಾದಲ್ಲೂ ಹಣದ ಹೊಳೆ! ಬಿಎಸ್‌ವೈ ಪುತ್ರನ ಮೇಲೆ ಸಿದ್ದರಾಮಯ್ಯ ಗರಂ

ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಬಿಎಸ್‌ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ. ಕೆ.ಆರ್‌ ಪೇಟೆಯಂತೆ ಶಿರಾದಲ್ಲೂ ಹಣದ ಹೊಳೆ ಹರಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Vijaya Karnataka Web 29 Oct 2020, 2:45 pm
ತುಮಕೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪರೋಕ್ಷವಾಗಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರನ ಮೇಲೆ ಗರಂ ಆಗಿದ್ದಾರೆ.ತುಮಕೂರಿನಲ್ಲಿ ಮಾತನಾಡಿದ ಅವರು ಶಿರಾದಲ್ಲಿ ಬಿಜೆಪಿ ಹಣದ ಹೊಳೆಯನ್ನೇ ಹರಿಸುತ್ತಿದೆ ಎಂದು ಆರೋಪಿಸಿದ್ದಾರೆ.
Vijaya Karnataka Web siddaramaiah


ಕೆ.ಆರ್ ಪೇಟೆಯಲ್ಲಿ ಹಣ ಹಂಚಿದಂತೆ ಶಿರಾದಲ್ಲೂ ಬಿಜೆಪಿಯವರು ಮತದಾರರ ಮನೆಬಾಗಿಲಿಗೆ ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ. ಈ ವಿಚಾರ ಪೊಲೀಸ್ ಇಲಾಖೆ, ಚುನಾವಣಾ ಆಯೋಗಕ್ಕೆ ಗೊತ್ತಿದ್ದರೂ ಅವುಗಳು ಕಣ್ಣುಮುಚ್ಚಿ ಕೂತಿರುವುದೇಕೆ? ಎಂದು ಪ್ರಶ್ನಿಸಿದ್ದಾರೆ.

ಆರ್‌ ಆರ್‌ ನಗರ: ಕಾಂಗ್ರೆಸ್‌ಗೆ ಕಾರ್ಯಕರ್ತರ ಕೊರತೆಯೇ ಸವಾಲು!


ಇದನ್ನು ಟ್ವೀಟ್ ಮೂಲಕವೂ ಹಂಚಿಕೊಂಡಿರುವ ಸಿದ್ದರಾಮಯ್ಯ ಪರೋಕ್ಷವಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷರೂ ಆಗಿರುವ ಬಿ.ವೈ ವಿಜಯೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವಿಧಾನಸಭಾ ಉಪಚುನಾವಣೆಯ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ಕ್ಷೇತ್ರದ ಚುನಾವಣಾ ಹೊಣೆಗಾರಿಕೆಯನ್ನು ಬಿವೈ ವಿಜಯೇಂದ್ರ ಹೊತ್ತುಕೊಂಡಿದ್ದರು. ಮಂಡ್ಯದಲ್ಲಿ ಬಿಜೆಪಿಗೆ ಅಸ್ಥಿತ್ವ ಇರಲಿಲ್ಲ. ಜೆಡಿಎಸ್ ಭದ್ರಕೋಟೆಯಾದ ಮಂಡ್ಯದಲ್ಲಿ ಕಮಲದ ಬಾವುಟ ಹಾರಿಸುವಲ್ಲಿ ವಿಜಯೇಂದ್ರ ಯಶಸ್ವಿಯಾಗಿದ್ದರು.

ಉಪಚುನಾವಣೆಯಲ್ಲಿ ವ್ಯಾಪಕ ಹಣ ಖರ್ಚು ಮಾಡಲಾಗಿದೆ ಎಂಬ ಆರೋಪವನ್ನು ಕಾಂಗ್ರೆಸ್ ಮಾಡುತ್ತಾ ಬಂದಿದೆ. ಇದೀಗ ಶಿರಾದ ಚುನಾವಣಾ ಹೊಣೆಗಾರಿಕೆಯನ್ನು ಬಿಎಸ್‌ವೈ ಸೂಚನೆಯಂತೆ ಬಿವೈ ವಿಜಯೇಂದ್ರ ಹೊತ್ತುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಪರವಾಗಿ ವಿಜಯೇಂದ್ರ ರಣತಂತ್ರ ರೂಪಿಸುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಶಿರಾದಲ್ಲಿ ಹಣದ ಹೊಳೆ ಹರಿಸಲಾಗುತ್ತಿದೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್‌ ಆರೋಪ ಮಾಡುತ್ತಿದೆ. ಅದರ ಮುಂದುವರಿದ ಭಾಗವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿವೈ ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ