ಆ್ಯಪ್ನಗರ

ರಾಮಲಿಂಗಾರೆಡ್ಡಿ ಪಕ್ಷಕ್ಕೆ ಹಾನಿಯನ್ನುಂಟು ಮಾಡುವ ಕೆಲಸ ಮಾಡಲ್ಲ: ಸಚಿವ ಖಾದರ್

ಮೈತ್ರಿ ಸರಕಾರಕ್ಕೆ ಕಂಟಕ ಶುರುವಾಗಿದ್ದು, ಸಮ್ಮಿಶ್ರ ಸರಕಾರದ 12-14 ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Vijaya Karnataka Web 6 Jul 2019, 12:14 pm
ತುಮಕೂರ: ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿರಿಯ ನಾಯಕರಾಗಿದ್ದು, ಪಕ್ಷಕ್ಕೆ ಹಾನಿಯನ್ನುಂಟು ಮಾಡುವ ಆಲೋಚನೆ ಮಾಡುವುದಿಲ್ಲ ಎಂದು ಸಚಿವ ಯು.ಟಿ.ಖಾದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Vijaya Karnataka Web u t khadar


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾತನಾಡಿದ ಅವರು, ರಾಮಲಿಂಗಾರೆಡ್ಡಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಅವರ ಮೇಲೆ ನಂಬಿಕೆ ಮತ್ತು ಆತ್ಮವಿಶ್ವಾಸ ಇದೆ. ಯಾವುದೇ ಕಾರಣಕ್ಕೂ ಅವರು ರಾಜೀನಾಮೆ ನೀಡುವುದಿಲ್ಲ ಎಂದಿದ್ದಾರೆ.

ಅಮೆರಿಕದಿಂದ ಸಿಎಂ ಮರಳುವ ಮುನ್ನ 14 ಶಾಸಕರ ರಾಜೀನಾಮೆ?

ಹಿರಿಯ ನಾಯಕರಾಗಿರುವ ರಾಮಲಿಂಗಾರೆಡ್ಡಿ ಅಧಿಕಾರಕ್ಕೆ ಆಸೆಪಡುವ ವ್ಯಕ್ತಿ ಅಲ್ಲ. ಏನಾದರೂ ಇದ್ದರೆ ರಾಜ್ಯ ಮತ್ತು ರಾಷ್ಟ್ರ ನಾಯಕರ ಜತೆ ಚರ್ಚೆ ಮಾಡುತ್ತಾರೆ. ಕಾಂಗ್ರೆಸ್-ಜೆಡಿಎಸ್ ಸರಕಾರ ಸುಭದ್ರವಾಗಿದೆ. ಸರಕಾರ ಉರುಳಿಸಲು ಬಿಜೆಪಿಯವರು ತೆರೆಮರೆಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಆದರೆ, ಅದು ಯಶಸ್ವಿಯಾಗಲ್ಲ ಎಂದು ಹೇಳಿದ್ದಾರೆ.

ರಾಮಲಿಂಗಾರೆಡ್ಡಿ ಹಾಗೂ ಅವರ ಪುತ್ರಿ ಸೌಮ್ಯ ರೆಡ್ಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ