ಆ್ಯಪ್ನಗರ

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ನಗರ ಠಾಣೆ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

Vijaya Karnataka 3 Jun 2019, 5:00 am
ತುಮಕೂರು: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ನಗರ ಠಾಣೆ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ.
Vijaya Karnataka Web opium sales two accused arrested in tumkur
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ


ನಗರದ ಚರ್ಚ್‌ ವೃತ್ತದ ಬಳಿ ದ್ವಿಚಕ್ರ ವಾಹನದಲ್ಲಿ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ವಸೀಂ ಅಕ್ರಂ(29) ಹಾಗೂ ಆಸಿಂ(23) ಎಂಬಿಬ್ಬರನ್ನು ಶನಿವಾರ ಬಂಧಿಸಿದ್ದು, ಆರೋಪಿಗಳಿಂದ ಎರಡು ದ್ವಿಚಕ್ರ ವಾಹನ ಹಾಗೂ 200 ಗ್ರಾಂ ಗಾಂಜಾ ಸೊಪ್ಪನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ಪೈಕಿ ವಸೀಂ ಅಕ್ರಂ ಎಂಬಾತ ತುಮಕೂರು ನಗರದ ಗುಬ್ಬಿ ಗೇಟ್‌ ಬಿಬಿಜಾನ್‌ ಬಡಾವಣೆಯ ಎರಡನೇ ಕ್ರಾಸ್‌ ನಿವಾಸಿಯಾಗಿದ್ದು, ಟಿಂಬರ್‌ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದವನು. ಈತ ಮುಸ್ತಾಕ್‌ ಅಹಮದ್‌ ಎಂಬುವರ ಪುತ್ರ. ಇನ್ನೊಬ್ಬ ಆರೋಪಿ ಆಸಿಂ ಎಂಬಾತ ಶ್ರೀರಾಮನಗರದ 7ನೇ ಕ್ರಾಸ್‌ ನಿವಾಸಿಯಾಗಿದ್ದು, ಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದನು. ಈತ ರಿಯಾಜ್‌ ಅಹಮದ್‌ ಎಂಬುವರ ಪುತ್ರ.

ಇದೇ ಮೊದಲು: ನಗರದಲ್ಲಿ ವ್ಯಾಪಕವಾಗಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು ಕಳೆದ ಹಲವು ದಿನಗಳಿಂದ ಕೇಳಿಬಂದಿತ್ತು. ಕಾಲೇಜುಗಳ ಬಳಿ, ಬಸ್‌ ನಿಲ್ದಾಣ, ಪ್ರಮುಖ ವೃತ್ತಗಳಲ್ಲಿ ಯುವಕರನ್ನು ಗುರಿಯಾಗಿಸಿಕೊಂಡು ಗಾಂಜಾ ಸೇರಿದಂತೆ ಅಮಲು ಪದಾರ್ಥಗಳನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಸೇರಿದಂತೆ ಯುವಜನತೆಯ ಭವಿಷ್ಯ ಹಾಳಾಗುತ್ತಿದೆ ಎಂದು ಸಾರ್ವಜನಿಕವಾಗಿ ದೂರುಗಳು ಕೇಳಿಬರುತ್ತಿದ್ದವು. ಅದರ ಬೆನ್ನಲ್ಲೇ ಇದೇ ಪ್ರಥಮ ಬಾರಿಗೆ ಪೊಲೀಸರು ಇಬ್ಬರು ಗಾಂಜಾ ಮಾರಾಟಗಾರರನ್ನು ಬಂಧಿಸಿರುವುದಕ್ಕೆ ಸಾರ್ವನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಕಾರ್ಯಾಚರಣೆ ತಂಡದಲ್ಲಿ ನಗರ ಡಿವೈಎಸ್‌ಪಿ ತಿಪ್ಪೇಸ್ವಾಮಿ, ಪ್ರೊಬೆಷನರಿ ಡಿವೈಎಸ್‌ಪಿಗಳಾದ ಶಾಂತವೀರ, ಓಂಪ್ರಕಾಶ್‌ ಹಾಗೂ ಸಿಬ್ಬಂದಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ