ಆ್ಯಪ್ನಗರ

ಚಿರತೆ ಬಳಿಕ ತುಮಕೂರಿನಲ್ಲಿ ಒಂಟಿ ಸಲಗ ದಾಳಿ: ರೈತನ ಸ್ಥಿತಿ ಚಿಂತಾಜನಕ!

ತುಮಕೂ ತಾಲೂಕು ಹಿರೇಹಳ್ಳಿ ಪಂಚಾಯಿತಿ ವ್ಯಾಪ್ತಿಯ ಕೋಳಿಹಳ್ಳಿಯಲ್ಲಿ ಮೂರ್ತಪ್ಪ(70) ಎಂಬಾತನ ಮೇಲೆ ಕಾಡಾನೆ ದಾಳಿ ಮಾಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಚಿರತೆಗಳು ನಾಲ್ಕು ಜೀವಗಳನ್ನು ಬಲಿ ಪಡೆದಿದ್ದವು. ​

Vijaya Karnataka Web 9 Mar 2020, 2:34 pm
ತುಮಕೂರು: ಜಿಲ್ಲೆಯಲ್ಲಿ ಚಿರತೆಗಳು ನಾಲ್ಕು ಜೀವಗಳನ್ನು ಬಲಿ ಪಡೆದ ಬೆನ್ನಲ್ಲೇ ಸೋಮವಾರ ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ತೀವ್ರವಾಗಿ ಗಾಯಗೊಂಡಿದ್ದಾನೆ.
Vijaya Karnataka Web elephent new


ತುಮಕೂ ತಾಲೂಕು ಹಿರೇಹಳ್ಳಿ ಪಂಚಾಯಿತಿ ವ್ಯಾಪ್ತಿಯ ಕೋಳಿಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಮೂರ್ತಪ್ಪ(70) ಎಂಬಾತನ ಮೇಲೆ ಕಾಡಾನೆ ದಾಳಿ ಮಾಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ 15 ದಿನಗಳ ಹಿಂದೆಯೇ ಜಿಲ್ಲೆಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದರೂ ಅರಣ್ಯ ಇಲಾಖೆಗೆ ಆನೆಯ ಸಂಚಾರದ ಮಾಹಿತಿ ಇರಲಿಲ್ಲ. ಇಂದು ಏಕಾಏಕಿ ಕೋಳಿಹಳ್ಳಿಯಲ್ಲಿ‌ ಕಾಣಿಸಿಕೊಂಡಿದ್ದು, ಜನರು ಭೀತಿಗೊಂಡಿದ್ದಾರೆ. ಆನೆ ದಾಳಿ ಮಾಡುವ ವಿಡಿಯೋ ಎದೆ ನಡುಗಿಸುವಂತಿದ್ದು, ಆನೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತುಮಕೂರಿನಲ್ಲಿ ಚಿರತೆ ದಾಳಿಗೆ ಮೂರು ವರ್ಷದ ಮಗು ಬಲಿ: ಮನೆಯವರ ಎದುರೇ ಕಂದಮ್ಮನನ್ನು ಹೊತ್ತೊಯ್ದ ಮೃಗ

ಹೆಬ್ಬೂರು ಹೋಬಳಿ ಕಣಕುಪ್ಪೆ ಗ್ರಾ. ಪಂ ವ್ಯಾಪ್ತಿಯ ಬೈಚೇನಹಳ್ಳಿ ಗ್ರಾಮದಲ್ಲಿ ಗ್ರಾಪಂ ಸದಸ್ಯ ಗಂಗಚಿಕ್ಕಣ್ಣ ಅವರ ಮೊಮ್ಮಗಳು ಚಂದನ ಮನೆಯ ಮುಂದೆ ಆಟವಾಡುತ್ತಿದ್ದಳು. ಈ ಸಮಯದಲ್ಲಿ ರಾತ್ರಿ 8 ಗಂಟೆ ವೇಳೆಗೆ ಚಿರತೆ ದಾಳಿ ನಡೆಸಿದ್ದು, ಮಗುವನ್ನು ಹೊತ್ತೊಯ್ದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ