ತುಮಕೂರು: ಮಕ್ಕಳು ಆಡಿ, ನಲಿಯುವಂಥ ವಯಸ್ಸಿನಲ್ಲಿ ದುಡಿಯಲು ಕಳುಹಿಸುವ ಮಕ್ಕಳ ಪೋಷಕರೂ ಸಹ ಬಾಲಕಾರ್ಮಿಕತೆಗೆ ಮುಖ್ಯ ಕಾರಣ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ ಬೇಸರ ವ್ಯಕ್ತಪಡಿಸಿದರು.
ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಶಿಕ್ಷ ಣ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಸೊಸೈಟಿಯಿಂದ ಬುಧವಾರ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಆತಂಕ: ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯಿದೆ (1986)-2016ರನ್ವಯ 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಕೇವಲ ಕಾಯಿದೆಗಳನ್ನು ರೂಪಿಸಿ ಜಾರಿಗೆ ತರುವುದರಿಂದ ಬಾಲಕಾರ್ಮಿಕತೆ ನಿರ್ಮೂಲನೆಯಾಗುವುದಿಲ್ಲ. ಜಿಲ್ಲೆಯಲ್ಲಿ ಬಾಲಕಾರ್ಮಿಕತೆ ನಿಷೇಧ ಕಾಯಿದೆಯಡಿ ಎಷ್ಟು ಪ್ರಕರಣಗಳು ದಾಖಲಾಗಿವೆ ಎಂಬುದರ ಬಗ್ಗೆ ಅಂಕಿ-ಅಂಶಗಳು ಲಭ್ಯವಿಲ್ಲ. ಇದರಿಂದ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿಯೇ ಇಲ್ಲವೆನ್ನಲು ಸಾಧ್ಯವಿಲ್ಲ. ಹೋಟೆಲ್, ಗ್ಯಾರೇಜ್ಗೆ ಹೋಗಿ ನೋಡಿದರೆ ಬಾಲಕಾರ್ಮಿಕತೆ ಇನ್ನೂ ಜೀವಂತವಾಗಿರುವುದು ಕಾಣಸಿಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ನಮ್ಮ ಪರಂಪರೆ, ಉದ್ಯೋಗ, ಸಾಮಾಜಿಕ ಜೀವನದಲ್ಲಿ ತಲೆತಲಾಂತರದಿಂದ ರೂಢಿಯಲ್ಲಿ ಬಂದಿದೆ. ಒಂದು ಮಗು ಶಾಲೆಯಲ್ಲಿ ಓದುವುದನ್ನು ಬಿಟ್ಟು ತನ್ನ ತಂದೆಯೊಂದಿಗೆ ವ್ಯವಸಾಯ, ಮತ್ತಿತರ ಕಸುಬುಗಳಲ್ಲಿ, ವಾಣಿಜ್ಯೋದ್ದೇಶಕ್ಕಾಗಿ ಪಾಲಕರಿಗೆ ನೆರವಾಗುವುದು ಸಹ ಬಾಲಕಾರ್ಮಿಕ ಪದ್ಧತಿ ಎಂದೇ ಪರಿಗಣಿಸಲಾಗುತ್ತದೆ ಎಂದರು.
ಬೌದ್ಧಿಕ ಹಾಗೂ ಭೌತಿಕವಾಗಿ ಬೆಳವಣಿಗೆಯಾಗದ 14 ವರ್ಷದೊಳಗಿನ ಮಕ್ಕಳನ್ನು ದುಡಿಯಲು ಕಳುಹಿಸಬಾರದೆಂದು ಅಂತಾರಾಷ್ಟ್ರೀಯ ಬಾಲಕಾರ್ಮಿಕ ವಿರೋಧಿ ಕಾಯಿದೆಯನ್ನು ಜಾರಿಗೆ ತರಲಾಗಿದೆ. ಈ ಕಾಯಿದೆಯನ್ವಯ ಮಕ್ಕಳು ಕಲಿಯುವ ವಯಸ್ಸಿನಲ್ಲಿ ಅಮೂಲ್ಯ ಬಾಲ್ಯವನ್ನು ಅನುಭವಿಸಲು ಬಿಡಬೇಕು. ವಿದ್ಯಾವಂತರಾಗಿ ಮುಂದೆ ವಿಜ್ಞಾನಿಯೋ, ಕವಿಯೋ ಆಗುವ ಮಕ್ಕಳ ಭವಿಷ್ಯವನ್ನು ಮೊಟಕುಗೊಳಿಸಬಾರದು. ಕಡ್ಡಾಯ ಶಿಕ್ಷ ಣ ಒದಗಿಸಲು ಪೂರಕ ವಾತಾವರಣ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.
ವಲಸೆ ಬರುವ ಮಕ್ಕಳಿಗೂ ಶಿಕ್ಷಣ: ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷ ಣ ಒದಗಿಸುವ ನಿಟ್ಟಿನಲ್ಲಿ ಸರಕಾರವು ಶಾಲಾ ದಾಖಲಾತಿ ನಿಯಮಗಳನ್ನು ಸರಳೀಕರಣಗೊಳಿಸಿದೆ. ವಲಸೆ ಹೋಗುವ ಕುಟುಂಬದ ಮಕ್ಕಳು ಶಿಕ್ಷ ಣದಿಂದ ವಂಚಿತರಾಗಬಾರದೆಂಬ ದೃಷ್ಟಿಯಲ್ಲಿ ಮಕ್ಕಳು ನೆಲೆಯೂರುವ ಸಮೀಪದ ಶಾಲೆಯಲ್ಲಿ ಯಾವುದæೕ ದಾಖಲೆಗಳಿಲ್ಲದೆ ಶಾಲಾ ದಾಖಲಾತಿಗೆ ಅವಕಾಶ ನೀಡಬೇಕು ಎಂಬ ನಿಯಮವನ್ನು ಸರಕಾರ ಜಾರಿಗೆ ತಂದಿದೆ ಎಂದು ಡಿಡಿಪಿಐ ಎಂ.ಆರ್.ಕಾಮಾಕ್ಷಿ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್ ಮಾತನಾಡಿ, ಬಾಲಕಾರ್ಮಿಕತೆ ವಿರೋಧದ ಬಗ್ಗೆ ಮಾತನಾಡುವುದಕ್ಕಿಂತ ಅವರನ್ನು ಮುಖ್ಯವಾಹಿನಿಗೆ ತರುವಲ್ಲಿ ನಾವೆಲ್ಲಾ ಕಾರ್ಯಪ್ರವೃತ್ತರಾಗಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬಾಲ ಕಾರ್ಮಿಕ ಪ್ರಕರಣಗಳು ಪತ್ತೆಯಾದರೆ ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷ ಜೆ.ಕೆ.ಅನಿಲ್ ಮಾತನಾಡಿದರು. ಸೂಫಿಯಾ ಕಾನೂನು ಮಹಾವಿದ್ಯಾಲಯದ ಪ್ರಿನ್ಸಿಪಾಲ್ ಎಸ್.ರಮೇಶ್ ಉಪನ್ಯಾಸ ನೀಡಿದರು. ಎಡಿಸಿ ಕೆ.ಚನ್ನಬಸಪ್ಪ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ದಶರಥ, ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ರವಿಕುಮಾರ್, ಜಿಲ್ಲಾ ಆಸ್ಪತ್ರೆಯ ಡಾ.ಮಹಿಮಾ, ಜಿಪಂ ಉಪ ಕಾರ್ಯದರ್ಶಿ ಬಿ.ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.
ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಶಿಕ್ಷ ಣ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಸೊಸೈಟಿಯಿಂದ ಬುಧವಾರ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಆತಂಕ: ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯಿದೆ (1986)-2016ರನ್ವಯ 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಕೇವಲ ಕಾಯಿದೆಗಳನ್ನು ರೂಪಿಸಿ ಜಾರಿಗೆ ತರುವುದರಿಂದ ಬಾಲಕಾರ್ಮಿಕತೆ ನಿರ್ಮೂಲನೆಯಾಗುವುದಿಲ್ಲ. ಜಿಲ್ಲೆಯಲ್ಲಿ ಬಾಲಕಾರ್ಮಿಕತೆ ನಿಷೇಧ ಕಾಯಿದೆಯಡಿ ಎಷ್ಟು ಪ್ರಕರಣಗಳು ದಾಖಲಾಗಿವೆ ಎಂಬುದರ ಬಗ್ಗೆ ಅಂಕಿ-ಅಂಶಗಳು ಲಭ್ಯವಿಲ್ಲ. ಇದರಿಂದ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿಯೇ ಇಲ್ಲವೆನ್ನಲು ಸಾಧ್ಯವಿಲ್ಲ. ಹೋಟೆಲ್, ಗ್ಯಾರೇಜ್ಗೆ ಹೋಗಿ ನೋಡಿದರೆ ಬಾಲಕಾರ್ಮಿಕತೆ ಇನ್ನೂ ಜೀವಂತವಾಗಿರುವುದು ಕಾಣಸಿಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ನಮ್ಮ ಪರಂಪರೆ, ಉದ್ಯೋಗ, ಸಾಮಾಜಿಕ ಜೀವನದಲ್ಲಿ ತಲೆತಲಾಂತರದಿಂದ ರೂಢಿಯಲ್ಲಿ ಬಂದಿದೆ. ಒಂದು ಮಗು ಶಾಲೆಯಲ್ಲಿ ಓದುವುದನ್ನು ಬಿಟ್ಟು ತನ್ನ ತಂದೆಯೊಂದಿಗೆ ವ್ಯವಸಾಯ, ಮತ್ತಿತರ ಕಸುಬುಗಳಲ್ಲಿ, ವಾಣಿಜ್ಯೋದ್ದೇಶಕ್ಕಾಗಿ ಪಾಲಕರಿಗೆ ನೆರವಾಗುವುದು ಸಹ ಬಾಲಕಾರ್ಮಿಕ ಪದ್ಧತಿ ಎಂದೇ ಪರಿಗಣಿಸಲಾಗುತ್ತದೆ ಎಂದರು.
ಬೌದ್ಧಿಕ ಹಾಗೂ ಭೌತಿಕವಾಗಿ ಬೆಳವಣಿಗೆಯಾಗದ 14 ವರ್ಷದೊಳಗಿನ ಮಕ್ಕಳನ್ನು ದುಡಿಯಲು ಕಳುಹಿಸಬಾರದೆಂದು ಅಂತಾರಾಷ್ಟ್ರೀಯ ಬಾಲಕಾರ್ಮಿಕ ವಿರೋಧಿ ಕಾಯಿದೆಯನ್ನು ಜಾರಿಗೆ ತರಲಾಗಿದೆ. ಈ ಕಾಯಿದೆಯನ್ವಯ ಮಕ್ಕಳು ಕಲಿಯುವ ವಯಸ್ಸಿನಲ್ಲಿ ಅಮೂಲ್ಯ ಬಾಲ್ಯವನ್ನು ಅನುಭವಿಸಲು ಬಿಡಬೇಕು. ವಿದ್ಯಾವಂತರಾಗಿ ಮುಂದೆ ವಿಜ್ಞಾನಿಯೋ, ಕವಿಯೋ ಆಗುವ ಮಕ್ಕಳ ಭವಿಷ್ಯವನ್ನು ಮೊಟಕುಗೊಳಿಸಬಾರದು. ಕಡ್ಡಾಯ ಶಿಕ್ಷ ಣ ಒದಗಿಸಲು ಪೂರಕ ವಾತಾವರಣ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.
ವಲಸೆ ಬರುವ ಮಕ್ಕಳಿಗೂ ಶಿಕ್ಷಣ: ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷ ಣ ಒದಗಿಸುವ ನಿಟ್ಟಿನಲ್ಲಿ ಸರಕಾರವು ಶಾಲಾ ದಾಖಲಾತಿ ನಿಯಮಗಳನ್ನು ಸರಳೀಕರಣಗೊಳಿಸಿದೆ. ವಲಸೆ ಹೋಗುವ ಕುಟುಂಬದ ಮಕ್ಕಳು ಶಿಕ್ಷ ಣದಿಂದ ವಂಚಿತರಾಗಬಾರದೆಂಬ ದೃಷ್ಟಿಯಲ್ಲಿ ಮಕ್ಕಳು ನೆಲೆಯೂರುವ ಸಮೀಪದ ಶಾಲೆಯಲ್ಲಿ ಯಾವುದæೕ ದಾಖಲೆಗಳಿಲ್ಲದೆ ಶಾಲಾ ದಾಖಲಾತಿಗೆ ಅವಕಾಶ ನೀಡಬೇಕು ಎಂಬ ನಿಯಮವನ್ನು ಸರಕಾರ ಜಾರಿಗೆ ತಂದಿದೆ ಎಂದು ಡಿಡಿಪಿಐ ಎಂ.ಆರ್.ಕಾಮಾಕ್ಷಿ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್ ಮಾತನಾಡಿ, ಬಾಲಕಾರ್ಮಿಕತೆ ವಿರೋಧದ ಬಗ್ಗೆ ಮಾತನಾಡುವುದಕ್ಕಿಂತ ಅವರನ್ನು ಮುಖ್ಯವಾಹಿನಿಗೆ ತರುವಲ್ಲಿ ನಾವೆಲ್ಲಾ ಕಾರ್ಯಪ್ರವೃತ್ತರಾಗಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬಾಲ ಕಾರ್ಮಿಕ ಪ್ರಕರಣಗಳು ಪತ್ತೆಯಾದರೆ ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷ ಜೆ.ಕೆ.ಅನಿಲ್ ಮಾತನಾಡಿದರು. ಸೂಫಿಯಾ ಕಾನೂನು ಮಹಾವಿದ್ಯಾಲಯದ ಪ್ರಿನ್ಸಿಪಾಲ್ ಎಸ್.ರಮೇಶ್ ಉಪನ್ಯಾಸ ನೀಡಿದರು. ಎಡಿಸಿ ಕೆ.ಚನ್ನಬಸಪ್ಪ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ದಶರಥ, ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ರವಿಕುಮಾರ್, ಜಿಲ್ಲಾ ಆಸ್ಪತ್ರೆಯ ಡಾ.ಮಹಿಮಾ, ಜಿಪಂ ಉಪ ಕಾರ್ಯದರ್ಶಿ ಬಿ.ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.