ಆ್ಯಪ್ನಗರ

ಕಟ್ಟಡ ಕಾರ್ಮಿಕರಿಗಾಗುತ್ತಿರುವ ಅನ್ಯಾಯ ಖಂಡಿಸಿ ಬೃಹತ್‌ ಪ್ರತಿಭಟನೆ

ನರೇಗಾ ಕಾರ್ಮಿಕರನ್ನು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವ್ಯಾಪ್ತಿಗೆ ಒಳಪಡಿಸಿ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ನೀಡುತ್ತಿರುವ ರಾಜ್ಯ ಸರಕಾರದ ಅವೈಜ್ಞಾನಿಕ ನಿರ್ಧಾರವನ್ನು ಖಂಡಿಸಿ ಶ್ರಮಜೀವಿ ಕಟ್ಟಡ ನಿರ್ಮಾಣ ಕಾರ್ಮಿಕರ ಹಿತರಕ್ಷಣಾ ಸಮಿತಿ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿತು.

Vijaya Karnataka 27 Sep 2018, 5:00 am
ತುಮಕೂರು: ನರೇಗಾ ಕಾರ್ಮಿಕರನ್ನು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವ್ಯಾಪ್ತಿಗೆ ಒಳಪಡಿಸಿ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ನೀಡುತ್ತಿರುವ ರಾಜ್ಯ ಸರಕಾರದ ಅವೈಜ್ಞಾನಿಕ ನಿರ್ಧಾರವನ್ನು ಖಂಡಿಸಿ ಶ್ರಮಜೀವಿ ಕಟ್ಟಡ ನಿರ್ಮಾಣ ಕಾರ್ಮಿಕರ ಹಿತರಕ್ಷಣಾ ಸಮಿತಿ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿತು.
Vijaya Karnataka Web injustice to building workers protest
ಕಟ್ಟಡ ಕಾರ್ಮಿಕರಿಗಾಗುತ್ತಿರುವ ಅನ್ಯಾಯ ಖಂಡಿಸಿ ಬೃಹತ್‌ ಪ್ರತಿಭಟನೆ


ನಗರದ ಜಿಲ್ಲಾಧಿಕಾರಿ ಕಚೇರಿ ಮಂದೆ ಬುಧವಾರ ಪ್ರತಿಭಟನೆ ನಡೆಸಿದ ಕಟ್ಟಡ ಕಾರ್ಮಿಕರು ಸರಕಾರದ ಅವೈಜ್ಞಾನಿಕ ನಿರ್ಧಾರವನ್ನು ರದ್ದುಪಡಿಸುವಂತೆ ಒತ್ತಾಯಿಸಿ ಸರಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.

ಈ ವೇಳೆ ಶ್ರಮಜೀವಿ ಕಟ್ಟಡ ನಿರ್ಮಾಣ ಕಾರ್ಮಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಸ್‌.ಟಿ. ಕೃಷ್ಣರಾಜು ಮಾತನಾಡಿ, ರಾಜ್ಯ ಸರಕಾರದಿಂದ ನರೇಗಾ ಕಾರ್ಮಿಕರನ್ನು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವ್ಯಾಪ್ತಿಗೆ ತಂದು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ನೀಡಿ ನಿಜವಾದ ಕಟ್ಟಡ ಕಾರ್ಮಿಕರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2012ರಲ್ಲಿ ಸುಪ್ರಿಂ ಕೋರ್ಟ್‌ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯನ್ನು ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಗಾರೆ ಕೆಲಸಗಾರರು, ಬಾರ್‌, ಬೆಂಡಿಂಗ್‌, ಸೆಂಟ್ರಿಂಗ್‌ ಕೆಲಸಗಾರರು, ಪೈಟಿಂಗ್‌, ಪ್ಲಂಬಿಂಗ್‌, ಎಲೆಕ್ಟ್ರಿಷಿಯನ್‌. ಇಟ್ಟಿಗೆ ಕಾರ್ಖಾನೆ, ಬಂಡೆ ಮೇಲೆ ಕೆಲಸ ಮಾಡುವ ಕೆಲಸಗಾರರ ಮಕ್ಕಳ ವಿದ್ಯಾಭ್ಯಾಸ, ವಿವಾಹ ಉದ್ದೇಶ, ಆರೋಗ್ಯ ಚಿಕಿತ್ಸೆಗಾಗಿ, ನಿವೃತ್ತಿ ವೇತನಕ್ಕಾಗಿ, ಅಪಘಾತದಲ್ಲಿ ನಿಧನರಾದ ಕಾರ್ಮಿಕರ ಪರಿಹಾರಕ್ಕಾಗಿ ವಿತರಿಸಬೇಕೆಂದು ಆದೇಶಿಸಿದೆ. ಆದರೆ ರಾಜ್ಯ ಸರಕಾರ ಇತ್ತೀಚಿಗೆ ನರೇಗಾ ಕಾರ್ಮಿಕರನ್ನೂ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವ್ಯಾಪ್ತಿಗೆ ತಂದು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ನೀಡಿ ನಿಜವಾದ ಕಟ್ಟಡ ಕಾರ್ಮಿಕರಿಗೆ ಅನ್ಯಾಯ ಮಾಡಲಾಗುತ್ತಿದೆ. ಹೀಗಾಗಿ ನೈಜ ಕಟ್ಟಡ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನೂರಾರು ಕಟ್ಟಡ ಕಾರ್ಮಿಕರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ