ಆ್ಯಪ್ನಗರ

ನನ್ನ ಖಾತೆಯಲ್ಲಿ ಇತಿಹಾಸ ಸೃಷ್ಟಿಸುತ್ತೇನೆ: ಜಮೀರ್ ಅಹ್ಮದ್

ನನಗೆ ಕೊಟ್ಟಿರುವ ಖಾತೆಯಲ್ಲಿ ಅನುಭವ ಇಲ್ಲ, ಆದರೂ ನಿಭಾಯಿಸುತ್ತೇನೆ. ಐದು ವರ್ಷದಲ್ಲಿ ನನ್ನ ಖಾತೆಯಲ್ಲಿ ಇತಿಹಾಸ ಸೃಷ್ಟಿಸಿ ಗಿನ್ನಿಸ್ ದಾಖಲೆ ಮಾಡುತ್ತೇನೆ ಎಂದು ನೂತನ ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ.

Vijaya Karnataka 9 Jun 2018, 6:07 pm
ತುಮಕೂರು: ನನಗೆ ಕೊಟ್ಟಿರುವ ಖಾತೆಯಲ್ಲಿ ಅನುಭವ ಇಲ್ಲ, ಆದರೂ ನಿಭಾಯಿಸುತ್ತೇನೆ. ಐದು ವರ್ಷದಲ್ಲಿ ನನ್ನ ಖಾತೆಯಲ್ಲಿ ಇತಿಹಾಸ ಸೃಷ್ಟಿಸಿ ಗಿನ್ನಿಸ್ ದಾಖಲೆ ಮಾಡುತ್ತೇನೆ ಎಂದು ನೂತನ ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ.
Vijaya Karnataka Web Jameer ahmad


ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಸಮ್ಮಿಶ್ರ ಸರಕಾರದಲ್ಲಿ ದೇವೇಗೌಡರ ಮಾತು ಕೇಳೋದ್ರಲ್ಲಿ ತಪ್ಪಿಲ್ಲ. ರಾಜ್ಯದ ಸಮಸ್ಯೆ ಇದ್ದಾಗ ದೇವೇಗೌಡರ ಮಾತೂ ಕೇಳಬೇಕು. ಅವರು ಮಾಜಿ ಪ್ರಧಾನಿ. ಖಾತೆ ಹಂಚಿಕೆಯಲ್ಲಿ ದೇವೇಗೌಡರಾಗಲಿ, ಕುಮಾರಸ್ವಾಮಿ ಅವರ ಪ್ರಭಾವ ಇಲ್ಲ ಎಂದಿದ್ದಾರೆ.

ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ‌ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್, ಕನ್ನಡದ ಜನತೆಯಲ್ಲಿ ಕ್ಷಮೆ ಕೇಳುತ್ತೇನೆ. ಕನ್ನಡ ಕಲಿಯದೇ ಇದ್ದದ್ದು ನನ್ನ ದುರದೃಷ್ಟ. ತಂದೆ ತಾಯಿ ನನಗೆ ಕನ್ನಡ ಕಲಿಸಿಲ್ಲ. ಹಾಗಾಗಿ ಕನ್ನಡ ಓದು‌ ಸರಿಯಾಗಿ ಬಂದಿಲ್ಲದೆ ಇಂಗ್ಲಿಷ್ ನಲ್ಲಿ ಪ್ರಮಾಣ ವಚನ ಮಾಡಿದೆ. ನಾನು ಇಂಗ್ಲಿಷ್ ಶಾಲೆಯಲ್ಲಿ ಓದಿದ್ದೆ ಎಂದಿದ್ದಾರೆ.

ಸಿದ್ಧಗಂಗಾ ಮಠಕ್ಕೆ ನೂತನ ಸಚಿವ ಆರ್. ಶಂಕರ್:
ಅರಣ್ಯ ಖಾತೆ ಸಚಿವ ಆರ್. ಶಂಕರ್ ಶನಿವಾರ ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಮಠಕ್ಕೆ ಆಗಮಿಸಿದ ಸಚಿವರು, ಶ್ರೀಗಳ ಬಳಿ ಉತ್ತಮ ಆಡಳಿತ ನಡೆಸಲು ಆಶೀರ್ವದಿಸುವಂತೆ ಕೇಳಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ