ಆ್ಯಪ್ನಗರ

ಕಾಂಗ್ರೆಸ್‌ನಲ್ಲಿ ಮನೆ ಒಂದು ಮೂರು ಬಾಗಿಲು! ಇದು ಲಕ್ಷ್ಮಣ ಸವದಿ ವ್ಯಾಖ್ಯಾನ

ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ವ್ಯಾಪಕವಾಗಿದ್ದು ಮನೆ ಒಂದು ಮೂರು ಬಾಗಿಲು ಎಂಬ ಪರಿಸ್ಥಿತಿ ಇದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಈ ಮೂರು ಬಾಗಿಲು ಯಾರದ್ದೆಲ್ಲಾ ಎಂದೂ ಅವರು ವಿವರಣೆ ನೀಡಿದ್ದಾರೆ.

Vijaya Karnataka Web 23 Oct 2020, 2:28 pm
ತುಮಕೂರು: ಕಾಂಗ್ರೆಸ್‌ನಲ್ಲಿ ಮನೆ ಒಂದು ಮೂರು ಬಾಗಿಲು ಎಂಬ ವಾತಾವರಣ ಇದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವ್ಯಾಖ್ಯಾನ ಮಾಡಿದ್ದಾರೆ. ತುಮಕೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆ ಇದೆ ಎಂದರು.
Vijaya Karnataka Web Laxman Savadi


ರಾಜ್ಯ ಕಾಂಗ್ರೆಸ್‌ನಲ್ಲಿ ಒಟ್ಟು ಮೂರು ಬಾಗಿಲುಗಳಿವೆ ಒಂದು ಮಲ್ಲಿಕಾರ್ಜುನ ಖರ್ಗೆ ಬಾಗಿಲು, ಮತ್ತೊಂದು ಡಿಕೆ ಶಿವಕುಮಾರ್‌ ಹಾಗೂ ಮತ್ತೊಂದು ಬಾಗಿಲು ಸಿದ್ದರಾಮಯ್ಯ ಅವರದ್ದು ಎಂದು ಲೇವಡಿ ಮಾಡಿದರು.

ಕೊರೊನಾ ನೆಪದಲ್ಲಿ 10 ಸಾವಿರ ಕೋಟಿಯ ಬೃಹತ್ ಹಗರಣ: ಆಮ್ ಆದ್ಮಿ ಪಕ್ಷ ಆರೋಪ

ಇನ್ನು ಸಿಎಂ ಸ್ಥಾನದಲ್ಲಿ ಬಿಎಸ್ ಯಡಿಯೂರಪ್ಪ ಹೆಚ್ಚು ಅವಧಿ ಮುಂದುವರಿಯಲ್ಲ ಎಂಬ ಶಾಸಕ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್ ಹೇಳಿಕೆ ಅವರ ವೈಯಕ್ತಿಕ ಹೇಳಿಕೆಯಾಗಿದೆ. ಪಕ್ಷದ ಆಂತರಿಕವಾಗಿ ಇದರ ಬಗ್ಗೆ ಚರ್ಚೆ ನಡೆಯಲಿದೆ ಎಂದರು. ಮುಂದಿನ ಮೂರು ವರ್ಷದವರಿಗೆ ಬಿಎಸ್‌ವೈ ಸಿಎಂ ಆಗಿ ಮುಂದುವರಿಯುತ್ತಾರೆ. ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದೇನೆ ಎಂದು ಪೂರ್ಣ ಉತ್ತರ ನೀಡದೆ ಜಾರಿಕೊಂಡರು.

ವಿಧಾನಪರಿಷತ್ ನಾಲ್ಕು ಸ್ಥಾನಗಳು ಹಾಗೂ ಶಿರಾ, ಆರ್‌ ಆರ್‌ ನಗರ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ಕೇಂದ್ರ ಸರ್ಕಾರದ ಉತ್ತಮ ಆಡಳಿತ, ರೈತ ಪರ ಯೋಜನೆಗಳು, ಹಿಂದುಳಿದವರ, ಅಲ್ಪಸಂಖ್ಯಾತರ ಅಭಿವೃದ್ದಿಗೆ ಹಲವು ಕಾರ್ಯಕ್ರಮ ಒಳಗೊಂಡಂತೆ ರಾಜ್ಯ ಬಿಎಸ್‌ವೈ ಸರ್ಕಾರವೂ ಅನೇಕ ಯೋಜನೆಗಳನ್ನು ನೀಡಿದೆ.

ರಾಜ್ಯದಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಐದು ಲಕ್ಷ ಪರಿಹಾರ ನೀಡಿ ಮನೆ ಕಟ್ಟಿಸಿಕೊಡಲಾಗಿದೆ. ಬೆಳೆ ನಾಶವಾದವರಿಗೆ ಸೂಕ್ತ ಪರಿಹಾರ ನೀಡಲಾಗಿದೆ. ರೈತರ ಹಿತ ಕಾಪಾಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ಮತದಾರರು ಬಿಜೆಪಿ ಕೈ ಹಿಡಿಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎದುರಾಳಿ ನಮ್ಮ ಸರಿಸಮನಾಗಿದ್ದರೆ ಮಾತ್ರ ಯುದ್ಧ! ಮುನಿರತ್ನಗೆ ಡಿಕೆಶಿ ಟಾಂಗ್

ರಾಜ್ಯದಲ್ಲಿ ಹಣಕಾಸಿನ ಕೊರತೆ ಇಲ್ಲ, ಜಾರಿಗೊಂಡ ಯೋಜನೆಗಳಿಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಕೋವಿಡ್‌ನಿಂದ ದೇಶದ ಎಲ್ಲಾ ರಾಜ್ಯಗಳಲ್ಲಿ ಹಣಕಾಸಿನ ತೊಂದರೆ ಆಗಿದೆ. ಕೇಂದ್ರದ ಅನುದಾನ ವಿಳಂಬ ಆಗಿರುವುದರಿಂದ ಸ್ವಲ್ಪ ಸಮಸ್ಯೆ ಆಗಿದೆ ಎಂದು ತಿಳಿಸಿದರು.

ಕೋವಿಡ್‌ ಕಾರಣದಿಂದ ಸಾರಿಗೆ ಇಲಾಖೆಯಲ್ಲಿ ಸಂಬಳ ನೀಡಲು ಹಣ ಇರಲಿಲ್ಲ. ಪ್ರತಿನಿತ್ಯ ಸಾರಿಗೆ ಇಲಾಖೆಯ ನಾಲ್ಕು ನಿಗದಲ್ಲಿ 2 ಕೋಟಿ ಸಂಚಾರ ಮಾಡುತ್ತಿದ್ದರು. ಇವತ್ತು ಕೇವಲ 30 ಶೇಕಡಾ ಪ್ರಯಾಣ ಮಾತ್ರವಿದೆ. ಇದರಿಂದ ಸಂಬಳ ಕೊಡಲಿಕ್ಕೆ ಹಣ ಇಲ್ಲ. ಆರು ತಿಂಗಳ ಸರ್ಕಾರದ ನೆರವಿನಿಂದ ವೇತನ ಪಾವತಿ ಮಾಡಲಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ