ಆ್ಯಪ್ನಗರ

ಕಾರ್ಮಿಕರ ದಿನಾಚರಣೆಯಂದು ಕಾನೂನು ಅರಿವು ಕಾರ್ಯಕ್ರಮ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಂಯೋಗದೊಂದಿಗೆ ಮೇ 1ರಂದು ಬುಧವಾರ ಬೆಳಗ್ಗೆ 10.30ಕ್ಕೆ ತಾಲೂಕಿನ ಗುಮ್ಮನಹಳ್ಳಿ ಗ್ರಾಮದ ಸಾಯಿ ಕ್ರಿಯೇಷನ್‌ ಗಾರ್ಮೆಂಟ್ಸ್‌ನಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಏರ್ಪಡಿಸಲಾಗಿದೆ.

Vijaya Karnataka 27 Apr 2019, 5:00 am
ಸಿರಾ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಂಯೋಗದೊಂದಿಗೆ ಮೇ 1ರಂದು ಬುಧವಾರ ಬೆಳಗ್ಗೆ 10.30ಕ್ಕೆ ತಾಲೂಕಿನ ಗುಮ್ಮನಹಳ್ಳಿ ಗ್ರಾಮದ ಸಾಯಿ ಕ್ರಿಯೇಷನ್‌ ಗಾರ್ಮೆಂಟ್ಸ್‌ನಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಏರ್ಪಡಿಸಲಾಗಿದೆ.
Vijaya Karnataka Web sira awareness programme on labour day may 1
ಕಾರ್ಮಿಕರ ದಿನಾಚರಣೆಯಂದು ಕಾನೂನು ಅರಿವು ಕಾರ್ಯಕ್ರಮ


ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಮಹಮದ್‌ ಆರೀಫುಲ್ಲಾ ಸಿ.ಎಫ್‌. ಕಾರ್ಯಕ್ರಮ ಉದ್ಘಾಟಿಸುವರು. ತಹಸೀಲ್ದಾರ್‌ ವೈ.ತಿಪ್ಪೇಸ್ವಾಮಿ ಅಧ್ಯಕ್ಷ ತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್‌ ನ್ಯಾಯಾಧೀಶರಾದ ಆರ್‌.ಧನಲಕ್ಷ್ಮಿ, ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಗೀತಾ ಕುಂಬಾರ, ವಕೀಲರ ಸಂಘದ ಅಧ್ಯಕ್ಷ ಸಿ.ಹೆಚ್‌.ಜಗದೀಶ್‌, ಉಪಾಧ್ಯಕ್ಷ ಎಸ್‌.ವಿ.ಮಂಜುನಾಥ್‌, ಕಾರ್ಯದರ್ಶಿ ಸಣ್ಣ ಕರೇಗೌಡ, ಸಾಯಿ ಕ್ರಿಯೇಷನ್‌ ಗಾರ್ಮೆಂಟ್ಸ್‌ನ ವ್ಯವಸ್ಥಾಪಕ ಅಕ್ಬರ್‌ ಅಲಿ, ಕಾರ್ಮಿಕ ನಿರೀಕ್ಷ ಕ ಅಬ್ದುಲ್‌ ರವೂಫ್‌ ಮತ್ತಿತರರು ಭಾಗವಹಿಸುವರು. ಕಾರ್ಮಿಕರ ಕಾಯ್ದೆ ಮತ್ತು ಕಾನೂನಿನ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ