ಆ್ಯಪ್ನಗರ

ಸಿದ್ಧಗಂಗಾ ಶ್ರೀಗಳಿಗೆ ಕೃತಕ ಉಸಿರಾಟ ಮುಂದುವರಿಕೆ: ಡಾ.ಮಂಜುನಾಥ್

ಶ್ರೀಗಳ ಹೃದಯಬಡಿತ, ರಕ್ತದೊತ್ತಡದ ಎಲ್ಲವೂ ಸಹಜವಾಗಿದೆ. ಶ್ರೀಗಳ ಶಕ್ತಿ ಕ್ಷೀಣಿಸಿದೆ. ಸ್ವಂತ ಉಸಿರಾಟದ ಶಕ್ತಿಯ ಕೊರತೆ‌ ಇದೆ. ಹೀಗಾಗಿ ಕೃತಕ ಉಸಿರಾಟದ ವ್ಯವಸ್ಥೆ ಮುಂದುವರಿಸಲಾಗಿದೆ.

Vijaya Karnataka Web 11 Jan 2019, 6:13 pm
ತುಮಕೂರು: ಸಿದ್ಧಗಂಗಾ ಶ್ರೀಗಳಿಗೆ ಸ್ವತಃ ಉಸಿರಾಡಲು ಸಮಸ್ಯೆ ಇದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ತಿಳಿಸಿದರು.
Vijaya Karnataka Web ಡಾ. ಮಂಜುನಾಥ್‌
ಡಾ. ಮಂಜುನಾಥ್‌


ಸಿದ್ಧಗಂಗಾ ಶ್ರೀಗಳ ಆರೋಗ್ಯ ತಪಾಸಣೆ ಬಳಿಕ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜ್ಯ ಸರಕಾರದ ನಿರ್ದೇಶನದಂತೆ ನಾವು ಐದು ಜನ ವೈದ್ಯರು ಬಂದಿದ್ದೇವೆ. ನಾವೆಲ್ಲಾ ಜಂಟಿಯಾಗಿ ಶ್ರೀಗಳ ತಪಾಸಣೆ ಮಾಡಿ, ಮಾಹಿತಿ ಪಡೆದಿದ್ದೇವೆ ಎಂದರು.

ಸಿದ್ಧಗಂಗಾ ಆಸ್ಪತ್ರೆಯ ಐಸಿಯು ವ್ಯವಸ್ಥೆ ವಿಶ್ವ ದರ್ಜೆಯದ್ದು. ಹೊರದೇಶಗಳಲ್ಲಿ ಇರುವಂತಹ ವ್ಯವಸ್ಥೆಯನ್ನು ಇಲ್ಲಿ ಮಾಡಿದ್ದಾರೆ‌. ಶ್ರೀಗಳ ಹೃದಯಬಡಿತ, ರಕ್ತದೊತ್ತಡದ ಎಲ್ಲವೂ ಸಹಜವಾಗಿದೆ. ಶ್ರೀಗಳ ಶಕ್ತಿ ಕ್ಷೀಣಿಸಿದೆ. ಸ್ವಂತ ಉಸಿರಾಟದ ಶಕ್ತಿಯ ಕೊರತೆ‌ ಇದೆ. ಹೀಗಾಗಿ ಕೃತಕ ಉಸಿರಾಟದ ವ್ಯವಸ್ಥೆ ಮುಂದುವರೆಸಿದ್ದೇವೆ ಎಂದು ಮಂಜುನಾಥ್‌ ತಿಳಿಸಿದರು.

ಶ್ರೀಗಳು ಕಣ್ಣುಬಿಟ್ಟು ನೋಡುತ್ತಿದ್ದಾರೆ. ಅವರ ಆರೋಗ್ಯ ಗುಣವಾಗುವ ಆಶಾಭಾವನೆ‌ ಇದೆ‌. ಬಿಜಿಎಸ್ ಹಾಗೂ ಚೆನ್ನೈನಾ ರೇಲಾ ಆಸ್ಪತ್ರೆ ವೈದ್ಯರು ನಿರಂತರವಾಗಿ ಸಂಪರ್ಕದಲ್ಲಿ ಇದ್ದಾರೆ. ಶ್ರೀಗಳನ್ನು ಬೇರೆ ಕಡೆ ಶಿಫ್ಟ್ ಮಾಡುವ ಅವಶ್ಯಕತೆ ಇಲ್ಲ. ಪ್ರೋಟೀನ್ ಅಂಶ ಏರಿಕೆಯಾಗಿದೆ‌. ಸೋಂಕು ಕಡಿಮೆಯಾಗಿದೆ.
ಅವರಿಗೆ ಉಸಿರಾಟದ ಶಕ್ತಿ ಕಡಿಮೆ ಇದೆ. ಹೆಚ್ಚು ದಿನಗಳ ಚಿಕಿತ್ಸೆಯ ಅವಶ್ಯಕತೆ‌ ಇದೆ. ಅದು ಎಷ್ಟು ದಿನಗಳ ವರೆಗೆ ಎನ್ನುವುದನ್ನು ಕಾಲ ನಿರ್ಧರಿಸುತ್ತದೆ ಎಂದರು.

ಶ್ರೀಗಳ ಬೆನ್ನು ಬಾಗಿರುವುದರಿಂದ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಡಾ.ಮಂಜುನಾಥ್ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ