ಆ್ಯಪ್ನಗರ

ನಾಳೆ ಶ್ರೀ ಶಿವಕುಮಾರ ಸ್ವಾಮೀಜಿ 112ನೇ ಜಯಂತಿ

ಶ್ರೀಗಳು ಲಿಂಗೈಕರಾದ ನಂತರ ನಡೆಯುತ್ತಿರುವ ಮೊದಲ ಜಯಂತಿ ಹಾಗೂ ಗುರುವಂದನೆ ಸಮಾರಂಭ ಇದಾಗಿದೆ. ಅಂದು ಬೆಳಗ್ಗೆ ಶ್ರೀಗಳ ಗದ್ದುಗೆಗೆ ವಿಶೇಷ ಅಲಂಕಾರ, ಪೂಜೆ, ಭಜನೆ, ಕೀರ್ತನೆ ಆಯೋಜಿಸಲಾಗಿದೆ. ದಿನವಿಡೀ ಶ್ರೀಗಳ ಸ್ಮರಣೆ ಜರುಗಲಿದೆ.

Vijaya Karnataka 31 Mar 2019, 12:17 pm
ತುಮಕೂರು: ಸಿದ್ಧಗಂಗಾ ಮಠದ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 112ನೇ ಜಯಂತಿ ಹಾಗೂ ಗುರುವಂದನೆ ಸಮಾರಂಭವನ್ನು ಏ.1ರಂದು ಆಚರಿಸಲು ಸಿದ್ಧಗಂಗಾ ಮಠದಲ್ಲಿ ಸಕಲ ರೀತಿಯ ಸಿದ್ಧತೆಗಳು ನಡೆದಿವೆ.
Vijaya Karnataka Web siddaganga shree


ಶ್ರೀಗಳು ಲಿಂಗೈಕರಾದ ನಂತರ ನಡೆಯುತ್ತಿರುವ ಮೊದಲ ಜಯಂತಿ ಹಾಗೂ ಗುರುವಂದನೆ ಸಮಾರಂಭ ಇದಾಗಿದೆ. ಅಂದು ಬೆಳಗ್ಗೆ ಶ್ರೀಗಳ ಗದ್ದುಗೆಗೆ ವಿಶೇಷ ಅಲಂಕಾರ, ಪೂಜೆ, ಭಜನೆ, ಕೀರ್ತನೆ ಆಯೋಜಿಸಲಾಗಿದೆ. ದಿನವಿಡೀ ಶ್ರೀಗಳ ಸ್ಮರಣೆ ಜರುಗಲಿದೆ.

ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಗುರುವಂದನೆ ಕಾರ್ಯಕ್ರಮ ನಡೆಯಲಿದೆ. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು, ಉಜ್ಜಯಿನಿ ಸಂಸ್ಥಾನ ಮಠದ ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಶ್ರೀ, ಮುಂಡರಗಿ ಸಂಸ್ಥಾನ ಮಠದ ಶ್ರೀ ಅನ್ನದಾನ ಮಹಾಸ್ವಾಮೀಜಿ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳು ಸಾನ್ನಿಧ್ಯ ವಹಿಸುವರು. ಮೈಸೂರು ರಾಜವಂಶಸ್ಥ ಯದುವೀರ ಒಡೆಯರ್‌ ಉದ್ಘಾಟಿಸುವರು. ನಾಡಿನ ಹಲವು ಸ್ವಾಮೀಜಿಗಳು ಪಾಲ್ಗೊಂಡು ನುಡಿನಮನ ಸಲ್ಲಿಸಲಿದ್ದಾರೆ.

ತುಮಕೂರು ನಾಗರಿಕ ವೇದಿಕೆಯು ನಗರದ ಸರಕಾರಿ ಜೂ.ಕಾಲೇಜು ಮೈದಾನದಲ್ಲಿ ಏ.1ರಂದು ಸಂಜೆ 6 ಗಂಟೆಗೆ ಶ್ರೀಗಳ 112ನೇ ಜನ್ಮದಿನೋತ್ಸವ ಹಾಗೂ ಗುರುವಂದನಾ ಸಮಾರಂಭ ಆಯೋಜಿಸಿದೆ.

ಏ.1 ರಂದು ಶ್ರೀಗಳ ಜಯಂತಿ ಮತ್ತು ಗುರುವಂದನಾ ಸಮಾರಂಭಕ್ಕೆ ಬರುವ ಭಕ್ತರಿಗೆ ಎಂದಿನಂತೆ ದಾಸೋಹದ ವ್ಯವಸ್ಥೆ ಮಾಡಲಾಗುತ್ತದೆ. ಜತೆಗೆ ಶ್ರೀಗಳ ಸ್ಮರಣೆ, ಸಂಗೀತ ಕಾರ್ಯಕ್ರಮ, ನಾನಾ ಸಂಘ-ಸಂಸ್ಥೆಗಳಿಂದ ರಕ್ತದಾನ ಶಿಬಿರ, ನೇತ್ರದಾನ, ಅಂಗಾಂಗ ದಾನಕ್ಕೂ ವ್ಯವಸ್ಥೆ ಮಾಡಲಾಗಿದೆ.
ಶ್ರೀ ಸಿದ್ಧಲಿಂಗ ಸ್ವಾಮೀಜಿ ಸಿದ್ಧಗಂಗಾ ಮಠ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ