ಆ್ಯಪ್ನಗರ

ಸಿದ್ಧಗಂಗಾ ಶ್ರೀಗಳಿಗೆ ಚಿಕಿತ್ಸೆ: ವೈದ್ಯರ ವಿಚಾರದಲ್ಲಿ ಧರ್ಮವನ್ನು ಎಳೆದು ತರಬೇಕೆ?

ಚಿಕಿತ್ಸೆ ಹಾಗೂ ಆಸ್ಪತ್ರೆ ವಿಷಯದಲ್ಲಿ ಅಲ್ಪಸಂಖ್ಯಾತರು ಅನ್ನೋ ಭೇದ ಭಾವವೇಕೆ ತರಬೇಕು ಎಂದು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಪ್ರಶ್ನಿಸಿದ್ದಾರೆ. ಸಿದ್ದಗಂಗಾ ಮಠದ ಡಾ.ಶಿವಕುಮಾರ್ ಸ್ವಾಮೀಜಿಗಳಿಗೆ ಶಸ್ತ್ರ ಚಿಕಿತ್ಸೆ ಮಾಡಿದವರು ಮಹಮ್ಮದ್‌ ರೇಲಾ ಓರ್ವ ಮುಸ್ಲಿಂ ವೈದ್ಯ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದರು.

Vijaya Karnataka Web 10 Dec 2018, 3:33 pm
ತುಮಕೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ದಾಖಲಾಗಿರುವ ರೇಲಾ ಆಸ್ಪತ್ರೆ ಕುರಿತು ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಠದ ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿ, ಚಿಕಿತ್ಸೆ ಹಾಗೂ ಆಸ್ಪತ್ರೆ ವಿಷಯದಲ್ಲಿ ಅಲ್ಪಸಂಖ್ಯಾತರು ಅನ್ನೋ ಭೇದ ಭಾವವೇಕೆ ತರಬೇಕು ಎಂದು ಪ್ರಶ್ನಿಸಿದ್ದಾರೆ.
Vijaya Karnataka Web swamy


ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ ಹಾಗೂ ಆಸ್ಪತ್ರೆಗಳಂತಹ ವಿಷಯದಲ್ಲಿ ಧರ್ಮ ಭೇದಭಾವ ತರುವುದು ಸೂಕ್ತವಲ್ಲ ಎಂದು ಕಿವಿಮಾತು ಹೇಳಿದರು.

ವಿದ್ಯೆ ಕೊಡುವ ಶಾಲೆ ಹಾಗೂ ಆರೋಗ್ಯ ನೀಡುವ ಆಸ್ಪತ್ರೆಗಳು ಎಲ್ಲರಿಗೂ ಸೇರಿರುವಂತದ್ದು. ಎಲ್ಲ ಆಸ್ಪತ್ರೆಗಳಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯಕ್ಕೆ ಸೇರಿರುವ ವೈದ್ಯರು ಇರುತ್ತಾರೆ. ಶ್ರೀಗಳಿಗೆ ಶಸ್ತ್ರ ಚಿಕಿತ್ಸೆ ಮಾಡಿರುವ ಮೊಹಮ್ಮದ್ ರೇಲಾ ಓರ್ವ ವೈದ್ಯರಷ್ಟೇ, ಅವರನ್ನು ವೈದ್ಯರಾಗಿಯೇ ನೋಡಿದ್ದೇವೆ ಹೊರತು ಬೇರೇನಿಲ್ಲ ಎಂದು ಕಿರಿಯ ಶ್ರೀಗಳು ತಿಳಿಸಿದ್ದಾರೆ.

ಸಚಿವ ಡಿಕೆಶಿ ಹೇಳಿದ್ದೇನು?

'ಸಿದ್ದಗಂಗಾ ಮಠದ ಡಾ.ಶಿವಕುಮಾರ್ ಸ್ವಾಮೀಜಿಗಳಿಗೆ ಶಸ್ತ್ರ ಚಿಕಿತ್ಸೆ ಮಾಡಿದವರು ಮಹಮ್ಮದ್‌ ರೇಲಾ ಓರ್ವ ಮುಸ್ಲಿಂ ವೈದ್ಯ' ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದು ವಿವಾದಕ್ಕೀಡಾಗಿದೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಹಮ್ಮದ್ ರೇಲಾ ಅವರು ಈ ಹಿಂದೆ 5 ವರ್ಷದ ಮಗುವಿಗೂ ಆಪರೇಶನ್ ಮಾಡಿದ್ದರು. ಈಗ 111 ವರ್ಷದ ಶ್ರೀಗಳಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ ಎಂದವರು ಹೇಳಿದರು.

'ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಿ ಹೇಳುತ್ತಿದ್ದೇನೆ. ರೇಲಾ ಅಂತಹ ಆಸ್ಪತ್ರೆಯನ್ನು ಎಲ್ಲಿಯೂ ನೋಡಿಲ್ಲ. ತುಂಬಾ ಒಳ್ಳೆಯ ಆಸ್ಪತ್ರೆ ಅದು. ಅಲ್ಲಿಯ ವೈದ್ಯರು ಶ್ರೀಗಳಿಗೆ ಸೂಕ್ತ ಚಿಕಿತ್ಸೆ ಕೊಟ್ಟು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಈಗ ಶ್ರೀಗಳು ಲವಲವಿಕೆಯಿಂದ ಇದ್ದಾರೆಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ