ಆ್ಯಪ್ನಗರ

ತುಮಕೂರು: ನರೇಗಾ ಯೋಜನೆಯಡಿ 891 ಮಾನವ ದಿನಗಳ ಸೃಜನೆ

ಜಿಲ್ಲೆಯ ಬರಪೀಡಿತ ತಾಲೂಕುಗಳಲ್ಲಿ ಈವರೆಗೆ 891 ಮಾನವ ದಿನಗಳ ಸೃಜನೆಯಾಗಿದೆ ಎಂದು ಜಿಪಂ ಸಿಇಒ ಶುಭಾ ಕಲ್ಯಾಣ್‌ ತಿಳಿಸಿದ್ದಾರೆ. ಈ ಕಾಮಗಾರಿಯಿಂದಾಗಿ 100ಕ್ಕೂ ಹೆಚ್ಚು ಕುಟುಂಬಗಳಿಗೆ ನರೇಗಾ ಯೋಜನೆ ವರದಾನವಾಗಿದೆ.

Vijaya Karnataka Web 25 Jun 2020, 10:00 am
ತುಮಕೂರು: ಜಿಲ್ಲೆಯ ಬರಪೀಡಿತ ತಾಲೂಕುಗಳಲ್ಲಿ ಕೊರಟಗೆರೆ ತಾಲೂಕು ಒಂದಾಗಿದೆ. ಇಲ್ಲಿನ ಹುಲಿಕುಂಟೆ ಗ್ರಾಪಂ ವ್ಯಾಪ್ತಿಯ ಹುಲಿಕುಂಟೆಯ ಚಿಕ್ಕಕೆರೆಯಲ್ಲಿ ಹೂಳೆತ್ತುವ ಕಾಮಗಾರಿ ಕೈಗೊಂಡಿದ್ದು, ಈವರೆಗೆ 891 ಮಾನವ ದಿನಗಳ ಸೃಜನೆಯಾಗಿದೆ ಎಂದು ಜಿಪಂ ಸಿಇಒ ಶುಭಾ ಕಲ್ಯಾಣ್‌ ತಿಳಿಸಿದ್ದಾರೆ.
Vijaya Karnataka Web ನರೇಗಾ ಯೋಜನೆಯಡಿ 891 ಮಾನವ ದಿನಗಳ ಸೃಜನೆ


ಚಿಕ್ಕಕೆರೆಯಲ್ಲಿ ಸುಮಾರು 2.50 ಲಕ್ಷ ರೂ. ವೆಚ್ಚದಲ್ಲಿ ಹೂಳೆತ್ತುವ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಗ್ರಾಮದ ನೂರಾರು ಕುಟುಂಬಗಳು ಭಾಗವಹಿಸಿ, ಉದ್ಯೋಗ ಕಂಡುಕೊಂಡಿವೆ. ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ 2.45 ಲಕ್ಷ ರೂ. ಕೂಲಿ ವೆಚ್ಚವಾಗಿದ್ದು, 5,000 ರೂಪಾಯಿ ಸಾಮಗ್ರಿ ವೆಚ್ಚವಾಗಿರುತ್ತದೆ.

ಈ ಕಾಮಗಾರಿಯಿಂದಾಗಿ 100ಕ್ಕೂ ಹೆಚ್ಚು ಕುಟುಂಬಗಳಿಗೆ ನರೇಗಾ ಯೋಜನೆ ವರದಾನವಾಗಿದೆ. ಕೊರಟಗೆರೆ ತಾಲೂಕು ಬರಪೀಡಿತ ತಾಲೂಕುಗಳಲ್ಲಿ ಒಂದಾಗಿದೆ. ಇಂದು ಅಥವಾ ನಾಳೆ ಉತ್ತಮ ಮಳೆ ಆಗಬಹುದು ಎಂಬ ನಿರೀಕ್ಷೆ ಇಲ್ಲಿನ ಗ್ರಾಮಸ್ಥರದ್ದು. ಕಳೆದ ವಾರದಿಂದಲೂ ತಾಲೂಕಿನಲ್ಲಿ ಮೋಡ ಕವಿದ ವಾತಾವರಣವಿದ್ದರೂ ಸಹ ಮಳೆ ಆಗಿರುವುದಿಲ್ಲ. ಇಂದಲ್ಲ ನಾಳೆ ಮಳೆ ಆಗುತ್ತದೆ ಎಂಬ ಆಸೆಯಿಂದಲೇ ಗ್ರಾಮಸ್ಥರು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಭಾಗವಹಿಸಿದ್ದಾರೆ ಎಂದು ಗ್ರಾಪಂ ಸದಸ್ಯ ಶಿವಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ