ಆ್ಯಪ್ನಗರ

ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಎಸ್‌. ಸುರೇಶ್‌ಕುಮಾರ್‌

ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಜಿಲ್ಲೆಯ ಎಲ್ಲಾಶಾಲೆಗಳ ಸಮಗ್ರ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದರು.

Vijaya Karnataka 20 Sep 2019, 3:39 pm
ಮಧುಗಿರಿ: ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಜಿಲ್ಲೆಯ ಎಲ್ಲಾಶಾಲೆಗಳ ಸಮಗ್ರ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದರು.
Vijaya Karnataka Web emphasis on quality education in schools sureshkumar
ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಎಸ್‌. ಸುರೇಶ್‌ಕುಮಾರ್‌


ಪಟ್ಟಣದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಗುರುವಾರ ಭೇಟಿ ನೀಡಿ ಅಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದ ಅವರು, ಗುಣಾತ್ಮಕ ಶಿಕ್ಷಣ ಸರಕಾರದ ಮುಖ್ಯ ಉದ್ದೇಶವಾಗಿದೆ ಮತ್ತು ಕರ್ನಾಟಕ ಪಬ್ಲಿಕ್‌ ಶಾಲೆಗಳು ಯಶಸ್ವಿಯಾಗಿದ್ದು ನಮ್ಮ ಮಕ್ಕಳು ಇಂಗ್ಲಿಷ್‌ ಕಲಿಯಬೇಕೆಂಬ ಭಾವನೆಯಿಂದ ಪೋಷಕರ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮ ಎರಡು ಭಾಷೆಗಳು ಇರುವುದರಿಂದ ಸಮಗ್ರವಾಗಿ ಚರ್ಚಿಸಬೇಕಿದೆ ಎಂದರು.

ನಮ್ಮ ಮಕ್ಕಳು ಉತ್ತಮ ಶಿಕ್ಷಣ ಕಲಿತು ಮೌಲ್ಯಾಧಾರಿತ ಶಿಕ್ಷಣವಂತರಾಗಬೇಕು. ರಾಜ್ಯದ 60ಕ್ಕೂ ಅಧಿಕ ಶಾಲೆಗಳಲ್ಲಿವಾಸ್ತವ್ಯ ಮಾಡುವ ಮೂಲಕ ಆಯಾ ಶಾಲೆಗಳ ಕುಂದುಕೊರತೆಗಳ ಮಾಹಿತಿ ಕಲೆ ಹಾಕುತ್ತಿದ್ದೇನೆ. ಜತೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಸಮಯದಲ್ಲಿಭಯದ ವಾತಾವರಣ ನಿರ್ಮಾಣವಾಗುತ್ತಿದ್ದು, ಕೀಳುಭಾವನೆ ಹೋಗಲಾಡಿಸಲು ಆತ್ಮಸೈ್ಥರ್ಯ ಹಾಗೂ ಇದರ ಬಗ್ಗೆ ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಪಂ ಸಿಇಒ ಶುಭ ಕಲ್ಯಾಣ್‌, ಉಪವಿಭಾಗಾಧಿಕಾರಿ ಚಂದ್ರಶೇಖಯ್ಯ, ಡಿವೈಪಿಸಿ ರಾಜಕುಮಾರ್‌, ಡಿಡಿಪಿಐ ರವಿಶಂಕರ್‌ ರೆಡ್ಡಿ, ತಹಸೀಲ್ದಾರ್‌ ನಂದೀಶ್‌, ಬಿಇಒ ರಂಗಪ್ಪ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ