ಕಡಬ: ಭೂಪರಿವರ್ತನೆಗೊಂಡ ಭೂಮಿಯ ಏಕ ವಿನ್ಯಾಸ ನಕ್ಷೆ, 9/11 ನೀಡಲು ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗೆ ಇದ್ದ ಅಧಿಕಾರವನ್ನು ಸರಕಾರ ಮೊಟಕುಗೊಳಿಸಿ, ಯೋಜನಾ ಪ್ರಾಧಿಕಾರಕ್ಕೆ ನೀಡಿತ್ತು. ಆದರೆ, ಈಗ ಈ ಆದೇಶವನ್ನು ರದ್ದುಪಡಿಸಿ ಮರು ಆದೇಶ ಹೊರಡಿಸಿದೆ. ಭೂ ನಕ್ಷೆ, 9/11 ನೀಡುವ ಅಧಿಕಾರ ಮತ್ತೆ ಗ್ರಾ.ಪಂ. ಮತ್ತು ತಾ.ಪಂ.ಗಳಿಗೆ ಸಿಕ್ಕಿದೆ. ತಿಂಗಳುಗಟ್ಟಲೆ ಜನ ಪರದಾಡಿದ ಬಳಿಕ ಭೂ ದಾಖಲೆಗಳನ್ನು ಸ್ಥಳೀಯ ಆಡಳಿತ ಸಂಸ್ಥೆಗಳಲ್ಲೇ ಪಡೆಯುವ ಅವಕಾಶ ಸಿಕ್ಕಿದೆ. ಅಂದಿನ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇ-ಸ್ವತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಭೂ ನಕ್ಷೆ ಮತ್ತು 9/11ರ ಅಧಿಕಾರವನ್ನು ಮತ್ತೆ ಸ್ಥಳೀಯಾಡಳಿತಗಳಿಗೆ ವಹಿಸುವಂತೆ ನಿರ್ಧರಿಸಲಾಗಿತ್ತು. ಅದರಂತೆ ಸರ್ಕಾರ ಆದೇಶ ಹೊರಡಿಸಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಕಾನೂನು, ನಗರಾಭಿವೃದ್ಧಿ, ಕಾರ್ಮಿಕ ಇಲಾಖೆ, ಪೌರಾಡಳಿತ ಖಾತೆಗಳ ಸಚಿವರು ಹಾಗೂ ಸರಕಾರದ ಕಾರ್ಯದರ್ಶಿ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ನಗರ ಪ್ರದೇಶಗಳಲ್ಲಿ ಸ್ಥಳೀಯ ಯೋಜನಾ ಪ್ರದೇಶದ ಹೊರಗೆ ಭೂ ಪರಿವರ್ತಿತ ಜಮೀನುಗಳಲ್ಲಿ ಹೊಸ ಬಡಾವಣೆ ಮಾಡಲು ವಿನ್ಯಾಸ (ಸ್ಕೆಚ್) ಅನುಮೋದನೆ ಪಡೆಯಲು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅನುಮತಿ ಪಡೆಯುವುದು ಅಗತ್ಯವಾಗಿದೆ ಎಂದು ಈ ಹಿಂದೆ ಸರಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಸರಕಾರ ರದ್ದು ಪಡಿಸಿದ್ದರೂ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಿಗೆ ರದ್ದು ಆದೇಶ ತಲುಪಿರಲಿಲ್ಲ. ಇದೀಗ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಅಪರ ಕಾರ್ಯದರ್ಶಿ, ಪಂಚಾಯತ್ರಾಜ್ ಆಯುಕ್ತರು ಹಾಗೂ ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಆದೇಶ ಹೊರಡಿಸಿ ಹಿಂದಿನತೆ ಗ್ರಾ.ಪಂ ತಾ.ಪಂ ಗಳಿಗೆ ಅಧಿಕಾರ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಉತ್ತರಕನ್ನಡ ಜಿಲ್ಲೆಗೆ ಅನ್ವಯವಾಗುವಂತೆ 2015ರ ಮಾ.19ರ ಸರಕಾರದ ಆದೇಶದಂತೆ ಸ್ಥಳೀಯ ಯೋಜನಾ ಪ್ರದೇಶದ ಹೊರಗೆ 0.25 ಎಕರೆ ವರೆಗೆ ಗ್ರಾಮ ಪಂಚಾಯಿತಿಯಲ್ಲೇ ಅನುಮೋದನೆ ಪಡೆಯಬಹುದು. 1ಎಕರೆವರೆಗಿನ ಭೂಮಿಗೆ ತಾಲೂಕು ಪಂಚಾಯಿತಿಯಲ್ಲಿ ಅಮುಮೋದನೆ ಪಡೆಯಬಹುದು. 1ಎಕರೆಗಿಂತ ಅಧಿಕ ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಾಗಿ ಏಕವಿನ್ಯಾಸ ಖಾತೆ ಅನುಮೋದನೆ ನೀಡುವ ಅಧಿಕಾರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಲಾಗಿತ್ತು. ಇದರಿಂದಾಗಿ ಆ ಭಾಗದ ಜನರಿಗೆ 9/11 ಖಾತೆ ಸುಲಭವಾಗಿ ಪಡೆಯಬಹುದಿತ್ತು.
ರಾಜ್ಯ ಸರಕಾರವು 2021ರ ಅಕ್ಟೋಬರ್ 7 ರಂದು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆಗೆ ತಿದ್ದುಪಡಿಗೊಳಿಸಿ, ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಯಾವುದೇ ಭೂಮಿಯ ಮೇಲೆ ಅಭಿವೃದ್ಧಿಯನ್ನು ಕೈಗೊಳ್ಳಲು ಅನುಮತಿಗಾಗಿ ಸ್ಥಳೀಯ ಪ್ರಾಧಿಕಾರಕ್ಕೆ ಲಿಖಿತ ಅರ್ಜಿ ಸಲ್ಲಿಸಬೇಕು. ಸ್ಥಳೀಯ ಪ್ರಾಧಿಕಾರವು ಅನುಮತಿ ನೀಡುವ ಮೊದಲು ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರ ಅಥವಾ ಅವರಿಂದ ಅಧಿಕೃತಗೊಂಡು ನಗರ ಯೋಜನೆ ಸಹಾಯಕ ನಿರ್ದೇಶಕರ ದರ್ಜೆಗೆ ಕಡಿಮೆಯಿಲ್ಲದ ಅಧೀನ ಅಧಿಕಾರಿಯ ಪೂರ್ವಾನುಮೋದನೆ ಪಡೆಯುವುದು ಅಗತ್ಯ ಎಂಬುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ2022ರ ಫೆಬ್ರವರಿ 28ರಿಂದ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗೆ ಏಕವಿನ್ಯಾಸ ಅನುಮೋದನೆ ನೀಡುವ ಅಧಿಕಾರವನ್ನು ಕಡಿತಗೊಳಿಸಿ ಗೊಂದಲ ಸೃಷ್ಠಿಯಾಗಿತ್ತು.
ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಕರಾವಳಿ ಭಾಗದ ಸಚಿವರು ಹಾಗೂ ಶಾಸಕರು ಸರಕಾರದ ಮೇಲೆ ಒತ್ತಡ ತಂದಿದ್ದರು. ಹೀಗಾಗಿ ಗ್ರಾಮೀಣಾಭಿವೃದ್ಧಿ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಿದ ಪ್ರಕಾರ ಸ್ಥಳೀಯ ಯೋಜನಾ ಪ್ರದೇಶದ ಹೊರಭಾಗದಲ್ಲಿದ್ದ ಭೂಪರಿವರ್ತೀತ ಜಮೀನುಗಳಲ್ಲಿ ಒಂದು ಎಕರೆ ಪ್ರದೇಶ ಮತ್ತು ಏಕನಿವೇಶನ ವಸತಿ/ವಸತಿಯೇತರ ಉದ್ದೇಶಗಳಿಗಾಗಿ ಭೂಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಗಾಗಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅನುಮೋದನೆ ಪಡೆಯುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯು 2022ರ ಫೆಬ್ರವರಿ 28 ರಂದು ಹೊರಡಿಸಿದ ಪತ್ರದ ಬಗ್ಗೆ ಸಭೆಯು ಚರ್ಚೆ ನಡೆಸಲಾಯಿತು.
ನಗರಾಭಿವೃದ್ಧಿ ಇಲಾಖೆಯು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮ,1960 ಕ್ಕೆ 2021ರ ಅಕ್ಟೋಬರ್ 7ರಂದು ತಿದ್ದುಪಡಿ ತಂದು ಪ್ರಕರಣ 4-ಕೆ ರಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶದಲ್ಲಿ ಭೂ ಅಭಿವೃದ್ಧಿಗಾಗಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ಅನುಮೋದನೆ ಪಡೆಯುವಂತೆ ತಿಳಿಸಿತ್ತು. ಈ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗೆ ಸೂಚಿಸಲಾಗಿತ್ತು. ಇದೀಗ ಆ ಆದೇಶ ಪ್ರತಿ ಸ್ಥಳೀಯಾಡಳಿತಗಳಿಗೆ ಸಿಕ್ಕಿದ್ದು ಸಮಸ್ಯೆ ಪರಿಹಾರವಾದಂತಾಗಿದೆ.
ನಗರ ಪ್ರದೇಶಗಳಲ್ಲಿ ಸ್ಥಳೀಯ ಯೋಜನಾ ಪ್ರದೇಶದ ಹೊರಗೆ ಭೂ ಪರಿವರ್ತಿತ ಜಮೀನುಗಳಲ್ಲಿ ಹೊಸ ಬಡಾವಣೆ ಮಾಡಲು ವಿನ್ಯಾಸ (ಸ್ಕೆಚ್) ಅನುಮೋದನೆ ಪಡೆಯಲು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅನುಮತಿ ಪಡೆಯುವುದು ಅಗತ್ಯವಾಗಿದೆ ಎಂದು ಈ ಹಿಂದೆ ಸರಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಸರಕಾರ ರದ್ದು ಪಡಿಸಿದ್ದರೂ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಿಗೆ ರದ್ದು ಆದೇಶ ತಲುಪಿರಲಿಲ್ಲ. ಇದೀಗ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಅಪರ ಕಾರ್ಯದರ್ಶಿ, ಪಂಚಾಯತ್ರಾಜ್ ಆಯುಕ್ತರು ಹಾಗೂ ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಆದೇಶ ಹೊರಡಿಸಿ ಹಿಂದಿನತೆ ಗ್ರಾ.ಪಂ ತಾ.ಪಂ ಗಳಿಗೆ ಅಧಿಕಾರ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಉತ್ತರಕನ್ನಡ ಜಿಲ್ಲೆಗೆ ಅನ್ವಯವಾಗುವಂತೆ 2015ರ ಮಾ.19ರ ಸರಕಾರದ ಆದೇಶದಂತೆ ಸ್ಥಳೀಯ ಯೋಜನಾ ಪ್ರದೇಶದ ಹೊರಗೆ 0.25 ಎಕರೆ ವರೆಗೆ ಗ್ರಾಮ ಪಂಚಾಯಿತಿಯಲ್ಲೇ ಅನುಮೋದನೆ ಪಡೆಯಬಹುದು. 1ಎಕರೆವರೆಗಿನ ಭೂಮಿಗೆ ತಾಲೂಕು ಪಂಚಾಯಿತಿಯಲ್ಲಿ ಅಮುಮೋದನೆ ಪಡೆಯಬಹುದು. 1ಎಕರೆಗಿಂತ ಅಧಿಕ ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಾಗಿ ಏಕವಿನ್ಯಾಸ ಖಾತೆ ಅನುಮೋದನೆ ನೀಡುವ ಅಧಿಕಾರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಲಾಗಿತ್ತು. ಇದರಿಂದಾಗಿ ಆ ಭಾಗದ ಜನರಿಗೆ 9/11 ಖಾತೆ ಸುಲಭವಾಗಿ ಪಡೆಯಬಹುದಿತ್ತು.
ರಾಜ್ಯ ಸರಕಾರವು 2021ರ ಅಕ್ಟೋಬರ್ 7 ರಂದು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆಗೆ ತಿದ್ದುಪಡಿಗೊಳಿಸಿ, ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಯಾವುದೇ ಭೂಮಿಯ ಮೇಲೆ ಅಭಿವೃದ್ಧಿಯನ್ನು ಕೈಗೊಳ್ಳಲು ಅನುಮತಿಗಾಗಿ ಸ್ಥಳೀಯ ಪ್ರಾಧಿಕಾರಕ್ಕೆ ಲಿಖಿತ ಅರ್ಜಿ ಸಲ್ಲಿಸಬೇಕು. ಸ್ಥಳೀಯ ಪ್ರಾಧಿಕಾರವು ಅನುಮತಿ ನೀಡುವ ಮೊದಲು ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರ ಅಥವಾ ಅವರಿಂದ ಅಧಿಕೃತಗೊಂಡು ನಗರ ಯೋಜನೆ ಸಹಾಯಕ ನಿರ್ದೇಶಕರ ದರ್ಜೆಗೆ ಕಡಿಮೆಯಿಲ್ಲದ ಅಧೀನ ಅಧಿಕಾರಿಯ ಪೂರ್ವಾನುಮೋದನೆ ಪಡೆಯುವುದು ಅಗತ್ಯ ಎಂಬುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ2022ರ ಫೆಬ್ರವರಿ 28ರಿಂದ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗೆ ಏಕವಿನ್ಯಾಸ ಅನುಮೋದನೆ ನೀಡುವ ಅಧಿಕಾರವನ್ನು ಕಡಿತಗೊಳಿಸಿ ಗೊಂದಲ ಸೃಷ್ಠಿಯಾಗಿತ್ತು.
ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಕರಾವಳಿ ಭಾಗದ ಸಚಿವರು ಹಾಗೂ ಶಾಸಕರು ಸರಕಾರದ ಮೇಲೆ ಒತ್ತಡ ತಂದಿದ್ದರು. ಹೀಗಾಗಿ ಗ್ರಾಮೀಣಾಭಿವೃದ್ಧಿ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಿದ ಪ್ರಕಾರ ಸ್ಥಳೀಯ ಯೋಜನಾ ಪ್ರದೇಶದ ಹೊರಭಾಗದಲ್ಲಿದ್ದ ಭೂಪರಿವರ್ತೀತ ಜಮೀನುಗಳಲ್ಲಿ ಒಂದು ಎಕರೆ ಪ್ರದೇಶ ಮತ್ತು ಏಕನಿವೇಶನ ವಸತಿ/ವಸತಿಯೇತರ ಉದ್ದೇಶಗಳಿಗಾಗಿ ಭೂಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಗಾಗಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅನುಮೋದನೆ ಪಡೆಯುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯು 2022ರ ಫೆಬ್ರವರಿ 28 ರಂದು ಹೊರಡಿಸಿದ ಪತ್ರದ ಬಗ್ಗೆ ಸಭೆಯು ಚರ್ಚೆ ನಡೆಸಲಾಯಿತು.
ನಗರಾಭಿವೃದ್ಧಿ ಇಲಾಖೆಯು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮ,1960 ಕ್ಕೆ 2021ರ ಅಕ್ಟೋಬರ್ 7ರಂದು ತಿದ್ದುಪಡಿ ತಂದು ಪ್ರಕರಣ 4-ಕೆ ರಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶದಲ್ಲಿ ಭೂ ಅಭಿವೃದ್ಧಿಗಾಗಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ಅನುಮೋದನೆ ಪಡೆಯುವಂತೆ ತಿಳಿಸಿತ್ತು. ಈ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗೆ ಸೂಚಿಸಲಾಗಿತ್ತು. ಇದೀಗ ಆ ಆದೇಶ ಪ್ರತಿ ಸ್ಥಳೀಯಾಡಳಿತಗಳಿಗೆ ಸಿಕ್ಕಿದ್ದು ಸಮಸ್ಯೆ ಪರಿಹಾರವಾದಂತಾಗಿದೆ.