ಆ್ಯಪ್ನಗರ

ಕಮನೀಯ ಕ್ಷೇತ್ರದ ಜಾತ್ರೆ ದಿಢೀರ್‌ ರದ್ದು ಮಾಡಿದ ಮುಜುರಾಯಿ ಇಲಾಖೆ

ಬೆಂಗಳೂರು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಸುತ್ತೋಲೆಯಂತೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಕ್ಯಾಮೇನಹಳ್ಳಿ ಬ್ರಹ್ಮ ರಥೋತ್ಸವ ಸ್ಥಗಿತಗೊಳಿಸಿ ಕೊರಟಗೆರೆ ತಹಶೀಲ್ದಾರ್ ಆದೇಶಿಸಿದ್ದಾರೆ.

Agencies 16 Jan 2021, 3:20 pm
ಕೊರಟಗೆರೆ (ತುಮಕೂರು): ಕರುನಾಡಿನ ಸುಪ್ರಸಿದ್ದ ಪುಣ್ಯಕ್ಷೇತ್ರ ಕ್ಯಾಮೇನಹಳ್ಳಿಯ ಶ್ರೀಆಂಜನೇಯ ಸ್ವಾಮಿಯ ಧನಗಳ ಜಾತ್ರೆ ಮತ್ತು ಬ್ರಹ್ಮ ರಥೋತ್ಸವ ರದ್ದುಗೊಳಿಸಿ ಮುಜುರಾಯಿ ಇಲಾಖೆ ಶನಿವಾರ ಆದೇಶ ಮಾಡಿದೆ.
Vijaya Karnataka Web Koratagere Anjaneya


ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಕಮನೀಯ ಕ್ಷೇತ್ರವೆಂದೇ ಪ್ರಸಿದ್ದಿ ಪಡೆದಿರುವ ಆಂಜನೇಯ ಬ್ರಹ್ಮ ರಥೋತ್ಸವಕ್ಕೆ ಕೊರೊನಾ ರೋಗ ಅಡ್ಡಿಯಾಗಿದೆ.

ಬೆಂಗಳೂರು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಸುತ್ತೋಲೆಯಂತೆ ಕ್ಯಾಮೇನಹಳ್ಳಿ ಬ್ರಹ್ಮ ರಥೋತ್ಸವ ಸ್ಥಗಿತಗೊಳಿಸಿ ಕೊರಟಗೆರೆ ತಹಶೀಲ್ದಾರ್ ಗೋವಿಂದರಾಜು ಆದೇಶ ಮಾಡಿದ್ದಾರೆ.

ಜಾತ್ರೆಗೆ ರಾಸುಗಳ ಆಗಮನ

ಸಂಕ್ರಾಂತಿ ಹಬ್ಬದ ಮಾರನೇಯ ದಿನದಿಂದ ಪ್ರಾರಂಭ ಆಗುವ ಕ್ಯಾಮೇನಹಳ್ಳಿ ಧನಗಳ ಜಾತ್ರೆಗೆ ಈಗಾಗಲೇ ನೂರಾರು ಜೋಡಿ ರಾಸುಗಳ ಆಗಮನವಾಗಿ ಅರ್ಧದಷ್ಟು ಜಾತ್ರೆಯು ಕೂಡಿದೆ. ಮುಜರಾಯಿ ಇಲಾಖೆಯ ದಿಢೀರ್ ಆದೇಶದಿಂದ ರಾಜ್ಯ ಮತ್ತು ಹೊರರಾಜ್ಯದಿಂದ ಆಗಮಿಸಿರುವ ರೈತರಿಗೆ ಈಗ ಸಮಸ್ಯೆ ಎದುರಾಗಿದೆ.

ಕ್ಯಾಮೇನಹಳ್ಳಿ ಕ್ಷೇತ್ರದಲ್ಲಿ ಫೆ.17ರಿಂದ ಫೆ.28ರವರೇಗೆ ನಡೆಯಬೇಕಿದ್ದ ಶ್ರೀಆಂಜನೇಯ ದೇವರ ದನಗಳ ಜಾತ್ರೆ, ಬ್ರಹ್ಮ ರಥೋತ್ಸವ, ಅನ್ನ ಸಂತರ್ಪಣೆ, ದಾಸೋಹ ವ್ಯವಸ್ಥೆಯನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ.

ಕೋವಿಡ್ ನಿಯಮಾವಳಿ ಅನುಸರಿಸಿ ಪೂಜೆಯಲ್ಲಿ ಸೇವಾಕರ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ದೇಗುಲದಲ್ಲಿ ಧಾರ್ಮಿಕ ವಿಧಿ ವಿಧಾನ, ಪೂಜಾ ಕಾರ್ಯಕ್ರಮ, ಕಂದಾಯ ಇಲಾಖೆ ಸಿಬ್ಬಂದಿ ಒಳಗೊಂಡು 25ಜನ ಮೀರದಂತೆ ಉತ್ಸವ ಕಾರ್ಯಕ್ರಮಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ