ಆ್ಯಪ್ನಗರ

ಪರಮೇಶ್ವರ್ ಮೇಲೆ ಐಟಿ ದಾಳಿ-ತುಮಕೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮಾಜಿ ಡಿಸಿಎಂ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಡಾ. ಜಿ ಪರಮೇಶ್ವರ್ ಮೇಲೆ ಐಟಿ ದಾಳಿಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ತುಮಕೂರಿನಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijaya Karnataka Web 11 Oct 2019, 6:33 pm
ತುಮಕೂರು: ಮಾಜಿ ಡಿಸಿಎಂ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಡಾ. ಜಿ ಪರಮೇಶ್ವರ್ ಅವರ ಮೇಲೆ ಐಟಿ ದಾಳಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Vijaya Karnataka Web congress protest


ತೆರಿಗೆ ವಂಚನೆ ಹಾಗೂ ಹಣಕಾಸು ವ್ಯವಹಾರ ಮಾಹಿತಿ ಆಧಾರದಲ್ಲಿ ಆದಾಯ ತೆರಿಗೆ ಇಲಾಖೆ ಪರಮೇಶ್ವರ್ ಹಾಗೂ ಆರ್.ಎಲ್ ಜಾಲಪ್ಪ ನಿವಾಸ, ಶಿಕ್ಷಣ ಸಂಸ್ಥೆಗಳು ಹಾಗೂ ಆಸ್ಪತ್ರೆಯ ಮೇಲೆ ದಾಳಿ ನಡೆಸಿತ್ತು. ಪರಮೇಶ್ವರ್ ಆಪ್ತರ ನಿವಾಸಗಳ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಐಟಿ ದಾಳಿ ಸಂದರ್ಭದಲ್ಲಿ ಕೆಲವೊಂದು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು ಪರಮೇಶ್ವರ್ ನಿವಾಸದಲ್ಲಿ 70 ಲಕ್ಷ ಸೇರಿದಂತೆ ಒಟ್ಟು 4.50 ಕೋಟಿ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಐಟಿ ದಾಳಿಯನ್ನು ಕಾಂಗ್ರೆಸ್ ಖಂಡಿಸಿದ್ದು ಇದು ರಾಜಕೀಯ ದುರುದ್ದೇಶದ ದಾಳಿ ಎಂದು ಆರೋಪಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ಮುಖಂಡರೂ ಐಟಿ ದಾಳಿಯನ್ನು ರಾಜಕೀಯ ಪ್ರೇರಿತ ಎಂದಿದ್ದಾರೆ.

ಪರಮೇಶ್ವರ್ ಐಟಿ ದಾಳಿ ಪ್ರಕರಣ: ಮೊದಲ ಸಮನ್ಸ್ ಜಾರಿಗೊಳಿಸಿದ ಐಟಿ ಇಲಾಖೆ

ಇದರ ಮುಂದುವರಿದ ಭಾಗವಾಗಿ ತುಮಕೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯ ವೇಳೆ ರಸ್ತೆಯಲ್ಲಿ ಮಲಗಿ ಸಂಚಾರಕ್ಕೆ ತಡೆಯೊಡ್ಡಲು ಪ್ರಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ತುಮಕೂರು ಮಹಾನಗರ ಪಾಲಿಕೆಗೆ ಸುಮಾರು 2 ಕೋಟಿ ರೂ. ತೆರಿಗೆ ವಂಚಿಸಿರುವ ಪರಮೇಶ್ವರ್!

ಗುರುವಾರ ಬೆಳಗ್ಗೆ ಪರಮೇಶ್ವರ್ ಹಾಗೂ ಜಾಲಪ್ಪ ಆಸ್ತಿಗಳ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ಸತತ 34 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿರುವ ಅಧಿಕಾರಿಗಳಿಗೆ ಮಹತ್ವ ಸುಳಿವು ಸಿಕ್ಕಿದೆ ಎನ್ನಲಾಗುತ್ತಿದೆ.

ಬೆಂಗಳೂರು, ನೆಲಮಂಗಲ, ತುಮಕೂರು ಹಾಗೂ ಕೋಲಾರದಲ್ಲಿ ದಾಳಿ ನಡೆದಿದ್ದು ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಪ್ರಮುಖರು ಹಾಗೂ ಸಿಬಂಧಿಯನ್ನು ವಿಚಾರಣೆಗೆ ಒಳಪಡಿಸಿಲಾಗಿದೆ.

ಜಿ. ಪರಮೇಶ್ವರ್ ನಿವಾಸ ಮತ್ತು ಕಾಲೇಜು ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಮನ್ಸ್ ಅನ್ನು ಜಾರಿಗೊಳಿಸಿದ್ದಾರೆ. ಪರಮೇಶ್ವರ್ ಸಹೋದರನ ಪುತ್ರ ಆನಂದ್ ಆಪ್ತ ಕುಮಾರ್ ಭಾಸ್ಕರಪ್ಪರಿಗೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ