ಆ್ಯಪ್ನಗರ

ಸಚಿವರಾಗಿದ್ದರೂ ಮಕ್ಕಳ ಮನಸು ಗೆಲ್ಲುವಷ್ಟು ಸರಳ ವ್ಯಕ್ತಿ ಸುರೇಶ್‌ ಕುಮಾರ್‌!

ಸದಾ ಒಂದಿಲ್ಲೊಂದು ಚಟುವಟಿಕೆಯಿಂದ ಕೂಡಿರುವ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಕುಮಾರ್‌ ಅವರು ಶನಿವಾರ ತುಮಕೂರು ಜಿಲ್ಲೆಯ ಹಲವು ಶಾಲೆಗಳಿಗೆ ಭೇಟಿ ನೀಡಿದ್ದು, ಮಕ್ಕಳಿಗೆ ಆಪ್ತ ಮೇಷ್ಟ್ರಾಗಿ ಮನಗೆದ್ದಿದ್ದಾರೆ.

Vijaya Karnataka Web 9 Jan 2021, 3:54 pm
ಮಧುಗಿರಿ: ಸದಾ ಒಂದಿಲ್ಲೊಂದು ಚಟುವಟಿಕೆಯಿಂದ ಕೂಡಿರುವ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಕುಮಾರ್‌ ಅವರು ಶನಿವಾರ ತುಮಕೂರು ಜಿಲ್ಲೆಯ ಹಲವು ಶಾಲೆಗಳಿಗೆ ಭೇಟಿ ನೀಡಿದ್ದು, ಮಕ್ಕಳಿಗೆ ಆಪ್ತ ಮೇಷ್ಟ್ರಾಗಿ ಮನಗೆದ್ದಿದ್ದಾರೆ.
Vijaya Karnataka Web S Suresh Kumar


ರಜೆ ಇದ್ದ ಆರು ತಿಂಗಳು ಏನು‌ ಮಾಡ್ತಿದ್ರಿ? ಸಂವೇದಾ ಟೀವಿ ಪಾಠಗಳು ಚೆನ್ನಾಗಿದ್ವಾ? ಆರೋಗ್ಯ ಕೆಡಿಸಿಕೊಳ್ಳಕ್ಕೆ ನಿಮಗೆ ಹಕ್ಕೇ ಇಲ್ಲಾ‌‌ ಗೊತ್ತಾ? ಎಕ್ಸಾಂ ಬೇಕೋ ಬೇಡ್ವೋ? ಕೂಲಿ ಕಾರ್ಮಿಕನ ಮಗ ಮಹೇಶ್ ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 616 ಅಂಕ ತೆಗೆದದ್ದು ಯಾಕೆ ಮತ್ತು ಹೇಗೆ ಗೊತ್ತಾ? ಸುಧಾ ಮೂರ್ತಿ ಯಾರು ಗೊತ್ತಾ? ಹೀಗೆ ಪ್ರಶ್ನೆಗಳ ಮೇಲೆ‌ ಪ್ರಶ್ನೆ ಕೇಳುತ್ತಾ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಅವರ ಮಕ್ಕಳಲ್ಲಿ ವಿಶ್ವಾಸ ತುಂಬಿದರು.‌

ಇಂದು‌ ತುಮಕೂರಿನ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಹಲವಾರು ಶಾಲೆಗಳಿಗೆ‌ ಭೇಟಿ ಕೊಟ್ಟ ಸುರೇಶ್‌ಕುಮಾರ್ ಚೆನ್ನಾಗಿ ಓದಿ ಅಂತ ಪ್ರಾಮಿಸ್ ಮಾಡ್ತೀರಾ ಅಂತ ಮಕ್ಕಳನ್ನು ಪ್ರಶ್ನೆ ಮಾಡಿ ಅವರ ಮನಸೂರೆಗೊಂಡರು. ಎಕ್ಸಾಂ ಬೇಕೇ ಬೇಕು ಅಂದ ಮಕ್ಕಳಿಗೆ ಯಾಕೆ ಬೇಕೆಂದು ಕೇಳಿದ ಸುರೇಶ್ ಕುಮಾರ್ ಭವಿಷ್ಯಕ್ಕೆ ಓದೇ ಮುಖ್ಯ ಅಂದ ಮಕ್ಕಳ ಬೆನ್ನುತಟ್ಟಿದರು.

ವಿದ್ಯಾರ್ಥಿಗಳನ್ನು ಬಿಟ್ಟು ಹೋದ ಚಾಲಕ; ಕೆಎಸ್‌ಆರ್‌ಟಿಸಿ ಬಸ್‌ ತಡೆದು ಶಿಕ್ಷಣ ಸಚಿವರ ತರಾಟೆ..!

ಬಾಗಲಕೋಟೆಯ ಜಮಖಂಡಿ ಬಳಿಯ ಸಾವಳಗಿ ಗ್ರಾಮದ ಸಂಜು, ಕೂಲಿ ಕಾರ್ಮಿಕರ ಮಗನಾದ ಮಹೇಶ ಅಂಥಹ ಅಸಂಖ್ಯ ವಿದ್ಯಾರ್ಥಿಗಳ ಸಾಧನೆ ನಮ್ಮೆಲ್ಲರಿಗೆ ಪ್ರೇರೇಪಣೆ ನೀಡಬೇಕೆಂದು ಉದಾಹರಿಸಿದಾಗ ವಿದ್ಯಾರ್ಥಿಗಳು ರೋಮಾಂಚನಗೊಂಡರು. ಜಪಾನ್ ದೇಶ ಕೊರೋನಾ ಹೇಗೆ ಗೆದ್ದಿತು ಗೊತ್ತಾ ಎಂದು ಕೇಳಿ ಸ್ವಚ್ಛತೆಯ ಬಗ್ಗೆ ಪಾಠ ಮಾಡಿದರು. ಸಂತೋಷವಾಗಿರೋದು ಓದಿಗೆ ಅತೀ ಮುಖ್ಯ ಹೇಗೆ ಎಂದು ವಿವರಿಸಿದರು.

ಖಾಸಗಿ ಶಾಲೆಗಳ ಲೈಸೆನ್ಸ್‌ ಆನ್‌ಲೈನ್‌ ಮೂಲಕ ನವೀಕರಣ: ಎಸ್‌ ಸುರೇಶ್‌ಕುಮಾರ್

ಕೊರಟಗೆರೆ, ಮಧುಗಿರಿ, ಪಾವಗಡ ತಾಲ್ಲೂಕುಗಳ ವಿವಿಧ ಶಾಲೆಗಳಿಗೆ ಬೆಳಗ್ಗೆಯಿಂದಲೇ ಭೇಟಿ ನೀಡಿದ ಸಚಿವ ಸುರೇಶ್ ಕುಮಾರ್, ಮಕ್ಕಳ ಹಿತವನ್ನು ಗಮನದಲ್ಲಿಟ್ಟುಕೊಂಡು ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ, ಶಿಕ್ಷಕರಿಗೆ ಸೂಚನೆ ನೀಡಿದರು.‌ ಅವರೊಂದಿಗೆ ಜಿಲ್ಲೆಯ ಶಿಕ್ಷಣ ಇಲಾಖಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು‌ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ