ಆ್ಯಪ್ನಗರ

ಶಿರಾ ಉಪಚುನಾವಣೆ: ಸಮಿತಿಯಲ್ಲಿ ಚರ್ಚೆ ಬಳಿಕವಷ್ಟೇ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಫೈನಲ್ ?

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಸಮಿತಿ ರಚನೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ . ಸಮಿತಿಯಲ್ಲಿ ಚರ್ಚೆ ನಡೆಸಿದ ಬಳಿಕ ಅಭ್ಯರ್ಥಿ ಆಯ್ಕೆ ಅಂತಿಮಗೊಳ್ಳಲಿದೆ. ಈ ಕುರಿತಾದ ಮಾಹಿತಿ ಇಲ್ಲಿದೆ.

Vijaya Karnataka Web 6 Sep 2020, 9:09 am
ತುಮಕೂರು: ಜೆಡಿಎಸ್‌ ಶಾಸಕರಾಗಿದ್ದ ಬಿ. ಸತ್ಯನಾರಾಯಣ ನಿಧನದಿಂದ ತೆರವಾಗಿರುವ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಗರಿಗೆದರಿದೆ. ಜೆಡಿಎಸ್‌ ಪ್ರಾಬಲ್ಯವಿರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುವುದು ಇನ್ನೂ ನಿರ್ಧಾರವಾಗಿಲ್ಲ. ಈ ನಿಟ್ಟಿನಲ್ಲಿ ಸಮಿತಿ ರಚನೆ ಮಾಡಿ ಚರ್ಚೆ ನಡೆಸಿದ ಬಳಿಕ ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸಲು ಕಾಂಗ್ರೆಸ್ ನಿರ್ಧರಿಸಿದೆ.
Vijaya Karnataka Web shira


ಅಭ್ಯರ್ಥಿ ಆಯ್ಕೆ ವಿಚಾರವಾಗಿ ಶನಿವಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಚರ್ಚೆ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಡಿಕೆಶಿ ಸೂಚನೆ ಮೇರೆಗೆ ಸಲೀಂ ಅಹ್ಮದ್ ಚರ್ಚೆ ನಡೆಸಿದರು.

ಮತ್ತೆ ಲಕ್ಷ ಸಮೀಪಿಸಿದ ಸಕ್ರಿಯ ಪ್ರಕರಣ: ಒಂದೇ ದಿನ 9746 ಸೋಂಕು!

ಇದೇ ವೇಳೆ ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಜೊತೆಗೆ ಫೋನ್‌ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಶಿರಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಕಾಂಗ್ರೆಸ್‌ನಿಂದ ಹಲವು ಆಕಾಂಕ್ಷಿಗಳಿದ್ದು ಈ ಪೈಕಿ ಯಾರು ಎಂಬುವುದು ನಿರ್ಧಾರವಾಗಿಲ್ಲ.

ಅಭ್ಯರ್ಥಿ ಆಯ್ಕೆ ನಿಟ್ಟಿನಲ್ಲಿ ಸಮಿತಿ ರಚನೆ ಮಾಡಲು ಪಕ್ಷ ಮುಂದಾಗಿದ್ದು ಸಮಿತಿಯಲ್ಲಿ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನು ಜೆಡಿಎಸ್‌ ಪಕ್ಷದಿಂದ ಬಿ. ಸತ್ಯನಾರಾಯಣ್ ಕುಟುಂಬಸ್ಥರನ್ನೇ ಅಖಾಡಕ್ಕೆ ಇಳಿಸಲು ಮುಂದಾಗಿದೆ. ಸತ್ಯನಾರಾಯಣ್ ಅವರ ಪುತ್ರ ಸತ್ಯ ಪ್ರಕಾಶ್ ಅವರಿಗೆ ಟಿಕೆ ನೀಡುವುದು ಬಹುತೇಕ ಖಚಿತವಾಗಿದೆ. ಈ ನಡುವೆ ಕಲ್ಕೆರೆ ರವಿಕುಮಾರ್, ಸಿ. ಆರ್ ಉಮೇಶ್ ಕೂಡಾ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ