ಆ್ಯಪ್ನಗರ

ಸನ್ನಿವೇಶದ ಒತ್ತಡದಿಂದ ಸ್ಪರ್ಧೆ

ಪಟ್ಟಣದ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌-ಜೆಡಿಎಸ್‌ ಪಕ್ಷ ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ದೇವೇಗೌಡರು, ಸನ್ನಿವೇಶದ ಒತ್ತಡದಿಂದ ತುಮಕೂರು ...

Vijaya Karnataka 11 Apr 2019, 5:00 am
ಚಿಕ್ಕನಾಯಕನಹಳ್ಳಿ:
Vijaya Karnataka Web contest by the pressure of the situation
ಸನ್ನಿವೇಶದ ಒತ್ತಡದಿಂದ ಸ್ಪರ್ಧೆ

ಪಟ್ಟಣದ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌-ಜೆಡಿಎಸ್‌ ಪಕ್ಷ ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ದೇವೇಗೌಡರು, ಸನ್ನಿವೇಶದ ಒತ್ತಡದಿಂದ ತುಮಕೂರು ಲೋಕಸಭಾ ಚುನಾವಣೆಗೆ ನಿಲ್ಲಬೇಕಾಗಿ ಬಂತು. ನಾನು ಚುನಾವಣೆಯಲ್ಲಿ ಗೆದ್ದರೆ ಕುಡಿಯುವ ನೀರಿಗೆ ಆದ್ಯತೆ ನೀಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದರು.

ಸಿದ್ದರಾಮಯ್ಯ ಮಾತನಾಡಿ, ನಮ್ಮ ರಾಜಕೀಯ ವೈರಿ ಜೆಡಿಎಸ್‌ ಅಲ್ಲ. ಬಿಜೆಪಿ, ಆರ್‌.ಎಸ್‌.ಎಸ್‌, ಎಬಿವಿಪಿ ಮತ್ತು ಸಂಘ ಪರಿವಾರದವರು. ಇವರೆಲ್ಲಾ ಅಹಿಂದ ವಿರೋಧಿಗಳು ಎಂಬ ದೃಷ್ಟಿಯಿಂದ ನಾವು ಮೈತ್ರಿಯಾಗಿರುವುದು. ಕೋಮುವಾದಿ ಪಕ್ಷ ಬಿಜೆಪಿಯನ್ನು ದೂರವಿಡಲು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಒಂದಾಗಿವೆ ಎಂದು ಹೇಳಿದರು.

ಡಿಸಿಎಂ ಡಾ.ಜಿ.ಪರಮೇಶ್ವರ್‌, ಸಚಿವರಾದ ಪುಟ್ಟರಂಗಶೆಟ್ಟಿ, ಮಾಜಿ ಸಚಿವ ಟಿ.ಬಿ.ಜಯಚಂದ್ರ ಸೇರಿದಂತೆ ಉಭಯ ಪಕ್ಷಗಳ ಅನೇಕ ಧುರೀಣರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ