ಆ್ಯಪ್ನಗರ

ಸಿದ್ದರಾಮಯ್ಯ ಅಲ್ಲ, ಚೂರಿ ರಾಮಯ್ಯ! ಶ್ರೀರಾಮುಲು ಲೇವಡಿ

ಮುನಿರತ್ನ ಸಿದ್ದರಾಮಯ್ಯ ಅವರ ಬೆನ್ನಿಗೆ ಚೂರಿ ಹಾಕಿಲ್ಲ. ಬದಲಾಗಿ ಸಿದ್ದರಾಮಯ್ಯನವರು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಬೆನ್ನಿಗೆ ಚೂರಿ ಹಾಕಿದ್ದಾರೆ. ಹೀಗಂದವರು ಸಚಿವ ಶ್ರೀರಾಮುಲು.

Vijaya Karnataka Web 30 Oct 2020, 2:08 pm
ತುಮಕೂರು: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಬೆನ್ನಿಗೆ ಚೂರಿ ಹಾಕಿ ಕಾಂಗ್ರೆಸ್ಗೆ ಸೇರ್ಪಡೆಯಾದ ನಿಮ್ಮನ್ನು ಸಿದ್ದರಾಮಯ್ಯ ಎನ್ನುವ ಬದಲು ಚೂರಿ ರಾಮಯ್ಯ ಎನ್ನಬೇಕಾ? ಎಂದು ಲೇವಡಿ ಮಾಡಿದವರು ಬೇರಾರು ಅಲ್ಲ, ಸಚಿವ ಶ್ರೀರಾಮುಲು.
Vijaya Karnataka Web B Sriramulu


ತುಮಕೂರಿನಲ್ಲಿ ಮಾತನಾಡಿದ ಶ್ರೀರಾಮುಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಆರ್‌ ಆರ್‌ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಶ್ರೀರಾಮುಲು ಬೆನ್ನಿಗೆ ಚೂರಿ ಹಾಕಿದ್ದು ನಮ್ಮ ಶಾಸಕರಲ್ಲ ಬದಲಾಗಿ ದೇವೇಗೌಡರ ಬೆನ್ನಿಗೆ ಚೂರಿ ಹಾಕಿ ನೀವು ಕಾಂಗ್ರೆಸ್ಗೆ ಸೇರ್ಪಡೆಯಾದವರು ಸಿದ್ದರಾಮಯ್ಯ. ಈ ಕಾರಣಕ್ಕಾಗಿ ನಿಮ್ಮನ್ನು ಸಿದ್ದರಾಮಯ್ಯ ಎನ್ನುವ ಬದಲು ಚೂರಿ ರಾಮಯ್ಯ ಎನ್ನಬೇಕಾ? ಎಂದು ಲೇವಡಿ ಮಾಡಿದ್ದಾರೆ.

ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಚುನಾವಣೆಯೂ ಬಂದಿಲ್ಲ! ಸಿಎಂ ಅಭ್ಯರ್ಥಿ ಯಾರೆಂಬ ಪ್ರಶ್ನೆಗೆ ಸಿದ್ದು ಉತ್ತರ

ಸಿದ್ದರಾಮಯ್ಯನವರೇ ನಿಮ್ಮ ಬೆನ್ನಿಗೆ ಚೂರಿ ಹಾಕಿರುವುದು ಬಿಜೆಪಿ ಶಾಸಕರಲ್ಲ. ನೀವು ದೇವೇಗೌಡರ ಬೆನ್ನಿಗೆ ಚೂರಿ ಹಾಕಿರೋದು. ಜೆಡಿಎಸ್ ಪಕ್ಷದಿಂದ ಅಧಿಕಾರವನ್ನು ಅನುಭವಿಸಿ ದೇವೇಗೌಡರ ಬೆನ್ನಿಗೆ ಚೂರಿ ಹಾಕಿ ಕಾಂಗ್ರೆಸ್ಗೆ ಬಂದವರು ನೀವು. ಇವತ್ತು ನಿಮ್ಮನ್ನು ಸಿದ್ದರಾಮಯ್ಯ ಅಂತ ಕರೆಯಬೇಕಾ? ಅಥವಾ ಚೂರಿ ರಾಮಯ್ಯ ಎಂದು ಕರೆಯಬೇಕಾ? ಎಂದು ಗರಂ ಆಗಿ ಪ್ರಶ್ನಿಸಿದ್ದಾರೆ.

ಸಚಿವ ಶ್ರೀರಾಮುಲು ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೂಡಾ ಶಿರಾದಲ್ಲಿ ಶುಕ್ರವಾರ ಪ್ರಚಾರ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ