ಆ್ಯಪ್ನಗರ

'ಜೆಡಿಎಸ್‌ ಕುಟುಂಬ ರಾಜಕಾರಣಕ್ಕೆ ಮತದಾರನ ಪಾಠ' : ಚಾಟಿ ಬೀಸಿದ ಸುರೇಶ್‌ ಗೌಡ

ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಹಾಗೂ ಮಂಡ್ಯದಿಂದ ನಿಖಿಲ್‌ ಕುಮಾರಸ್ವಾಮಿಯವರನ್ನು ಸೋಲಿಸಿ ಕುಟುಂಬ ರಾಜಕಾರಣಕ್ಕೆ ಮತದಾರರು ಕಡಿವಾಣ ಹಾಕಿದ್ದಾರೆ ಎಂದರು.

Vijaya Karnataka Web 12 Dec 2019, 6:36 pm
ತುಮಕೂರು: ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ನಿಖಿಲ್‌ ಕುಮಾರಸ್ವಾಮಿಯನ್ನು ಮತದಾರರು ಸೋಲಿಸುವ ಮೂಲಕ ಕುಟುಂಬ ರಾಜಕಾರಣ ಮಾಡುವವರಿಗೆ ಬುದ್ಧಿ ಕಲಿಸಿದ್ದಾರೆ ಎಂದು ಮಾಜಿ ಶಾಸಕ ಬಿ.ಸುರೇಶ್‌ಗೌಡ ತಿಳಿಸಿದರು.
Vijaya Karnataka Web ಜೆಡಿಎಸ್‌ ಕುಟುಂಬ ರಾಜಕಾರಣಕ್ಕೆ ಮತದಾರನ ಪಾಠ : ಚಾಟಿ ಬೀಸಿದ ಸುರೇಶ್‌ ಗೌಡ

ತುಮಕೂರಿನ ಕನ್ನಡ ಭವನದಲ್ಲಿ ಗುರುವಾರ ತುಮಕೂರು ಗ್ರಾಮಾಂತರ ಬಿಜೆಪಿ ಮಂಡಲದ ಅಧ್ಯಕ್ಷರ ಆಯ್ಕೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ರಾಜ್ಯ ರಾಜಕಾರಣದಲ್ಲಿ ಅನೇಕ ರೀತಿಯ ಬದಲಾವಣೆಗಳು ನಡೆಯುತ್ತಿವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಹಾಗೂ ಮಂಡ್ಯದಿಂದ ನಿಖಿಲ್‌ ಕುಮಾರಸ್ವಾಮಿಯವರನ್ನು ಸೋಲಿಸಿ ಕುಟುಂಬ ರಾಜಕಾರಣಕ್ಕೆ ಮತದಾರರು ಕಡಿವಾಣ ಹಾಕಿದ್ದಾರೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ದೇವೇಗೌಡ ಹಾಗೂ ಅವರ ಮೊಮ್ಮಗ ನಿಖಿಲ್‌ ಕುಮಾರಸ್ವಾಮಿಯವರನ್ನು ಸೋಲಿಸಿದ ಬಳಿಕ, ಕಿತ್ತಾಟದ ಮಧ್ಯೆಯೂ ಮೈತ್ರಿ ಸರಕಾರದಲ್ಲಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದ ಹೆಚ್‌.ಡಿ ಕುಮಾರಸ್ವಾಮಿಯವರನ್ನು ಕೂಡಾ ಮತದಾರರು ಕೆಳಗಿಳಿಸಿದರು. ಎಲ್ಲೋ ಒಂದು ಕಡೆ ಕುಟುಂಬದವರೇ ರಾಜಕಾರಣದಲ್ಲಿ ಮುಂದೆ ಬರಲಿ ಎಂದು ಭಾವಿಸಿದ್ದ ದೇವೇಗೌಡರ ಕುಟುಂಬಕ್ಕೆ ರಾಜ್ಯದ ಜನರು ಬುದ್ದಿ ಕಲಿಸಿದ್ದಾರೆ ಎಂದು ಸುರೇಶ್‌ ಗೌಡ ಹೇಳಿದರು.

ಬಿಜೆಪಿಯ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಜಿ. ಬಿ. ಜ್ಯೋತಿ ಗಣೇಶ್‌ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಮತಗಳನ್ನು ತಂದುಕೊಡುವಲ್ಲಿ ತುಮಕೂರು ನಗರ ಮೊದಲನೇಯ ಸ್ಥಾನ ಹಾಗೂ ಗ್ರಾಮಾಂತರ ಎರಡನೇಯ ಸ್ಥಾನದಲ್ಲಿದೆ. ಇದೇ ರೀತಿಯಾಗಿ ಬಿಜೆಪಿ ಪಕ್ಷದ ಬೆಳವಣಿಗೆಗೆ ಗ್ರಾಮ ಪಂಚಾಯಿತಿ, ಬೂತ್‌, ಹೋಬಳಿ ಮಟ್ಟದಿಂದ ಬಲಪಡಿಸಬೇಕೆಂದು ಕರೆ ನೀಡಿದರು.

ವಿಡಿಯೋ: ಮಾಜಿ ಸಿಎಂ ಕುಮಾರಸ್ವಾಮಿಗೆ ಡಿಸಿಎಂ ಅಶ್ವಥ್ ನಾರಾಯಣ್ ಟಾಂಗ್..!
ಕಾರ್ಯಕರ್ತರ ಗೊಂದಲದಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುರೇಶ್‌ಗೌಡರವರು ಗೆಲ್ಲುವ ಸನ್ನಿವೇಶ ಇದ್ದರೂ, ಸೋಲನ್ನು ಕಂಡರು. ಆದರೆ ಇದೀಗ ಬಿಜೆಪಿ ಬಿಟ್ಟು ಜೆಡಿಎಸ್‌ಗೆ ಹೋದ ಹಲವಾರು ಕಾರ್ಯಕರ್ತರು ಮತ್ತೆ ಬಿಜೆಪಿಗೆ ವಾಪಾಸ್‌ ಬಂದಿದ್ದಾರೆ ಎಂದು ಜ್ಯೋತಿ ಗಣೇಶ್ ಹೇಳಿದರು.

'ಅಂದು ಅವರಿಗೆ ಅಧಿಕಾರ ಇಂದು ನಮಗೆ, ಮನೆ ಮಗನಾಗಿ ಕೆಲಸ ಮಾಡ್ತೇನೆ'! ಎಚ್ಡಿಕೆಗೆ ಅಶ್ವಥ್ ಟಾಂಗ್

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ