ಆ್ಯಪ್ನಗರ

‘ತುಮಕೂರಿನಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರುತ್ತಿದೆ’ ಮಾಧುಸ್ವಾಮಿ ಆತಂಕ

ಕೊರೊನಾ ತುಮಕೂರು ಜಿಲ್ಲೆಯಲ್ಲಿ ಪರಿಸ್ಥಿತಿ ನಮ್ಮ ಕೈಮೀರಿ ಹೋಗುತ್ತಿದೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಸೋಂಕು ತೀವ್ರವಾಗಿ ಹರಡುತ್ತಿದ್ದು ಸಮುದಾಯಕ್ಕೆ ಹರಡುವ ಹಂತದಲ್ಲಿದೆ.

Vijaya Karnataka Web 6 Jul 2020, 4:19 pm
ತುಮಕೂರು: ಪರಿಸ್ಥಿತಿ ನಮ್ಮ ಕೈ ಮೀರುತ್ತಿದೆ, ಜಿಲ್ಲಾಡಳಿತ ಎಷ್ಟೇ ಶ್ರಮ ಪಟ್ಟರೂ ನಿಗ್ರಹ ಮಾಡುವುದು ಕಷ್ಟ ಎಂಬ ಸ್ಥಿತಿ ನಿರ್ಮಾನವಾಗಿದೆ. ಹೀಗಂದವರು ತುಮಕೂರು ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ. ತುಮಕೂರು ಜಿಲ್ಲೆಯ ಕೊರೊನಾ ಸೋಂಕು ಹರಡುತ್ತಿರುವ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ ಅವರು ನಿಗ್ರಹ ಮಾಡುವುದು ಕಷ್ಟ ಎಂಬ ಪರಿಸ್ಥಿತಿಗೆ ತಲುಪಿದ್ದೇವೆ ಎಂದಿದ್ದಾರೆ.
Vijaya Karnataka Web maduswami


ತುಮಕೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಧುಸ್ವಾಮಿ ಜಿಲ್ಲೆಯ ಚಿತ್ರಣವನ್ನು ಬಿಚ್ಚಿಟ್ಟರು. ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದ ಅವರು ಜಿಲ್ಲೆಯಲ್ಲಿ ಕೊರೊನಾ ಸಮದಾಯಕ್ಕೆ ಹರಡುವ ಹಂತಕ್ಕೆ ತಲುಪುವ ಸ್ಥಿತಿ ಎದುರಾಗಿದೆ ಎಂದರು.

ರಾಮನಗರದ ಸೀಲ್‌ಡೌನ್ ಪ್ರದೇಶದ ಜನರ ಗೋಳು ಕೇಳೋರು ಯಾರು?

ಎಲ್ಲೋ ಒಂದು ಕಡೆ ಪರಿಸ್ಥಿತಿ ಕೈ ತಪ್ಪಿ ಹೋಗುತ್ತಿದೆ. ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಮಾಡಲು ಎಷ್ಟೇ ಪ್ರಯತ್ನ ಪಟ್ಟರೂ ನಿಯಂತ್ರಣ ಸಾಧ್ಯವಾಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಸಚಿವ ಈ ಹೇಳಿಕೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ತುಮಕೂರು ಜಿಲ್ಲೆಯನ್ನು ಉದ್ಧೇಶಿಸಿ ಈ ಹೇಳಿಕೆ ನೀಡಿದರೂ ಇತರ ಜಿಲ್ಲೆಗಳ ಪರಿಸ್ಥಿತಿ ಏನು ಎಂಬುವುದು ಆತಂಕಕ್ಕೆ ಕಾರಣವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ