ಆ್ಯಪ್ನಗರ

ಟಿಪ್ಪು ಜಯಂತಿಗೆ ವಿರೋಧ: ಬಸವರಾಜ

ರಾಜ್ಯದ ಮೈತ್ರಿ ಸರಕಾರ ಆಚರಿಸಲಿರುವ ಟಿಪ್ಪು ಜಯಂತಿಯನ್ನು ಸಂಪೂರ್ಣವಾಗಿ ವಿರೋಧಿಸಲಾಗುವುದು ಎಂದು ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿಯ ಜಿ.ಎಸ್‌. ಬಸವರಾಜು ತಿಳಿಸಿದರು.

Vijaya Karnataka 8 Nov 2018, 5:00 am
ತುಮಕೂರು: ರಾಜ್ಯದ ಮೈತ್ರಿ ಸರಕಾರ ಆಚರಿಸಲಿರುವ ಟಿಪ್ಪು ಜಯಂತಿಯನ್ನು ಸಂಪೂರ್ಣವಾಗಿ ವಿರೋಧಿಸಲಾಗುವುದು ಎಂದು ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿಯ ಜಿ.ಎಸ್‌. ಬಸವರಾಜು ತಿಳಿಸಿದರು.
Vijaya Karnataka Web oppose to tippu jayanti basavraju
ಟಿಪ್ಪು ಜಯಂತಿಗೆ ವಿರೋಧ: ಬಸವರಾಜ


ನಗರದ ಶ್ರೀರಾಮ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಪ್ಪು ಒಬ್ಬ ಮತಾಂಧ. ಹಿಂದೂ ದೇವಸ್ಥಾನ ಹಾಗೂ ಕ್ರೈಸ್ತರ ಚರ್ಚ್‌ಗಳ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿದ್ದಲ್ಲದೇ ಹಿಂದುಗಳ ಜತೆ ಕ್ರೂರವಾಗಿ ನಡೆದುಕೊಂಡಿದ್ದಾನೆ. ಹಿಂದುಗಳನ್ನು ಬಲವಂತವಾಗಿ ಮತಾಂತರ ಮಾಡಿಸಿದ ಟಿಪ್ಪು ಜಯಂತಿಯನ್ನು ಆಚರಣೆ ಮಾಡಬಾರದು ಎಂದು ಒತ್ತಾಯಿಸಿದರು.

ಈತ ದೇಶ ಪ್ರೇಮಿಯಲ್ಲ, ದೇಶದ್ರೋಹಿ. ಇಂತಹ ವ್ಯಕ್ತಿಯ ಜಯಂತಿ ಆಚರಣೆಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಂಬಂಧಿಸಿದ ಸಚಿವರು ಮುಂದಾಗಿರುವುದು ಮತ್ತು ಇದನ್ನು ವಿರೋಧಿಸುವವರ ಬಂಧನಕ್ಕೆ ಸೂಚನೆ ನೀಡಿರುವುದು ಸಂವಿಧಾನ ಬಾಹಿರ, ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಮಾಜಿ ಸಂಸದರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಎಚ್‌.ಎನ್‌.ಚಂದ್ರಶೇಖರ್‌, ಜಿ.ಕೆ.ಧನುಷ್‌, ಚಿ.ಉಮೇಶ್‌ ಮುಂತಾದವರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ