ಆ್ಯಪ್ನಗರ

'ಕೇಂದ್ರದಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ': ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ ಎಂದ ಮಾಧುಸ್ವಾಮಿ!

ನಾನು ಬಿಜೆಪಿ ಸರಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ? ಎಂದು ಪ್ರಶ್ನಿಸಿರುವ ಮಾಧುಸ್ವಾಮಿ, ವಿಚಾರ ಸಂಕಿರಣದಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯವನ್ನು ಪ್ರಮುಖವಾಗಿ ಬಿಂಬಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

Vijaya Karnataka 29 Mar 2021, 8:26 pm
ತುಮಕೂರು: 'ಕೇಂದ್ರ ಸರಕಾರದ ಸರ್ವಾಧಿಕಾರಿ ಧೋರಣೆಯಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗಿದೆ' ಎಂಬ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಚಿವ ಜೆಸಿ ಮಾಧುಸ್ವಾಮಿ ಸೋಮವಾರ ಸಮಜಾಯಿಷಿ ನೀಡಿದ್ದಾರೆ.
Vijaya Karnataka Web jc madhuswamy


ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಬಗ್ಗೆ ಮಾತನಾಡಿಲ್ಲ. ವಿಚಾರ ಸಂಕಿರಣದಲ್ಲಿ ಮಾತನಾಡಿದ್ದನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ," ಎಂದರು.

ಕೇಂದ್ರ ಸರಕಾರ ಸರ್ವಾಧಿಕಾರಿ ಧೋರಣೆ ಮಾಡುತ್ತಿದೆ: ಸಚಿವ ಜೆ.ಸಿ.ಮಾಧುಸ್ವಾಮಿ
"ವಿಚಾರ ಸಂಕಿರಣಕ್ಕಷ್ಟೇ ಸೀಮಿತವಾಗಿ ಮಾತನಾಡಿದ್ದೆ. ಪ್ರಾದೇಶಿಕ ಭಾವನೆ, ಒಕ್ಕೂಟ ವ್ಯವಸ್ಥೆ ಬಗ್ಗೆ ಹೇಳುವಾಗ ಕಳೆದ 70 ವರ್ಷಗಳ ಕೇಂದ್ರದ ಸರ್ವಾಧಿಕಾರಿ ಧೋರಣೆ, ಕಾಲಕಾಲಕ್ಕೆ ಸರಕಾರಗಳು ತೆಗೆದುಕೊಳ್ಳುವ ನಿರ್ಣಯಗಳು ಪ್ರಾದೇಶಿಕ ಭಾವನೆ ಹೆಚ್ಚಾಗಲು ಕಾರಣ ಎಂದು ಹೇಳಿದ್ದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಅದನ್ನು ತಪ್ಪಾಗಿ ಗ್ರಹಿಸಿ ಮಾಧುಸ್ವಾಮಿ ರಾಜ್ಯದ ಜನರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅದಕ್ಕೆ ಅಭಿನಂದನೆಗಳು ಎಂದರು. ನಾನು ಬಿಜೆಪಿ ಸರಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ? ವಿಚಾರ ಸಂಕಿರಣದಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯವನ್ನು ಪ್ರಮುಖವಾಗಿ ಬಿಂಬಿಸುವ ಅಗತ್ಯವಿಲ್ಲ. ನಾನು ಹೇಳಿದ್ದು ಮೋದಿ ಸರಕಾರದ ಬಗ್ಗೆ ಅಲ್ಲ, ಹಿಂದಿನ ಸರಕಾರಗಳ ಬಗ್ಗೆ," ಎಂದು ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ