ಆ್ಯಪ್ನಗರ

ಮಣ್ಣಿನ ಮಗ ಎಂದು ನನ್ನ ತಂದೆ ನಾಮಕರಣ ಮಾಡಿಲ್ಲ, ಜನ ಪ್ರೀತಿಯಿಂದ ಕರೆಯುತ್ತಿದ್ದಾರೆ: ದೇವೇಗೌಡ

ಕೆಲವು ಕ್ಷೇತ್ರಗಳಲ್ಲಿ ಗೆಲ್ಲಲ್ಲು ನಾವು ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದೇವೆ. ತುಮಕೂರು ಜಿಲ್ಲೆಯ ಜವಾಬ್ದಾರಿಯನ್ನು ನಾನು ತೆಗೆದುಕೊಂಡಿದ್ದೇನೆ. ಈ ಚುನಾವಣೆಯಲ್ಲಿ ಸ್ವಂತ ಶಕ್ತಿಯಿಂದ ಗೆಲ್ಲುವ ಪ್ರಯತ್ನ ಮಾಡುತ್ತೇವೆ ಎಂದು ದೇವೇಗೌಡ ತಿಳಿಸಿದರು.

Vijaya Karnataka Web 4 Dec 2021, 3:48 pm
ತುಮಕೂರು: ಮಣ್ಣಿನ ಮಗ ಅಂತಾ ನನ್ನ ತಂದೆ ನನಗೆ ನಾಮಕರಣ ಮಾಡಿಲ್ಲಾ. ಯಾರು ನಾಮಕರಣ ಮಾಡಿದ್ರೋ ನನಗೆ ಗೊತ್ತಿಲ್ಲಾ. ಯಾರು ಹೇಳಿದ್ರೋ, ಯಾವಾಗ ಹೇಳಿದ್ರೋ ಗೊತ್ತಿಲ್ಲಾ. ಅದನ್ನ ಹೇಳಿಕೊಂಡು ಬರ್ತಿದ್ದಾರೆ, ಯಾರು ಅಂತಾ ಹುಡುಕಲಿ. ಹೀಗೆ ಹೇಳಿ ಅಂತಾ ನಾನು ಯಾರಿಗಾದರೂ ಹೇಳಿದ್ದೀನಾ. ಜನರಿಗೆ ನನ್ನ ಮೇಲೆ ಪ್ರೀತಿ ಹಾಗೂ ಹೋರಾಟದ ಮೇಲೆ ನಂಬಿಕೆ ಇದೆ. ಅದಕ್ಕಾಗಿ ಮಣ್ಣಿನ ಮಗ ಎಂದು ಕೂಗುತ್ತಾರೆ ಎಂದು ದೇವೇಗೌಡ ತಿಳಿಸಿದರು.
Vijaya Karnataka Web ದೇವೇಗೌಡ
ದೇವೇಗೌಡ


ತುಮಕೂರಿನ ಬಳಗೆರೆಯ ಶಾಸಕ ಗೌರಿಶಂಕರ್ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಎಂಎಲ್ ಸಿ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಅನಿಲ್‌ಕುಮಾರ್ ಅವರನ್ನು ಸ್ಪರ್ಧೆಗೆ ನಿಲ್ಲಿಸಿದ್ದೇವೆ. ಸ್ಥಳೀಯ ಸಂಸ್ಥೆಗಳ‌ ಚುನಾಯಿತ ಮತದಾರರನ್ನು ಭೇಟಿಯಾಗುತ್ತಿದ್ದೇವೆ. 7 ಕ್ಷೇತ್ರಗಳಲ್ಲಿ ಮಾತ್ರ ನಾವು ಸ್ಪರ್ಧೆ ಮಾಡುತ್ತಿದ್ದೇವೆ. ಎಲ್ಲರೂ ಚುನಾವಣೆಯಲ್ಲಿ ಗೆಲ್ಲಲೇಬೇಕು. ಶಾಸಕರು, ಮಾಜಿ ಶಾಸಕರು, ಮುಖಂಡರು ಎಲ್ಲರೂ ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಜೆಡಿಎಸ್‌ ಬಿಜೆಪಿಯ ಬಿ ಟೀಂ ಅಂತ ಸಿದ್ದರಾಮಯ್ಯ ಕುತ್ತಿಗೆಗೆ ಸ್ಲೇಟ್‌ ಹಾಕಿ ತಿರುಗಾಡಲಿ; ಎಚ್‌ಡಿಕೆ ಕಿಡಿ

ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಕ್ಷೇತ್ರಗಳಲ್ಲಿ ಬಹಳ‌ ಶ್ರದ್ಧೆಯಿಂದ ಕೆಲಸ‌ ಮಾಡುತ್ತಿದ್ದೇವೆ. ವಿಜಯಪುರದಲ್ಲಿ 890 ವೋಟ್‌ಗಳಿಗೆ, ಕಲಬುರಗಿಯಲ್ಲಿ ಸಾವಿರ ಚಿಲ್ಲರೆ ವೋಟ್‌ಗಳಿವೆ. ಬೀದರ್‌ನಲ್ಲಿ 490, ರಾಯಚೂರಿನಲ್ಲಿ 890 ವೋಟ್‌ಗಳಿವೆ. ಧಾರವಾಡ, ಗದಗ, ಹಾವೇರಿಯಲ್ಲಿ ವೋಟ್‌ಗಳಿವೆ. ಅಲ್ಲಿ ನಾವು ಅಭ್ಯರ್ಥಿಗಳನ್ನು ಹಾಕಲು ಸಾಧ್ಯವಾಗಿಲ್ಲ ಎಂದು ದೇವೇಗೌಡರು ತಿಳಿಸಿದರು.

ಇಲ್ಲಿ ಕಾಂಗ್ರೆಸ್, ಬಿಜೆಪಿಯವರ ಹೆಚ್ಚಿನ ಮತಗಳಿವೆ. ಭಾನುವಾರ ಸಭೆ ನಡೆಸಿ ಇಲ್ಲಿನ ಮತಗಳನ್ನು ಯಾರಿಗೆ ಕೊಡಬೇಕು ಎಂದು ತಿಳಿಸುತ್ತೇವೆ. ಕುಮಾರಸ್ವಾಮಿ ಅವರು ಆ ಭಾಗದ ಮುಖಂಡರ ಸಭೆ ನಡೆಸಲಿದ್ದಾರೆ. ಯಾರಿಗೆ ಬೆಂಬಲ ನೀಡಬೇಕು ಎಂದು ತೀರ್ಮಾನ ಮಾಡುತ್ತೇವೆ ಎಂದು ಜೆಡಿಎಸ್‌ ವರಿಷ್ಠ ನಾಯಕರು ತಿಳಿಸಿದರು.

ದೇವೇಗೌಡರ ಪ್ರಧಾನಿ ಮೋದಿ ಭೇಟಿ ವಿಚಾರ...

ಪ್ರಧಾನಿಗೆ ಇರುವಂತಾ ಕಷ್ಟಾನಾ ಒಂದು ಮಾತಲ್ಲಿ ಹೇಳೋಕೆ‌ ಆಗಲ್ಲಾ. ಡೀ ಪ್ರಪಂಚವನ್ನ ಪೀಡಿಸ್ತಿರೋ ಕೊರೋನಾನ ಎದುರಿಸೋದು ಅಷ್ಟು ಸುಲಭ ಅಲ್ಲಾ. ನಮ್ಮ ದೇಶ ಚಿಕ್ಕ ದೇಶವಲ್ಲಾ,130 ಕೋಟಿ ಜನಸಂಖ್ಯೆ ಇರೋ ದೇಶ. ಇದರಲ್ಲಿನೇದ್ರೂ ಆರ್ಥಿಕ ಅವ್ಯವಹಾರ ಇದ್ರೆ ಅಧಿಕೃತ ವಿರೋಧ ಪಕ್ಷ ಇದರ ಬಗ್ಗೆ ವ್ಯಾಖ್ಯಾನ ಮಾಡ್ತಿದೆ ಎಂದು ತಿಳಿಸಿದರು.

ದೇಶದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ರೆ ಬೆಲೆ‌ ಇಲ್ಲಾ. ಇಲ್ಲಿ ಬಿಜೆಪಿ, ಕಾಂಗ್ರೆಸ್‌ನವ್ರು ಸತ್ಯವಂತರು ಅಂತಾ ಹೇಳೋರು ಇದ್ದರೆ ಚರ್ಚೆ ಮಾಡೋಣ ಎಂದು ದೇವೇಗೌಡರು ಹೇಳಿದರು.

ಬೇರೆ ಪಕ್ಷಕ್ಕೆ ಜೆಡಿಎಸ್ ಬೆಂಬಲ ವಿಚಾರ

ಆಯಾ ಕ್ಷೇತ್ರದಲ್ಲಿ ಸ್ಥಳೀಯ ನಾಯಕರಿಗೆ ಮೊದಲ ಶತ್ರುಗಳು ಯಾರು ಅಂತಾ ಅವರೇ ತೀರ್ಮಾನ ಮಾಡ್ತಾರೆ. ಬೆಂಬಲ ನಿರ್ಧಾರ ಅವರಿಗೆ ಬಿಟ್ಟಿದ್ದು. ಈ ಚುನಾವಣೆ ಅಷ್ಟೆ ಅಲ್ಲಾ. 2023 ಚುನಾವಣೆಯಲ್ಲಿ ಇದೇ ದೇವೇಗೌಡ ತುಮಕೂರಿನಲ್ಲಿ ನಿಮ್ಮ ಮುಂದೆ ಇರ್ತಾನೆ. 2024 ಲೋಕಸಭೆ ಚುನಾವಣೆಯಲ್ಲೂ ದೇವೇಗೌಡ ತುಮಕೂರಿನಲ್ಲಿ‌ ಇರ್ತಾನೆ ಎಂದು ಹೇಳಿದರು.

ಮೇಲ್ಮನೆ ಚುನಾವಣೆ ಮೈತ್ರಿ: ಭಾನುವಾರದೊಳಗೆ ನಿರ್ಧಾರ ಎಂದ ಕುಮಾರಸ್ವಾಮಿ

2024ಕ್ಕೆ ಯಾರು ಕ್ಯಾಂಡಿಟೇಟ್ ಆಗ್ತಾರೆ ಅಂತಾ ತುಮಕೂರಿನ ಮಹಾಜನತೆ ತೀರ್ಮಾನ ಮಾಡ್ತಾರೆ ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ