ಆ್ಯಪ್ನಗರ

ನಾನು ಸಾಯುವವರೆಗೂ ಜೆಡಿಎಸ್ ಬಿಡುವುದಿಲ್ಲ: ಶಾಸಕ ಡಿ.ಸಿ.ಗೌರಿಶಂಕರ್

‘ನನ್ನ ತಂದೆ ತಾಯಿ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ. ನಾನು ಬಿಜೆಪಿಗೆ ಹೋಗುವುದಿಲ್ಲ. ಕೆಲವು ಮಾಧ್ಯಮಗಳು ಅನಗತ್ಯವಾಗಿ ಇಂತಹ ಸುದ್ದಿಗಳನ್ನು ಬಿತ್ತರಿಸುತ್ತಿವೆ’ ಎಂದು ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್ ಹೇಳಿದ್ದಾರೆ.

Vijaya Karnataka 17 Dec 2022, 6:49 pm
ತುಮಕೂರುಗ್ರಾಮಾಂತರ: ‘ನನ್ನ ತಂದೆ ತಾಯಿ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ. ನಾನು ಬಿಜೆಪಿಗೆ ಹೋಗುವುದಿಲ್ಲ. ಕೆಲವು ಮಾಧ್ಯಮಗಳು ಅನಗತ್ಯವಾಗಿ ಇಂತಹ ಸುದ್ದಿಗಳನ್ನು ಬಿತ್ತರಿಸುತ್ತಿವೆ’ ಎಂದು ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್ ಹೇಳಿದ್ದಾರೆ.
Vijaya Karnataka Web dc-gowrishankar
ಡಿಸಿ ಗೌರಿಶಂಕರ್


ಗ್ರಾಮಾಂತರದ ಬೆಳ್ಳಾವಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೆಲವು ಮಾಧ್ಯಮಗಳ ಮೂಲಕ ನನ್ನ ತೇಜೋವಧೆ ಮಾಡಲಾಗುತ್ತಿದೆ. ನನ್ನ ತಂದೆ ಅವರಿಗೆ ಹುಷಾರಿಲ್ಲದೆ ಹೊರದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಎರಡೂವರೆ ತಿಂಗಳಿನಿಂದ ಅವರು ಅರೆಪ್ರಜ್ಞಾವಸ್ಥೆಯಲ್ಲಿದ್ದಾರೆ. ನಮ್ಮ ಕಷ್ಟ ನಮಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಮಾಧ್ಯಮಗಳು ಇಂತಹ ಸಂದರ್ಭದಲ್ಲಿ ಅನಗತ್ಯ ಸುದ್ದಿಗಳನ್ನು ಬಿತ್ತರಿಸಿ, ನಮ್ಮ ಹೆಸರಿಗೆ ಮಸಿ ಬಳಿಯುವ ಪ್ರಯತ್ನವನ್ನು ಮಾಡುತ್ತಿವೆ. ನಾವು ದುಃಖದಲ್ಲಿದ್ದೇವೆ. ಈ ಪರಿಸ್ಥಿತಿಯಲ್ಲಿ ಆ ಪಕ್ಷೃ ಸೇರುತ್ತಾರೆ, ಈ ಪಕ್ಷೃ ಸೇರುತ್ತಾರೆ ಎಂದು ಹೇಳುವುದು ಎಷ್ಟು ಸಮಂಜಸ. ನಾನು ಇದ್ದರೆ ಜೆಡಿಎಸ್‌ನಲ್ಲೇ ಇರುತ್ತೇನೆ. ಸತ್ತರೂ ಜೆಡಿಎಸ್‌ನಲ್ಲೇ ಸಾಯುತ್ತೇನೆ. ಯಾವ ಪಕ್ಷೃಕ್ಕೂ ಹೋಗುವುದಿಲ್ಲ. ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗಲ್ಲ. ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಬಾರದು. ಕೆಲ ಕಾಣದ ಕೈಗಳು ಈ ರೀತಿಯ ಸುದ್ದಿ ಹರಿದಾಡುವುದಕ್ಕೆ ಕೆಲಸ ಮಾಡುತ್ತಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ನಾನು ಯಾವುದೇ ಕಾರಣಕ್ಕೂ ಜೆಡಿಎಸ್ ಬಿಟ್ಟು ಬಿಜೆಪಿ ಅಥವಾ ಬೇರೆ ಯಾವುದೇ ಪಕ್ಷಕ್ಕೂ ಹೋಗುವುದಿಲ್ಲ. ಕೊನೆಯ ಉಸಿರಿರುವವರೆಗೂ ಜೆಡಿಎಸ್ ಪಕ್ಷದಲ್ಲಿದ್ದು, ಪಕ್ಷದ ಋಣ ತೀರಿಸುತ್ತೇನೆ’ ಎಂದರು.

ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಕಾರದ ವೇಗವನ್ನು ತಡೆಯಲಾಗದೇ ಬಿಜೆಪಿಯವರು ಈ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದಲ್ಲಿ 5 ತಿಂಗಳಲ್ಲಿ 49 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿ ರೈತರ ಪಾಲಿಗೆ ದೇವರಾಗಿದ್ದಾರೆ. ಇಂತಹ ವ್ಯಕ್ತಿಯನ್ನು ಜನರು ಬೆಂಬಲಿಸಿದ್ದಾರೆ. ಇವರು ಐದು ವರ್ಷ ಕಾಲ ಉತ್ತಮ ಆಡಳಿತ ನಡೆಸುತ್ತಾರೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ