ಆ್ಯಪ್ನಗರ

ಇಸ್ರೇಲ್‌ ಮಾದರಿ, ತಂತ್ರಾಜ್ಞಾನ ಆಧಾರಿತ ಕೃಷಿ ಅರಿವು ಮೂಡಿಸಿ

ಇಸ್ರೇಲ್‌ ಮಾದರಿ ಕೃಷಿ ಸೇರಿದಂತೆ ತಂತ್ರಜ್ಞಾನ ಆಧಾರಿತ ಹಾಗೂ ಕಡಿಮೆ ನೀರಿನ ಪ್ರಮಾಣದಲ್ಲಿ ರೈತರಿಗೆ ಹೆಚ್ಚು ಲಾಭ ನೀಡುವಂತಹ ಕೃಷಿ ಬೆಳೆಗಳ ಬಗ್ಗೆ ಪರಿಣಾಮಕಾರಿಯಾಗಿ ಅರಿವು ಮೂಡಿಸುವ ಮೂಲಕ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಮುಂದಾಗಬೇಕು ಎಂದು ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.

Vijaya Karnataka 28 Dec 2018, 5:00 am
ಸಿರಾ: ಇಸ್ರೇಲ್‌ ಮಾದರಿ ಕೃಷಿ ಸೇರಿದಂತೆ ತಂತ್ರಜ್ಞಾನ ಆಧಾರಿತ ಹಾಗೂ ಕಡಿಮೆ ನೀರಿನ ಪ್ರಮಾಣದಲ್ಲಿ ರೈತರಿಗೆ ಹೆಚ್ಚು ಲಾಭ ನೀಡುವಂತಹ ಕೃಷಿ ಬೆಳೆಗಳ ಬಗ್ಗೆ ಪರಿಣಾಮಕಾರಿಯಾಗಿ ಅರಿವು ಮೂಡಿಸುವ ಮೂಲಕ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಮುಂದಾಗಬೇಕು ಎಂದು ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.
Vijaya Karnataka Web develop israeli based technological based agricultural awareness
ಇಸ್ರೇಲ್‌ ಮಾದರಿ, ತಂತ್ರಾಜ್ಞಾನ ಆಧಾರಿತ ಕೃಷಿ ಅರಿವು ಮೂಡಿಸಿ


ಅವರು ತಾಲೂಕಿನ ಪಟ್ಟನಾಯಕನಹಳ್ಳಿಯ ಶ್ರೀ ಮಠದ ಪ್ರಾರ್ಥನ ಮಂದಿರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ 18ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಪೂರ್ವಬಾವಿ ಸಭೆಯ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಹತ್ತೂ ತಾಲೂಕುಗಳು ಬರಪೀಡಿತವಾಗಿವೆ. ಇಂತಹ ಸಂದರ್ಭದಲ್ಲಿ ರೈತನ ಆತ್ಮವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಕೃಷಿ ವಸ್ತು ಪ್ರದರ್ಶನ ರೈತನ ಕೃಷಿಯಲ್ಲಿ ಸಮಗ್ರ ಬದಲಾವಣೆ ತರುವ ಪ್ರಯತ್ನ ಮಾಡುತ್ತಿದೆ ಎಂದರು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಜಿಪಂ ಸಿಇಒ ಅನಿಸ್‌ ಕಣ್ಮಣಿ ಜಾಯ್‌, ಶ್ರೀ ಕ್ಷೇತ್ರ ಮತ್ತು ಜಿಪಂ ಸಹಯೋದಲ್ಲಿ ನಡೆಯುವ ಈ ಕೃಷಿ ಪ್ರದರ್ಶನ ವೀಕ್ಷ ಣೆಗೆ ಸಹಸ್ರಾರು ರೈತರು ಮತ್ತು ಮಹಿಳೆಯರು ಇಲ್ಲಿಗೆ ಆಗಮಿಸುತ್ತಾರೆ. ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಇಲಾಖೆಗಳು ಪ್ರಾತ್ಯಕ್ಷಿಕ ಬೆಳೆ ಮೂಲಕ ರೈತರಲ್ಲಿ ಅರಿವು ಮೂಡಿಸಿದರೆ ಇತರೆ ಇಲಾಖೆಗಳು ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚು ಒತ್ತು ನೀಡಿ ಮಳಿಗೆ ಮಾಡಬೇಕು. ಸಾಮಾಜಿಕ ನ್ಯಾಯ ಮತ್ತು ಮಹಿಳೆಯರ ಸಬಲೀಕರಣದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಹಿಳಾ ಸಮಾವೇಶದ ಮೂಲಕ ಜಾಗೃತಿ ಮೂಡಿಸಿ ವಸ್ತು ಪ್ರದರ್ಶನ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಜಿಪಂ ಅಧ್ಯಕ್ಷೆ ಲತಾ ರವಿಕುಮಾರ್‌ ಮಾತನಾಡಿ, ಆರೋಗ್ಯ ಇಲಾಖೆ ಬೃಹತ್‌ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿ ಗ್ರಾಮೀಣ ಪ್ರದೇಶದ ಬಡ ರೋಗಿಗಳ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಸೇವೆ ಮಾಡಬೇಕು. ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ, ಮಹಿಳೆಯರಿಗೆ ಕಾನೂನು ಅರಿವು ಶಿಬಿರ, ವಿದ್ಯಾರ್ಥಿಗಳಿಗೆ ವಿಜ್ಞಾನ ಶಿಬಿರ, ಪರಿಸರ ಸಂರಕ್ಷಿಸುವ ದೃಷ್ಟಿಯಿಂದ ಅರಣ್ಯ ಇಲಾಖೆ ಉಚಿತ ಸಸಿ ನೀಡುವಂತಹ ಕಾರ್ಯ ಮಾಡಬೇಕಿದೆ ಎಂದರು.

ಜಾತ್ರಾ ಮಹೋತ್ಸವ ಸಮಿತಿ ಸಂಚಾಲಕ ಎ.ಆರ್‌.ಶ್ರೀನಿವಾಸಯ್ಯ, ಜಿಪಂ ಯೋಜನಾಧಿಕಾರಿ ಮಾಂಕಾಳಪ್ಪ, ಜಿಪಂ ಸದಸ್ಯರಾದ ಎಸ್‌.ರಾಮಕೃಷ್ಣ, ಗಿರಿಜಮ್ಮ ಶ್ರೀರಂಗಯಾದವ್‌, ತಾಪಂ ಸದಸ್ಯ ಕೆ.ಎಂ.ಶ್ರೀನಿವಾಸ್‌, ನಾದೂರು ಗ್ರಾಪಂ ಅಧ್ಯಕ್ಷೆ ಕೆ.ಭಾಗ್ಯಲಕ್ಷ್ಮೀ ಚಂದ್ರಶೇಖರ್‌, ಡಿಡಿಪಿಐ ರವಿಶಂಕರ್‌ರೆಡ್ಡಿ, ಡಿವೈಎಸ್ಪಿ ವೆಂಕಟಸ್ವಾಮಿ, ಎಇಇಗಳಾದ ಗಂಗಾಧರ್‌, ಷಣ್ಮುಖಪ್ಪ, ಇಒ ಮೋಹನ್‌ಕುಮಾರ್‌, ಪಾಂಡುರಂಗಯ್ಯ, ಆಭಿಯಂತರ ನಾಗೇಂದ್ರಪ್ಪ, ರಂಗನಾಥ್‌ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ