ಆ್ಯಪ್ನಗರ

ತುಮಕೂರು ಬಳಿ ಭೀಕರ ಅಪಘಾತ: ಮೂವರ ದುರ್ಮರಣ

ಗುರುವಾರ ತಡರಾತ್ರಿ ಅಪರಿಚಿತ ವಾಹನವೊಂದು ಸ್ವೀಫ್ಟ್ ಕಾರ್‌ಗೆ ಡಿಕ್ಕಿ ಹೊಡೆದಿದ್ದು, ಕಾರ್‌ನಲ್ಲಿದ್ದ ನಾಲ್ವರ ಪೈಕಿ ಮೂವರು ಸಾವನ್ನಪ್ಪಿದ್ದಾರೆ.

Vijaya Karnataka Web 7 Dec 2018, 10:05 am
ತುಮಕೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ತಿಪುಟೂರಿನ ಮಾದಿಹಳ್ಳಿ ಸಮೀಪದ ಬನ್ಸಾಲಿ ಡಾಬಾ ಬಳಿ ನಡೆದಿದೆ.
Vijaya Karnataka Web t


ಗುರುವಾರ ತಡರಾತ್ರಿ ಅಪರಿಚಿತ ವಾಹನವೊಂದು ಸ್ವೀಫ್ಟ್ ಕಾರ್‌ಗೆ ಡಿಕ್ಕಿ ಹೊಡೆದಿದ್ದು, ಕಾರ್‌ನಲ್ಲಿದ್ದ ನಾಲ್ವರ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಿರೀಶ್ (23), ಯೋಗಿಶ್ (25) ಮತ್ತು ಪ್ರವೀಣ್ (24) ಮೃತ ದುರ್ದೈವಿಗಳು. ಮೃತರೆಲ್ಲರು ಭದ್ರಾವತಿ ಮೂಲದವರು ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ತಿಪಟೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತಿಪಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ