ಆ್ಯಪ್ನಗರ

ಗೋ ರಕ್ಷಣೆ, ಲವ್‌ಜಿಹಾದ್‌ ವಿರುದ್ಧ ಹೋರಾಟ

ಹಿಂದೂ ಸಮಾಜದ ಉಳಿವಿಗಾಗಿ ಗೋ ರಕ್ಷಣೆ ಮತ್ತು ಲವ್‌ಜಿಹಾದ್‌ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ವಿಶ್ವ ಹಿಂದೂ ಪರಿಷತ್‌ ಭಜರಂಗದಳದ ರಾಜ್ಯ ಸಂಯೋಜಕ ಸೂರ್ಯನಾರಾಯಣ್‌ ತಿಳಿಸಿದರು.

Vijaya Karnataka 9 Jul 2018, 4:46 pm
ತುಮಕೂರು: ಹಿಂದೂ ಸಮಾಜದ ಉಳಿವಿಗಾಗಿ ಗೋ ರಕ್ಷಣೆ ಮತ್ತು ಲವ್‌ಜಿಹಾದ್‌ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ವಿಶ್ವ ಹಿಂದೂ ಪರಿಷತ್‌ ಭಜರಂಗದಳದ ರಾಜ್ಯ ಸಂಯೋಜಕ ಸೂರ್ಯನಾರಾಯಣ್‌ ತಿಳಿಸಿದರು.
Vijaya Karnataka Web fight against lovezahad
ಗೋ ರಕ್ಷಣೆ, ಲವ್‌ಜಿಹಾದ್‌ ವಿರುದ್ಧ ಹೋರಾಟ


ನಗರದ ಟೌನ್‌ಹಾಲ್‌ ವೃತ್ತದಲ್ಲಿ ಭಾನುವಾರ ವಿಶ್ವ ಹಿಂದೂ ಪರಿಷತ್‌ ಭಜರಂಗದಳದಿಂದ ನಡೆದ ಯುವಕ ಯುವತಿಯರ ಯುವ ಹಿಂದೂ ಶೋಭಾಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೂ ಧರ್ಮದ ಬೆಳವಣಿಗೆಗಾಗಿ ಹಿಂದೂ ಯುವಕರು ಜಾಗೃತರಾಗಬೇಕು ಎಂದು ಹೇಳಿದರು.

ರಾಜಕಾರಣಿಗಳು ತಮ್ಮ ಸ್ವ ಹಿತಾಸಕ್ತಿ, ರಾಜಕಾರಣಕ್ಕಾಗಿ ಧರ್ಮಗಳ ನಡುವೆ ಒಡಕು ಮೂಡಿಸುತ್ತಿದ್ದಾರೆ. ಇಂತಹ ರಾಜಕಾರಣವನ್ನು ತೊಲಗಿಸಲು ಭಜರಂಗದಳ ಮುಂದಾಗಬೇಕು. ಭಜರಂಗದಳ ಎನ್ನುವುದು ಕೇವಲ ಒಂದು ಧರ್ಮಕ್ಕೆ ಮಾತ್ರ ಸೀಮಿತವಲ್ಲ. ದೇಶದ್ರೋಹಿಗಳನ್ನು ಸದೆಬಡಿಯುವ, ಅವರ ವಿರುದ್ಧ ಹೋರಾಡುವುದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸಂಚಾಲಕ ಚಂದ್ರಶೇಖರ್‌ ಮಾತನಾಡಿ, ಹಿಂದೂ ಧರ್ಮದ ಪ್ರತಿಯೊಂದು ಮನೆಯಲ್ಲಿಯೂ ಭಜರಂಗದಳದ ಕಾರ್ಯಕರ್ತರು ಹುಟ್ಟಬೇಕು. ಆ ಮೂಲಕ ಹಿಂದೂ ಧರ್ಮದ ರಕ್ಷಣೆಗಾಗಿ, ಏಳ್ಗೆಗಾಗಿ ಮುಂದಾಗಬೇಕು ಎಂದು ಹೇಳಿದರು.

ಅದ್ಧೂರಿ ಶೋಭಾಯಾತ್ರೆ; ನಗರದಲ್ಲಿ ಭಜರಂಗ ದಳದ ವತಿಯಿಂದ ಯುವ ಹಿಂದೂ ಯುವಕ ಯುವತಿಯರ ಶೋಭಾ ಯಾತ್ರೆಯು ಅದ್ಧೂರಿಯಾಗಿ ನಡೆಯಿತು.

ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶಾಸಕ ಜ್ಯೋತಿ ಗಣೇಶ್‌, ಮಾಜಿ ಶಾಸಕ ಸೊಗಡು ಶಿವಣ್ಣ ಸೇರಿದಂತೆ ವಿಶ್ವ ಹಿಂದೂ ಪರಿಷತ್‌ನ ಪ್ರಮುಖರು ಹನುಮಾನ್‌ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶೋಭಾ ಯಾತ್ರೆಗೆ ಚಾಲನೆ ನೀಡಿದರು.

ಕೇಸರಿ ಬಣ್ಣದ ಧ್ವಜಗಳನ್ನು ಹಿಡಿದ ಸಾವಿರಾರು ಭಜರಂಗದಳದ ಕಾರ್ಯಕರ್ತರು ಜೈ ಹನುಮಾನ್‌ ಎಂದು ಘೋಷಣೆಗಳನ್ನು ಕೂಗುತ್ತಾ ಶೋಭಾಯಾತ್ರೆಯಲ್ಲಿ ಪಾಲ್ಗೊಂಡು ಎಲ್ಲರ ಗಮನ ಸೆಳೆದರು. ಶೋಭಾ ಯಾತ್ರೆಯು ಬಿ.ಹೆಚ್‌.ರಸ್ತೆ, ಎಂ.ಜಿ.ರಸ್ತೆ, ಗುಂಚಿ ವೃತ್ತ, ಸೇರಿದಂತೆ ವಿವಿಧ ರಸ್ತೆಗಳಲ್ಲಿ ಸಾಗಿತು. ನಂತರ ಟೌನ್‌ಹಾಲ್‌ ವೃತ್ತದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಮಾವೇಶಗೊಂಡಿತು.

ಎಸ್ಪಿ ಡಾ.ದಿವ್ಯಾ ಗೋಪಿನಾಥ್‌ ಸೇರಿದಂತೆ ಪೊಲೀಸ್‌ ಅಧಿಕಾರಿಗಳು ಶೋಭಾಯಾತ್ರೆಯಲ್ಲಿ ಯಾವುದೇ ಅಹಿತರ ಘಟನೆ ನಡೆಯದಂತೆ ನಿಗಾ ವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ