ಆ್ಯಪ್ನಗರ

ಶಾಲಾ ವಾಹನ ಪಲ್ಟಿ: 15 ಮಕ್ಕಳಿಗೆ ಗಾಯ

ಶಾಲಾ ವಾಹನ ಉರುಳಿ ಬಿದ್ದು ಸುಮಾರು 15 ಮಕ್ಕಳು ಗಾಯಗೊಂಡಿರುವ ಘಟನೆ ತಾಲೂಕಿನ ವಿರೂಪಸಂದ್ರ ಗ್ರಾಮದ ಬಳಿ ಶುಕ್ರವಾರ ನಡೆದಿದೆ.

Vijaya Karnataka 29 Dec 2018, 5:00 am
ತುಮಕೂರು: ಶಾಲಾ ವಾಹನ ಉರುಳಿ ಬಿದ್ದು ಸುಮಾರು 15 ಮಕ್ಕಳು ಗಾಯಗೊಂಡಿರುವ ಘಟನೆ ತಾಲೂಕಿನ ವಿರೂಪಸಂದ್ರ ಗ್ರಾಮದ ಬಳಿ ಶುಕ್ರವಾರ ನಡೆದಿದೆ.
Vijaya Karnataka Web school vehicle pault 15 children injured
ಶಾಲಾ ವಾಹನ ಪಲ್ಟಿ: 15 ಮಕ್ಕಳಿಗೆ ಗಾಯ

ತಾಲೂಕಿನ ಹೊನ್ನುಡಿಕೆ ಹ್ಯಾಂಡ್‌ಪೋಸ್ಟ್‌ ಬಳಿ ಇರುವ ಗ್ರೀಷ್ಮ ಖಾಸಗಿ ಶಾಲೆಯ ಬಸ್‌ ಎಂದಿನಂತೆ ಮಕ್ಕಳನ್ನು ಶಾಲೆಗೆ ಕರೆತರಲು ಆ ಭಾಗದ ಹಳ್ಳಿಗಳಿಗೆ ತೆರಳಿತ್ತು. ಹಳ್ಳಿಗಳಿಂದ ಮಕ್ಕಳನ್ನು ಹತ್ತಿಸಿಕೊಂಡು ಶಾಲೆಯತ್ತ ವಾಪಸ್‌ ಬರುತ್ತಿದ್ದಾಗ ಮಾರ್ಗಮಧ್ಯೆ ವಿರೂಪಸಂದ್ರ ಗ್ರಾಮದ ಬಳಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಬಸ್‌ನಲ್ಲಿ ಸುಮಾರು 15ಕ್ಕೂ ಅಧಿಕ ಎಲ್‌ಕೆಜಿ, ಯುಕೆಜಿ, 1ನೇ ಮತ್ತು 2ನೇ ತರಗತಿಯ ಮಕ್ಕಳು ಇದ್ದರೆನ್ನಲಾಗಿದೆ.

ಘಟನೆಯಲ್ಲಿ ಬಸ್‌ನಲ್ಲಿದ್ದ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್‌ ಪಲ್ಟಿ ಹೊಡೆಯುತ್ತಿದ್ದಂತೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಬಸ್‌ನಲ್ಲಿ ಕಿರುಚಾಡುತ್ತಿದ್ದ ಮಕ್ಕಳನ್ನು ಹೊರ ತಂದು ರಕ್ಷಿಸಿದ್ದಾರೆ. ಬಳಿಕ 108 ತುರ್ತು ವಾಹನಕ್ಕೆ ಕರೆ ಮಾಡಿ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸುವಲ್ಲಿ ನೆರವಾಗಿದ್ದಾರೆ.

ಗ್ರಾಮಸ್ಥರ ಆಕ್ರೋಶ: ಘಟನೆ ಬಳಿಕ ಸ್ಥಳದಲ್ಲೇ ಬಸ್‌ ಬಿಟ್ಟು ಪರಾರಿಯಾದ ಚಾಲಕನ ವಿರುದ್ಧ ಹಾಗೂ ಘಟನೆ ನಡೆದು ಗಂಟೆ ಕಳೆದರೂ ಸ್ಥಳಕ್ಕೆ ಬಾರದ ಶಾಲೆಯ ಮುಖ್ಯಸ್ಥರ ವಿರುದ್ಧ ಪೋಷಕರು ಮತ್ತು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಹೆಬ್ಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ