ಆ್ಯಪ್ನಗರ

ಡಿ.26-30: ಸಂಗೀತಯುಕ್ತ ಇಷ್ಠಲಿಂಗ ಮಹಾಪೂಜೆ

ನಗರದ ಶೆಟ್ಟಿಹಳ್ಳಿ ಮುಖ್ಯರಸ್ತೆಯ ವಿಶಾಲಾಕ್ಷಮ್ಮ ಸದಾಶಿವಯ್ಯ ಸಭಾಭವನದಲ್ಲಿ ಡಿ.26ರಿಂದ30ರವರೆಗೆ ಧನುರ್ಮಾಸದ ಅಂಗವಾಗಿ ಸಂಗೀತಯುಕ್ತ ಇಷ್ಠಲಿಂಗ ಮಹಾಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಸೇವಾ ಸಮಾಜ ಟ್ರಸ್ಟ್‌ ಅಧ್ಯಕ್ಷ ಟಿ.ಬಿ. ಶೇಖರ್‌ ತಿಳಿಸಿದರು.

Vijaya Karnataka 23 Dec 2018, 5:00 am
ತುಮಕೂರು: ನಗರದ ಶೆಟ್ಟಿಹಳ್ಳಿ ಮುಖ್ಯರಸ್ತೆಯ ವಿಶಾಲಾಕ್ಷಮ್ಮ ಸದಾಶಿವಯ್ಯ ಸಭಾಭವನದಲ್ಲಿ ಡಿ.26ರಿಂದ30ರವರೆಗೆ ಧನುರ್ಮಾಸದ ಅಂಗವಾಗಿ ಸಂಗೀತಯುಕ್ತ ಇಷ್ಠಲಿಂಗ ಮಹಾಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಸೇವಾ ಸಮಾಜ ಟ್ರಸ್ಟ್‌ ಅಧ್ಯಕ್ಷ ಟಿ.ಬಿ. ಶೇಖರ್‌ ತಿಳಿಸಿದರು.
Vijaya Karnataka Web musical istaalinga mahapooja from dec 26 30th
ಡಿ.26-30: ಸಂಗೀತಯುಕ್ತ ಇಷ್ಠಲಿಂಗ ಮಹಾಪೂಜೆ


ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್‌ನಿಂದ ಸುಮಾರು 12 ವರ್ಷಗಳಿಂದಲೂ ಈ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಅಂತೆಯೇ ಐದು ದಿನಗಳು ನಡೆಯಲಿರುವ ಈ ಕಾರ್ಯಕ್ರಮಕ್ಕೆ ಕೇದಾರ ಪೀಠದ ಶ್ರೀ ಹಿಮವತ್ಕೇದಾರ ಭೀಮಾಶಂಕರಲಿಂಗ ಜಗದ್ಗುರು ಆಗಮಿಸಲಿದ್ದಾರೆ ಎಂದರು.

ಡಿ.25ರಂದು ಸಂಜೆ 4 ಗಂಟೆಗೆ ಶ್ರೀ ಹಿಮವತ್ಕೇದಾರ ಭೀಮಾಶಂಕರಲಿಂಗ ಜಗದ್ಗುರುಗಳ ಪ್ರವೇಶ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ನಗರದ ಸೋಮೇಶ್ವರ ದೇವಸ್ಥಾನದಿಂದ ವಿಶಾಲಾಕ್ಷಮ್ಮ ಸಭಾಭವನದವರೆಗೆ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನೆರವೇರಲಿದೆ ಎಂದು ಹೇಳಿದರು.

ಡಿ.26ರಂದು ಸಂಜೆ 6.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ. ಕೇದಾರ ಪೀಠದ ಶ್ರೀ ಹಿಮವತ್ಕೇದಾರ ಭೀಮಾಶಂಕರಲಿಂಗ ಜಗದ್ಗುರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ರಂಭಾಪುರಿ ಖಾಸಾ ಶಾಖಾ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಕನ್ವಕುಪ್ಪೆ ಗವೀಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್‌ ಕಾರ್ಯದರ್ಶಿ ಎಚ್‌.ಎಸ್‌. ಭಸ್ಮಾಂಗಿ ರುದ್ರಯ್ಯಭಾಗವಹಿಸಲಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ, ಬೆಂಗಳೂರು ಮಹಾನಗರ ಪಾಲಿಕೆ ಮಹಾಪೌರ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಉದ್ಘಾಟನೆ ನೆರವೇರಿಸಲಿದ್ದಾರೆ.

ಐದು ದಿನಗಳು ನಡೆಯಲಿರುವ ಕಾರ್ಯಕ್ರಮದಲ್ಲಿ ಹಿಂದೂ ಸಮಾಜದ ಧಾರ್ಮಿಕ ಮುಖಂಡರು, ಸಾಹಿತಿಗಳು, ಬುದ್ಧಿಜೀವಿಗಳು ಆಧ್ಯಾತ್ಮಿಕ, ಸಾಂಸ್ಕೃತಿಕ ವಿಷಯಗಳ ಬಗ್ಗೆ ಪ್ರವಚನ ನಡೆಸಿಕೊಡುತ್ತಾರೆ. ಇದೇ ಸಂದರ್ಭದಲ್ಲಿ ಟ್ರಸ್ಟ್‌ನಿಂದ ಸಮಾಜದ ಹಿರಿಯರು ಮತ್ತು ಮುಖಂಡರುಗಳಿಗೆ ಗುರುರಕ್ಷೆ ನೀಡಿ ಗೌರವಿಸಲಾಗುವುದು ಎಂದು ನುಡಿದರು.

ಸುದ್ದಿಗೋಷ್ಠಿಯಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್‌ನ ಅಧ್ಯಕ್ಷ ಜಿ.ಎಚ್‌. ಪರಮಶಿವಯ್ಯ ಮುಖಂಡರಾದ ಜೆ.ಸಿ. ಓಹಿಲೇಶ್ವರ್‌, ಚಿದಾನಂದ್‌, ಭೀಷ್ಮಂಗಿ ರುದ್ರಯ್ಯ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ