ಆ್ಯಪ್ನಗರ

ವಿಜಯೇಂದ್ರ ಕಾಲಿಟ್ಟಲ್ಲಿ ಗೆಲುವು ನಿಶ್ಚಿತ! ಕೆ.ಸಿ ನಾರಾಯಣಗೌಡ ಭವಿಷ್ಯ

ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ಕಾಲಿಟ್ಟಲ್ಲಿ ಗೆಲುವು ನಿಶ್ಚಿತ ಎಂದು ಸಚಿವ ಕೆ.ಸಿ ನಾರಾಯಣಗೌಡ ಭವಿಷ್ಯ ನುಡಿದಿದ್ದಾರೆ. ಕೆಆರ್‌ ಪೇಟೆ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದ ವಿಜಯೇಂದ್ರ ಇದೀಗ ಶಿರಾ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಹಾಗಾದ್ರೆ ಇದು ಯಶಸ್ವಿ ಆಗುತ್ತಾ.

Vijaya Karnataka Web 30 Oct 2020, 12:27 pm
ತುಮಕೂರು: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಲಿಟ್ಟಲ್ಲಿ ಗೆಲುವು ನಿಶ್ಚಿತ! ಹೀಗಂದವರು ಸಚಿವ ಕೆ.ಸಿ ನಾರಾಯಣಗೌಡ. ಶಿರಾ ಉಪಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರು ಅಭಿವೃದ್ಧಿ ಮಾಡುವುದಾಗಿ ಮಾತುಕೊಟ್ಟರೆ ಎಂದಿಗೂ ಮಾತು ತಪ್ಪುವುದಿಲ್ಲ. ಶಿರಾ ಕ್ಷೇತ್ರವನ್ನ ಮೂರನೆ ಶಿಕಾರಿಪುರವನ್ನಾಗಿ ಮಾಡುತ್ತಾರೆ ಎಂದರು.
Vijaya Karnataka Web narayana gowda


ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಪರ ಮದಲೂರಿನಲ್ಲಿ ನಡೆದ ಸಮಾವೇಶದಲ್ಲಿ ಸಚಿವರು ಮಾತನಾಡಿದರು. ಶಿರಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರುವುದು ಖಚಿತ. ಮಂಡ್ಯ ಜಿಲ್ಲೆಯಲ್ಲಿ ಯಡಿಯುರಪ್ಪ ಅವರ ಆಶೀರ್ವಾದಿಂದ ನನ್ನನ್ನು ಗೆಲ್ಲಿಸಿದ್ರು. ಮೂರು ಖಾತೆ ನೀಡಿ ಸಚಿವನನ್ನಾಗಿ ಮಾಡಿದ್ರು. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲಲ್ಲ ಅಂತಿದ್ರು. ಆದ್ರೆ ಈಗ ಯಡಿಯೂರಪ್ಪ ಅವರ ಕನಸು ನೆರವೇರಿದೆ ಎಂದು ಹಾಡಿಹೊಗಳಿದರು.

ನಿಶ್ಚಿತಾರ್ಥಕ್ಕೆ ವಧು ಹುಡುಕಿಲ್ಲ, ಆಗಲೇ ಮಗುವಿನ ನಾಮಕರಣಕ್ಕೆ ತಯಾರಿ! ಕಾಂಗ್ರೆಸ್ 'ಸಿಎಂ' ಚರ್ಚೆಗೆ ನಳಿನ್ ವ್ಯಂಗ್ಯ

ಕೆ.ಆರ್. ಪೇಟೆಯಲ್ಲಿ ಗೆಲ್ಲಿಸಿದ್ರೆ ಎರಡನೆ ಶಿಕಾರಿಪುರ ಮಾಡ್ತಿನಿ ಅಂತ ಯಡಿಯೂರಪ್ಪ ಭರವಸೆ ಕೊಟ್ಟಿದ್ರು. ಅದರಂತೆ ಈಗ ಕ್ಷೇತ್ರಕ್ಕೆ ಸಾವಿರ ಕೋಟಿ ಅನುದಾನ ಕೊಟ್ಟಿದ್ದಾರೆ. ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆಗ್ತಿದೆ. ವಿಜಯೇಂದ್ರ ಅವರು ಕೆ.ಆರ್. ಪೇಟೆ ಚುನಾವಣೆ ನೇತೃತ್ವ ವಹಿಸಿದ್ರು. ಅವರು ಕೊಟ್ಟ ಮಾತಿನಂತೆ ಈಗ ಅಭಿವೃದ್ಧಿ ಕೆಲಸ ಆಗ್ತಿದೆ.

150 ಹಾಸಿಗೆಯ ಹೈಟೆಕ್ ಆಸ್ಪತ್ರೆ ಬರ್ತಿದೆ. ವಿಜಯೇಂದ್ರ ಅವರು ಕಾಲಿಟ್ಟಲ್ಲಿ ಗೆಲುವು ನಿಶ್ಚಿತ. ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಅವರನ್ನ ಗೆಲ್ಲಿಸಿಕೊಡಿ. ಕ್ಷೇತ್ರವನ್ನು ಮೂರನೆ ಶಿಕಾರಿಪುರ ಮಾಡ್ತಾರೆ. ಸಿಎಂ ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ತಾರೆ. ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ ಹರಿದುಬರತ್ತೆ. ಇದಕ್ಕೆ ಉದಾಹರಣೆ ಕೆ.ಆರ್. ಪೇಟೆ ಕ್ಷೇತ್ರ. ಅದೇ ರೀತಿ ಶಿರಾ ಕ್ಷೇತ್ರ ಕೂಡ ಅಭಿವೃದ್ಧಿ ಆಗಲಿದೆ. ಹಾಗಾಗಿ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಅವರನ್ನು ಗೆಲ್ಲಿಸಿ ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದ್ರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ