ತುಮಕೂರು: 'ಜಿಲ್ಲೆಯಲ್ಲಿ ಈ ಹಿಂದೆ 11 ವಿಧಾನಸಭಾ ಕ್ಷೇತ್ರಗಳ ಪೈಕಿ 9 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು ಗೆದ್ದಿದ್ದರು. ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ 9 ಕ್ಷೇತ್ರಗಳನ್ನು ಜೆಡಿಎಸ್ ತೆಕ್ಕೆಗೆ ತರಲು ಪಕ್ಷದ ಕಾರ್ಯಕರ್ತರು ಪ್ರಾಮಾಣಿಕ ಪ್ರಯತ್ನ ಮಾಡಬೇಕು' ಎಂದು ಶಾಸಕ ಡಿ. ಸಿ. ಗೌರಿಶಂಕರ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ತುಮಕೂರು ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಜೆಡಿಎಸ್ ಕಾರ್ಯಕರ್ತರು ತಮ್ಮಲ್ಲಿರುವ ಸಣ್ಣ ಪುಟ್ಟ ಲೋಪದೋಷಗಳನ್ನು ಬದಿಗೊತ್ತಿ, ಮುಂದಿನ 2023ರಲ್ಲಿ ಸ್ವತಂತ್ರವಾಗಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಬೇಕು ಎಂದರು.
ಎಚ್ಡಿಡಿ ಗುಣಗಾನ: 'ಎಚ್. ಡಿ. ದೇವೇಗೌಡರು ಕೇವಲ ಒಬ್ಬ ರೈತನ ಮಗನಾಗಿ ಅಲ್ಲ, ಸಾಮಾಜಿಕ, ಆರ್ಥಿಕವಾಗಿ ಮತ್ತು ನೀರಾವರಿ ಯೋಜನೆಗಳಿಗೆ ಅವರು ಪ್ರಧಾನಿ ಆಗಿದ್ದ ಅವಧಿಯಲ್ಲಿ ಸರ್ವ ಸಮುದಾಯಕ್ಕೂ ಮೀಸಲು ಕೊಡಬೇಕೆಂದು ಎಲ್ಲಾ ಸಮುದಾಯಕ್ಕೂ ನ್ಯಾಯ ಕಲ್ಪಿಸಿಕೊಟ್ಟರು. ದೇಶದ ಪ್ರತಿಯೊಬ್ಬ ಪ್ರಜೆಯ ಸಮಾನತೆಗೆ ಸಂವಿಧಾನವನ್ನು ರಚಿಸಿದ್ದರು. ಆದರೆ, ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಯಥಾವತ್ತಾಗಿ ಅನುಷ್ಠಾನಕ್ಕೆ ತಂದ ಕೀರ್ತಿ ಎಚ್ಡಿಡಿಗೆ ಸಲ್ಲುತ್ತದೆ' ಎಂದು ಬಣ್ಣಿಸಿದರು.
ಮಳೆ ಬೆಳೆ ಇಲ್ಲದೆ ಸಾಲದ ಸುಳಿಗೆ ಸಿಲುಕಿದ್ದ ರಾಜ್ಯದ ರೈತರ ಸಾಲಮನ್ನಾ ಮಾಡುವ ಮೂಲಕ ಕುಮಾರಸ್ವಾಮಿ ಅವರು ರೈತರ ಪರವಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಆದ್ರೆ, ಇಂದು ಬಿಜೆಪಿ ಸರಕಾರದ ವಿರುದ್ಧ ರೈತರು ಬೀದಿಗಿಳಿದಿದ್ದು, ರೈತರಿಗೆ ಕನಿಷ್ಠ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂದು ಗೌರಿಶಂಕರ್ ಬೇಸರ ವ್ಯಕ್ತಪಡಿಸಿದರು.
ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜಿನಪ್ಪ ಮಾತನಾಡಿದರು. ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ನಗರಾಧ್ಯಕ್ಷ ಬೆಳ್ಳಿ ಲೋಕೇಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಹಾಲನೂರು ಅನಂತಕುಮಾರ್, ಜಿಲ್ಲಾ ಮಹಿಳಾಧ್ಯಕ್ಷೆ ತಾಹೆರಾ ಕುಲ್ಸುಂ, ಹಿರಿಯ ಉಪಾಧ್ಯಕ್ಷ ಗಂಗಣ್ಣ, ಪಾಲಿಕೆ ಸದಸ್ಯರಾದ ನರಸಿಂಹಮೂರ್ತಿ, ಶ್ರೀನಿವಾಸ್, ಮಂಜುನಾಥ್ ಮತ್ತಿತರರಿದ್ದರು.
ಎಚ್ಡಿಡಿ ಗುಣಗಾನ: 'ಎಚ್. ಡಿ. ದೇವೇಗೌಡರು ಕೇವಲ ಒಬ್ಬ ರೈತನ ಮಗನಾಗಿ ಅಲ್ಲ, ಸಾಮಾಜಿಕ, ಆರ್ಥಿಕವಾಗಿ ಮತ್ತು ನೀರಾವರಿ ಯೋಜನೆಗಳಿಗೆ ಅವರು ಪ್ರಧಾನಿ ಆಗಿದ್ದ ಅವಧಿಯಲ್ಲಿ ಸರ್ವ ಸಮುದಾಯಕ್ಕೂ ಮೀಸಲು ಕೊಡಬೇಕೆಂದು ಎಲ್ಲಾ ಸಮುದಾಯಕ್ಕೂ ನ್ಯಾಯ ಕಲ್ಪಿಸಿಕೊಟ್ಟರು. ದೇಶದ ಪ್ರತಿಯೊಬ್ಬ ಪ್ರಜೆಯ ಸಮಾನತೆಗೆ ಸಂವಿಧಾನವನ್ನು ರಚಿಸಿದ್ದರು. ಆದರೆ, ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಯಥಾವತ್ತಾಗಿ ಅನುಷ್ಠಾನಕ್ಕೆ ತಂದ ಕೀರ್ತಿ ಎಚ್ಡಿಡಿಗೆ ಸಲ್ಲುತ್ತದೆ' ಎಂದು ಬಣ್ಣಿಸಿದರು.
ಮಳೆ ಬೆಳೆ ಇಲ್ಲದೆ ಸಾಲದ ಸುಳಿಗೆ ಸಿಲುಕಿದ್ದ ರಾಜ್ಯದ ರೈತರ ಸಾಲಮನ್ನಾ ಮಾಡುವ ಮೂಲಕ ಕುಮಾರಸ್ವಾಮಿ ಅವರು ರೈತರ ಪರವಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಆದ್ರೆ, ಇಂದು ಬಿಜೆಪಿ ಸರಕಾರದ ವಿರುದ್ಧ ರೈತರು ಬೀದಿಗಿಳಿದಿದ್ದು, ರೈತರಿಗೆ ಕನಿಷ್ಠ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂದು ಗೌರಿಶಂಕರ್ ಬೇಸರ ವ್ಯಕ್ತಪಡಿಸಿದರು.
ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜಿನಪ್ಪ ಮಾತನಾಡಿದರು. ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ನಗರಾಧ್ಯಕ್ಷ ಬೆಳ್ಳಿ ಲೋಕೇಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಹಾಲನೂರು ಅನಂತಕುಮಾರ್, ಜಿಲ್ಲಾ ಮಹಿಳಾಧ್ಯಕ್ಷೆ ತಾಹೆರಾ ಕುಲ್ಸುಂ, ಹಿರಿಯ ಉಪಾಧ್ಯಕ್ಷ ಗಂಗಣ್ಣ, ಪಾಲಿಕೆ ಸದಸ್ಯರಾದ ನರಸಿಂಹಮೂರ್ತಿ, ಶ್ರೀನಿವಾಸ್, ಮಂಜುನಾಥ್ ಮತ್ತಿತರರಿದ್ದರು.