ನಾಳೆಯಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ; ಮೊಬೈಲ್ ನಿಷೇಧ
ತುಮಕೂರು ದಕ್ಷಿಣ ಶೈಕ್ಷ ಣಿಕ ಜಿಲ್ಲೆಯ 14 ಹಾಗೂ ಮಧುಗಿರಿ ಶೈಕ್ಷ ಣಿಕ ಜಿಲ್ಲೆಯ 8 ಸೇರಿದಂತೆ ಒಟ್ಟು 22 ಪರೀಕ್ಷಾ ಕೇಂದ್ರಗಳಲ್ಲಿ ಜೂ.21ರಿಂದ ಜೂ.28ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಜಿಲ್ಲೆಯಾದ್ಯಂತ ನಡೆಯಲಿದೆ. ಹೀಗಾಗಿ ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಕೊಂಡೊಯ್ಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ತಿಳಿಸಿದರು.
Vijaya Karnataka 20 Jun 2019, 5:00 am
ತುಮಕೂರು: ತುಮಕೂರು ದಕ್ಷಿಣ ಶೈಕ್ಷ ಣಿಕ ಜಿಲ್ಲೆಯ 14 ಹಾಗೂ ಮಧುಗಿರಿ ಶೈಕ್ಷ ಣಿಕ ಜಿಲ್ಲೆಯ 8 ಸೇರಿದಂತೆ ಒಟ್ಟು 22 ಪರೀಕ್ಷಾ ಕೇಂದ್ರಗಳಲ್ಲಿ ಜೂ.21ರಿಂದ ಜೂ.28ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಜಿಲ್ಲೆಯಾದ್ಯಂತ ನಡೆಯಲಿದೆ. ಹೀಗಾಗಿ ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಕೊಂಡೊಯ್ಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದ ಅವರು, ಕಳೆದ ಮುಖ್ಯ ಪರೀಕ್ಷೆಯಲ್ಲಿ ಮೊಬೈಲನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ದ ಪ್ರಕರಣ ಜಿಲ್ಲೆಯನ್ನು ರಾಜ್ಯದಲ್ಲಿ ಗುರುತಿಸುವಂತಾಯಿತು. ಯಾವುದೇ ಕಾರಣಕ್ಕೂ ಮುಖ್ಯ ಅಧೀಕ್ಷ ಕರನ್ನು ಹೊರತುಪಡಿಸಿ ಪರೀಕ್ಷಾ ಕೇಂದ್ರದಲ್ಲಿರುವ ಯಾರ ಬಳಿಯಲ್ಲಿಯೂ ಮೊಬೈಲ್ ಇರಕೂಡದು. ಈ ಬಗ್ಗೆ ಮುಖ್ಯ ಅಧೀಕ್ಷ ಕರು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಇರುವ ಮಾಹಿತಿ ಅಥವಾ ಬೇರೆ ಅವಘಡಗಳು ಸಂಭವಿಸಿದಲ್ಲಿ ಮುಖ್ಯ ಅಧೀಕ್ಷ ಕರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಎಲ್ಲ ಮುಖ್ಯ ಅಧೀಕ್ಷ ಕರಿಗೆ ಸೂಚಿಸಿದರು.
ನಿಷೇಧಾಜ್ಞೆ: ಈಗಾಗಲೇ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸುವ ಆದೇಶವನ್ನು ಜಿಲ್ಲಾಧಿಕಾರಿಗಳಿಂದ ಹೊರಡಿಸಲಾಗಿದೆ. ಪ್ರಶ್ನೆ ಪತ್ರಿಕೆ ರವಾನಿಸಲು ತುಮಕೂರು, ತುರುವೇಕೆರೆ, ತಿಪಟೂರು ಮತ್ತು ಪಾವಗಡ ತಾಲೂಕಿಗೆ ತಲಾ ಒಂದರಂತೆ ಒಟ್ಟು ನಾಲ್ಕು ವಾಹನಗಳನ್ನು ಒದಗಿಸಲು ಅಧಿಗ್ರಹಣಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರಕ್ಕೂ ವೀಕ್ಷ ಕರನ್ನು ನೇಮಿಸಲಾಗಿದೆ ಎಂದರು.
ಅದೇ ರೀತಿ ಕ್ಷೇತ್ರ ಶಿಕ್ಷ ಣಾಧಿಕಾರಿಗಳು ಪ್ರತೀ ಕೇಂದ್ರಕ್ಕೂ ಮುಖ್ಯ ಶಿಕ್ಷ ಕರನ್ನು ರೊಟೇಷನ್ ಆಧಾರದಲ್ಲಿ ಸ್ಥಾನಿಕ ಜಾಗೃತ ದಳಕ್ಕೆ ನೇಮಿಸಬೇಕು. ಕೊಠಡಿ ಮೇಲ್ವಿಚಾರಕರಾಗಿ ಸಂಬಂಧಿಸಿದ ವಿಷಯ ಶಿಕ್ಷ ಕರನ್ನು ನೇಮಿಸಬಾರದು. ಮಾರ್ಗಾಧಿಕಾರಿಗಳು ತಾಲೂಕು ಖಜಾನೆಯಿಂದ ಗೌಪ್ಯ ಸಾಮಗ್ರಿಗಳನ್ನು ಸಕಾಲದಲ್ಲಿ ಸಂಬಂಧಿಸಿದ ಕೇಂದ್ರಗಳಿಗೆ ಸೂಕ್ತ ಬೆಂಗಾವಲಿನೊಂದಿಗೆ ತಲುಪಿಸಲು ಕ್ಷೇತ್ರ ಶಿಕ್ಷ ಣಾಧಿಕಾರಿಗಳಿಗೆ ಅವರು ಸೂಚಿಸಿದರು.
ಸೂಕ್ತ ಬಂದೋಬಸ್ತ್: ತುಮಕೂರು ಮತ್ತು ಮಧುಗಿರಿಯಲ್ಲಿ ಉತ್ತರ ಪತ್ರಿಕೆಗಳ ಸಂರಕ್ಷ ಣೆಗೆ ನಿರ್ಮಿಸಿರುವ ಭದ್ರತಾ ಕೊಠಡಿಗಳಿಗೆ ಹಾಗೂ ಉತ್ತರ ಪತ್ರಿಕೆಗಳನ್ನು ಬೆಂಗಳೂರಿಗೆ ಸಾಗಿಸುವವರೆಗೂ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲು ಉಪನಿರ್ದೇಶಕರಿಗೆ ಸೂಚಿಸಿದರು.
ಸಾರ್ವಜನಿಕ ಶಿಕ್ಷ ಣ ಇಲಾಖೆಯ ಉಪನಿರ್ದೇಶಕಿ ಎಂ.ಆರ್.ಕಾಮಾಕ್ಷಿ ಮಾತನಾಡಿ, ತುಮಕೂರಿನ 4,578 ಹಾಗೂ ಮಧುಗಿರಿಯ 2,020 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಡಯಟ್ ಪ್ರಾಂಶುಪಾಲರು, ಜಿಲ್ಲಾ ಖಜಾನಾಧಿಕಾರಿಗಳು, ಪರೀಕ್ಷಾ ನೋಡಲ್ ಅಧಿಕಾರಿಗಳು, ಎಲ್ಲಾ ಕ್ಷೇತ್ರ ಶಿಕ್ಷ ಣಾಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷ ಕರು ಉಪಸ್ಥಿತರಿದ್ದರು.
ಇಲ್ಲಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದ ಅವರು, ಕಳೆದ ಮುಖ್ಯ ಪರೀಕ್ಷೆಯಲ್ಲಿ ಮೊಬೈಲನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ದ ಪ್ರಕರಣ ಜಿಲ್ಲೆಯನ್ನು ರಾಜ್ಯದಲ್ಲಿ ಗುರುತಿಸುವಂತಾಯಿತು. ಯಾವುದೇ ಕಾರಣಕ್ಕೂ ಮುಖ್ಯ ಅಧೀಕ್ಷ ಕರನ್ನು ಹೊರತುಪಡಿಸಿ ಪರೀಕ್ಷಾ ಕೇಂದ್ರದಲ್ಲಿರುವ ಯಾರ ಬಳಿಯಲ್ಲಿಯೂ ಮೊಬೈಲ್ ಇರಕೂಡದು. ಈ ಬಗ್ಗೆ ಮುಖ್ಯ ಅಧೀಕ್ಷ ಕರು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಇರುವ ಮಾಹಿತಿ ಅಥವಾ ಬೇರೆ ಅವಘಡಗಳು ಸಂಭವಿಸಿದಲ್ಲಿ ಮುಖ್ಯ ಅಧೀಕ್ಷ ಕರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಎಲ್ಲ ಮುಖ್ಯ ಅಧೀಕ್ಷ ಕರಿಗೆ ಸೂಚಿಸಿದರು.
ನಿಷೇಧಾಜ್ಞೆ: ಈಗಾಗಲೇ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸುವ ಆದೇಶವನ್ನು ಜಿಲ್ಲಾಧಿಕಾರಿಗಳಿಂದ ಹೊರಡಿಸಲಾಗಿದೆ. ಪ್ರಶ್ನೆ ಪತ್ರಿಕೆ ರವಾನಿಸಲು ತುಮಕೂರು, ತುರುವೇಕೆರೆ, ತಿಪಟೂರು ಮತ್ತು ಪಾವಗಡ ತಾಲೂಕಿಗೆ ತಲಾ ಒಂದರಂತೆ ಒಟ್ಟು ನಾಲ್ಕು ವಾಹನಗಳನ್ನು ಒದಗಿಸಲು ಅಧಿಗ್ರಹಣಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರಕ್ಕೂ ವೀಕ್ಷ ಕರನ್ನು ನೇಮಿಸಲಾಗಿದೆ ಎಂದರು.
ಅದೇ ರೀತಿ ಕ್ಷೇತ್ರ ಶಿಕ್ಷ ಣಾಧಿಕಾರಿಗಳು ಪ್ರತೀ ಕೇಂದ್ರಕ್ಕೂ ಮುಖ್ಯ ಶಿಕ್ಷ ಕರನ್ನು ರೊಟೇಷನ್ ಆಧಾರದಲ್ಲಿ ಸ್ಥಾನಿಕ ಜಾಗೃತ ದಳಕ್ಕೆ ನೇಮಿಸಬೇಕು. ಕೊಠಡಿ ಮೇಲ್ವಿಚಾರಕರಾಗಿ ಸಂಬಂಧಿಸಿದ ವಿಷಯ ಶಿಕ್ಷ ಕರನ್ನು ನೇಮಿಸಬಾರದು. ಮಾರ್ಗಾಧಿಕಾರಿಗಳು ತಾಲೂಕು ಖಜಾನೆಯಿಂದ ಗೌಪ್ಯ ಸಾಮಗ್ರಿಗಳನ್ನು ಸಕಾಲದಲ್ಲಿ ಸಂಬಂಧಿಸಿದ ಕೇಂದ್ರಗಳಿಗೆ ಸೂಕ್ತ ಬೆಂಗಾವಲಿನೊಂದಿಗೆ ತಲುಪಿಸಲು ಕ್ಷೇತ್ರ ಶಿಕ್ಷ ಣಾಧಿಕಾರಿಗಳಿಗೆ ಅವರು ಸೂಚಿಸಿದರು.
ಸೂಕ್ತ ಬಂದೋಬಸ್ತ್: ತುಮಕೂರು ಮತ್ತು ಮಧುಗಿರಿಯಲ್ಲಿ ಉತ್ತರ ಪತ್ರಿಕೆಗಳ ಸಂರಕ್ಷ ಣೆಗೆ ನಿರ್ಮಿಸಿರುವ ಭದ್ರತಾ ಕೊಠಡಿಗಳಿಗೆ ಹಾಗೂ ಉತ್ತರ ಪತ್ರಿಕೆಗಳನ್ನು ಬೆಂಗಳೂರಿಗೆ ಸಾಗಿಸುವವರೆಗೂ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲು ಉಪನಿರ್ದೇಶಕರಿಗೆ ಸೂಚಿಸಿದರು.
ಸಾರ್ವಜನಿಕ ಶಿಕ್ಷ ಣ ಇಲಾಖೆಯ ಉಪನಿರ್ದೇಶಕಿ ಎಂ.ಆರ್.ಕಾಮಾಕ್ಷಿ ಮಾತನಾಡಿ, ತುಮಕೂರಿನ 4,578 ಹಾಗೂ ಮಧುಗಿರಿಯ 2,020 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಡಯಟ್ ಪ್ರಾಂಶುಪಾಲರು, ಜಿಲ್ಲಾ ಖಜಾನಾಧಿಕಾರಿಗಳು, ಪರೀಕ್ಷಾ ನೋಡಲ್ ಅಧಿಕಾರಿಗಳು, ಎಲ್ಲಾ ಕ್ಷೇತ್ರ ಶಿಕ್ಷ ಣಾಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷ ಕರು ಉಪಸ್ಥಿತರಿದ್ದರು.