ಆ್ಯಪ್ನಗರ

ಹಣ ಪ್ರಕರಣ ತನಿಖೆಯಾಗಲಿ: ಉಗ್ರಪ್ಪ

ವಿಧಾನ ಸೌಧದಲ್ಲಿ ಹಣ ಪತ್ತೆಯಾದ ಪ್ರಕರಣದ ಬಗ್ಗೆ ನಿಷ್ಪಕ್ಷ ಪಾತವಾಗಿ ತನಿಖೆಯಾಗಬೇಕು ಎಂದು ಬಳ್ಳಾರಿ ಸಂಸದ ವಿ.ಎಸ್‌. ಉಗ್ರಪ್ಪ ಒತ್ತಾಯಿಸಿದರು.

Vijaya Karnataka 7 Jan 2019, 5:00 am
ತುಮಕೂರು: ವಿಧಾನ ಸೌಧದಲ್ಲಿ ಹಣ ಪತ್ತೆಯಾದ ಪ್ರಕರಣದ ಬಗ್ಗೆ ನಿಷ್ಪಕ್ಷ ಪಾತವಾಗಿ ತನಿಖೆಯಾಗಬೇಕು ಎಂದು ಬಳ್ಳಾರಿ ಸಂಸದ ವಿ.ಎಸ್‌. ಉಗ್ರಪ್ಪ ಒತ್ತಾಯಿಸಿದರು.
Vijaya Karnataka Web large money foumd in vidhana soudha case it has to be investigate mp v s ugrappa
ಹಣ ಪ್ರಕರಣ ತನಿಖೆಯಾಗಲಿ: ಉಗ್ರಪ್ಪ


ಸಿದ್ಧಗಂಗಾ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯದ ಮಾಹಿತಿ ಪಡೆದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಯಾರದ್ದು ಎನ್ನುವುದನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಭ್ರಷ್ಟಾಚಾರ ಯಾರು ಮಾಡಿದರೂ ತಪ್ಪು. ವಿಧಾನಸೌಧದೊಳಗೆ ಹೇಗೆ ಹಣ ಹೋಯ್ತು ಅಂತ ಪತ್ತೆಯಾಗಬೇಕು ಎಂದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ನೀಡಿದ ಪುಟಗೋಸಿ ದುಡ್ಡು ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿದ ಅವರು, ಅಧ್ಯಕ್ಷ ರು ಯಾವ ದೃಷ್ಟಿಕೋನದಲ್ಲಿ ಹೇಳಿದರು ಎಂದು ಗೊತ್ತಿಲ್ಲ ಎಂದರು.

ಶ್ರೀಗಳಿಗಾಗಿ ಪ್ರಾರ್ಥನೆ:
ವೈದ್ಯರ ಮಾಹಿತಿ ಪ್ರಕಾರ ಸಿದ್ಧಗಂಗಾ ಶ್ರೀಗಳ ಆರೋಗ್ಯ ಸುಧಾರಿಸಿದೆ. ಅವರಿಗೆ ಮತ್ತಷ್ಟು ಆರೋಗ್ಯ ಸುಧಾರಿಸಲೆಂದು ಪ್ರಾರ್ಥನೆ ಮಾಡುತ್ತೇನೆ. ಶ್ರೀಗಳ ಆರೋಗ್ಯ ಸುಧಾರಣೆ ಪವಾಡ ಸದೃಶ ರೀತಿ ಆಗುತ್ತಿದೆ ಎಂದು ಉಗ್ರಪ್ಪ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ