ಆ್ಯಪ್ನಗರ

ಕೆ.ಷಡಕ್ಷರಿಗೆ ಸಚಿವ ಸ್ಥಾನ ನೀಡಿ: ಮಠಾಧೀಶರು

ತಿಪಟೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಸುಮಾರು 25 ಕ್ಕೂ ಹೆಚ್ಚು ಮಠಾಧೀಶರು ಒತ್ತಾಯಿಸಿದ್ದಾರೆ.

ವಿಕ ಸುದ್ದಿಲೋಕ 27 Jan 2017, 2:32 pm
ತಿಪಟೂರು: ಮಾಜಿ ಸಚಿವ ಮಹಾದೇವ್ ಪ್ರಸಾದ್ ನಿಧನದಿಂದ ತೆರವಾದ ಸಚಿವ ಸ್ಥಾನಕ್ಕೆ ಲಾಬಿ ನಡೆಯುತ್ತಿದೆ. ತಿಪಟೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಸುಮಾರು 25 ಕ್ಕೂ ಹೆಚ್ಚು ಮಠಾಧೀಶರು ಒತ್ತಾಯಿಸಿದ್ದಾರೆ.
Vijaya Karnataka Web give minister post to mla shadakshari seers
ಕೆ.ಷಡಕ್ಷರಿಗೆ ಸಚಿವ ಸ್ಥಾನ ನೀಡಿ: ಮಠಾಧೀಶರು


ತಿಪಟೂರು ಷಡಕ್ಷರ ಮಠದ ರುದ್ರಮುನಿ ಸ್ವಾಮಿಜಿ ಮುಂದಾಳತ್ವದಲ್ಲಿ ಈ ಆಗ್ರಹ ಕೇಳಿ ಬಂದಿದೆ. ಹಳೆ ಮೈಸೂರು ಪ್ರಾಂತ್ಯದಲ್ಲಿ ಲಿಂಗಾಯಿತ ಸಮುದಾಯದ ನಾಯಕರಿಗೆ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದ್ದಾರೆ.

ರೇವಣಸಿದ್ದೇಶ್ವರ ಶಿವಾಚಾರ್ಯ ದೊಡ್ಡಗುಣಿ. ಚಿಕ್ಕಮಗಳೂರಿನ ಜಯಬಸವಾನಂದ ಸ್ವಾಮಿಜಿ, ಕೊಡಗಿನ ಕಲ್ನಠದ ಮಹಾಂತ ಸ್ವಾಮಿಜಿಗಳು ಸೇರಿ 25 ಲಿಂಗಾಯತ ಸ್ವಾಮಿಜಿಗಳು ಪತ್ರಿಕಾಗೋಷ್ಠಿ ನಡೆಸಿ ಈ ಬೇಡಿಕೆ ಮಂಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ