ಆ್ಯಪ್ನಗರ

ಕಾಂಗ್ರೆಸ್‌ಗೆ ತೊಂದರೆ ಮಾಡಲು ಬಿಜೆಪಿ- ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ: ಜಿ. ಪರಮೇಶ್ವರ್

ಎಲ್ಲಾ 25 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಹಾಕಿಲ್ಲದೆ ಇರುವುದು. ಅಭ್ಯರ್ಥಿಗಳನ್ನು ಹಾಕಿಲ್ಲ ಅಂದ್ರೆ ಇನ್ ಡೈರೆಕ್ಟ್ ಆಗಿ ಬೆಂಬಲಿಸಿ ಅಂತ ಹೇಳ್ತಾ ಇರೋದು ನಮಗೆ ಕಾಣಿಸುತ್ತಿದೆ. ಉದ್ದೇಶಪೂರ್ವಕವಾಗಿ ಈ ರೀತಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ಸಿಗೆ ತೊಂದರೆ ಮಾಡಬೇಕು ಅಂತಲೇ ಈ ಅವರು ಈ ರೀತಿ ಮಾಡಿದ್ದಾರೆ. ಹಾಗಾಗಿ ಜೆಡಿಎಸ್ ನವರು ಬಿಜೆಪಿಗೆ ಸಹಕಾರ ಮಾಡುತ್ತಿದ್ದಾರೆ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.

guest Basalingappa-Navani | Lipi 28 Nov 2021, 12:39 pm
ತುಮಕೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತೊಂದರೆ ಮಾಡುವ ಉದ್ದೇಶದಿಂದಲೇ ಬಿಜೆಪಿ- ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ. ಈ ಬಗ್ಗೆ ನಾವು ಮೊದಲಿಂದಲಲು ಹೇಳಿಕೊಂಡು ಬರುತ್ತಿದ್ದೇವೆ ಎಂದು ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
Vijaya Karnataka Web dr g parameshwar


ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಬಿಜೆಪಿ- ಜೆಡಿಎಸ್ ಒಳ ಒಪ್ಪಂದ ಬಗ್ಗೆ ಮಾತನಾಡಿದ ಜಿ.ಪರಮೇಶ್ವರ್, ಈ ಬಗ್ಗೆ ನಾವು ಮೊದಲಿನಿಂದ ಹೇಳುತ್ತಿದ್ದೇವೆ. ಕಾಂಗ್ರೆಸ್‌ಗೆ ತೊಂದರೆ ಮಾಡಬೇಕು ಅಂತಲೇ ಅವರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಅದಕ್ಕೆ ಸಾಕ್ಷಿ ಇವತ್ತು ಎಲ್ಲಾ 25 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಹಾಕಿಲ್ಲದೆ ಇರುವುದು. ಅಭ್ಯರ್ಥಿಗಳನ್ನು ಹಾಕಿಲ್ಲ ಅಂದ್ರೆ ಇನ್ ಡೈರೆಕ್ಟ್ ಆಗಿ ಬೆಂಬಲಿಸಿ ಅಂತ ಹೇಳ್ತಾ ಇರೋದು ನಮಗೆ ಕಾಣಿಸುತ್ತಿದೆ. ಉದ್ದೇಶಪೂರ್ವಕವಾಗಿ ಈ ರೀತಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ಸಿಗೆ ತೊಂದರೆ ಮಾಡಬೇಕು ಅಂತಲೇ ಈ ಅವರು ಈ ರೀತಿ ಮಾಡಿದ್ದಾರೆ. ಹಾಗಾಗಿ ಜೆಡಿಎಸ್ ನವರು ಬಿಜೆಪಿಗೆ ಸಹಕಾರ ಮಾಡುತ್ತಿದ್ದಾರೆ ಎಂದಿದ್ದಾರೆ.
ಎಲ್ಲಾ ಕಡೆಯೂ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಇನ್ನು, ಬಿಟ್ ಕಾಯಿನ್ ತನಿಖೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್, ಈ ಪ್ರಕರಣದ ತನಿಖೆ ಮುಂದುವರಿಸಬೇಕು. ಮೇಲಾಗಿ ನ್ಯಾಯಾಧೀಶರೆ ಅದರ ನೇತೃತ್ವವನ್ನು ವಹಿಸಬೇಕು ಎಂದು ಒತ್ತಾಯ ಮಾಡಿದ್ದಾರೆ. ಆದರೆ, ಅದನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾವ ರೀತಿ ತೆಗೆದುಕೊಳ್ಳುತ್ತದೆ ನೋಡಬೇಕು. ಯಾಕೆಂದರೆ ಇದರಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ವಿಚಾರಗಳಿವೆ. ಯಾರು ಇದರಲ್ಲಿ ತಪ್ಪು ಮಾಡಿದ್ದಾರೆ. ಅವರಿಗೆ ಕಾನೂನು ರೀತಿ ಕ್ರಮ ಕೈಗೊಳ್ಳುವ ಕೆಲಸವನ್ನ ರಾಜ್ಯ ಸರ್ಕಾರ ಮಾಡಬೇಕು ಎಂದು ಹೇಳಿದ್ದಾರೆ.
ಮಾನ ಮರ್ಯಾದೆ ಇರೋರು ಮಾಡೋ ಕೆಲಸನಾ ಇದು? ಪರಮೇಶ್ವರ್ ವಿರುದ್ಧ ಮಾಧುಸ್ವಾಮಿ ಗರಂ
ಅಲ್ಲದೇ, ರಾಜ್ಯ ಸರ್ಕಾರದ 40 ಪರ್ಸೆಂಟ್ ಕಮಿಷನ್ ವಿಚಾರದ ಬಗ್ಗೆ ಮಾತನಾಡಿದ ಪರಮೇಶ್ವರ್, ಹಿಂದೆ ನೀವು ನಮಗೆ 10% ಪರ್ಸೆಂಟ್ ಸರ್ಕಾರ ಅಂತ ಹೇಳುತ್ತಿದ್ದೀರಿ. ಈಗ ಅಧಿಕೃತವಾಗಿ ಸಂಘದವರು ಹೇಳುತ್ತಾರೆ ಅಂದರೆ, ವಿಚಾರ ಮಾಡಬೇಕಾದ ವಿಷಯ. ಈ ಬಗ್ಗೆ ಜನ ಸಮುದಾಯಕ್ಕೆ ಗೊತ್ತಾಗಬೇಕು. ಪ್ರತಿ ತಾಲೂಕು, ಜಿಲ್ಲೆ, ರಾಜ್ಯದಲ್ಲಿ ಕಂಟ್ರಾಕ್ಟರ್‌ಗಳಿದ್ದಾರೆ. ಅವರೆಲ್ಲ ಸರ್ಟಿಫೈಡ್ ಕಂಟ್ರಾಕ್ಟರುಗಳು. ನೋಂದಾಯಿತ ಕಂಟ್ರಾಕ್ಟರುಗಳ ಸಂಘದಿಂದ ಪ್ರಧಾನಮಂತ್ರಿಗೆ ಪತ್ರ ಬರೆದಿದ್ದಾರೆ. ಪ್ರಧಾನ ಮಂತ್ರಿಗಳಿಗೆ ಪತ್ರ ಬರೆಯುತ್ತಾರೆ ಅಂದ್ರೆ ಯೋಚನೆ ಮಾಡಿ. ಇದನ್ನ ಪ್ರಧಾನ ಮಂತ್ರಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯವನ್ನ ಜಿ.ಪರಮೇಶ್ವರ್ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ