ಆ್ಯಪ್ನಗರ

ಪರಮೇಶ್ವರ್ ಪ್ರತಿಪಕ್ಷ ನಾಯಕರಾದರೆ ಕಾಂಗ್ರೆಸ್ ಸಮಾಧಿ: ಕೆಎನ್ ರಾಜಣ್ಣ

ತುಮಕೂರಿನಲ್ಲಿ ಕಾಂಗ್ರೆಸ್‌ನ ಆಂತರಿಕ ಕಲಹ ಜೋರಾಗಿದೆ. ಅದರಲ್ಲೂ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್‌ ಹಾಗೂ ಮಾಜಿ ಶಾಸಕ ಕೆಎನ್‌ ರಾಜಣ್ಣ ನಡುವೆ ಶೀತಲ ಸಮರ ಮುಂದುವರಿದಿದೆ.

Vijaya Karnataka Web 2 Oct 2019, 4:32 pm
ತುಮಕೂರು: ನಮ್ಮ ಜಿಲ್ಲೆಯವನು ವಿರೋಧ ಪಕ್ಷದ ನಾಯಕನಾಗಲು ಹೊರಟಿದ್ದಾನೆ. ಅವನೇನಾದರೂ ವಿರೋಧ ಪಕ್ಷದ ನಾಯಕನಾದರೆ ಕಾಂಗ್ರೆಸ್ ಸಮಾಧಿಯಾಗಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ವಿರುದ್ಧ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹರಿಹಾಯ್ದಿದ್ದಾರೆ.
Vijaya Karnataka Web ಕೆಎನ್‌ ರಾಜಣ್ಣ
ಕೆಎನ್‌ ರಾಜಣ್ಣ


ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಲಾಬಿ ನಡೆಸಿ ಲೀಡರ್ ಆಗಲು ಹೊರಟಿದ್ದಾರೆ. ಅವರಿಗೆಲ್ಲಾ 10 ವೋಟ್ ಹಾಕಿಸುವ ಯೋಗ್ಯತೆ ಇಲ್ಲ ಎಂದರು.

ಉಪ ಮುಖ್ಯಮಂತ್ರಿಯಾಗಿದ್ದರೂ ಯಾವುದೇ ರೀತಿಯ ಅಧಿಕಾರ ಇಲ್ಲದೇ ಕರ್ತವ್ಯ ನಿಭಾಯಿಸಿದ್ದಾರೆ. ಸಿದ್ದರಾಮಯ್ಯರನ್ನು ಹೊರತುಪಡಿಸಿದರೆ ಕಾಂಗ್ರೆಸ್ ಪಕ್ಷ ದೊಡ್ಡ ಸೊನ್ನೆಯಾಗಲಿದೆ ಎಂದು ಕೆಎನ್‌ ರಾಜಣ್ಣ ಏಕವಚನದಲ್ಲಿಯೇ ಪರಮೇಶ್ವರ್‌ ವಿರುದ್ಧ ಕಿಡಿಕಾರಿದರು.

ಇದೇ ವೇಳೆ ಅನರ್ಹ ಶಾಸಕರ ಕುರಿತು ಪ್ರತಿಕ್ರಿಯಿಸಿದ ರಾಜಣ್ಣ, ಅನರ್ಹರನ್ನು ನೋಯಿಸಿದರೆ ಬಿಜೆಪಿಗೆ ಅದರ ಶಾಪ ತಟ್ಟಲಿದೆ. ಬಿಜೆಪಿ ಸರಕಾರ ಬಂದಿರೋದೆ ಅವರಿಂದ ಎಂದು ತಿಳಿಸಿದರು.

ಆದರೂ ಬಿಜೆಪಿ ಅನರ್ಹರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತದೆ ಎಂಬ ವಿಶ್ವಾಸ ಇದೆ ಎಂದು ಕೆಎನ್‌ ರಾಜಣ್ಣ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ