ತುಮಕೂರು: ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಅಂದರೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಬೇಕು. ಹಾಗಾದರೆ ಮಾತ್ರ ಸಮ್ಮಿಶ್ರ ಸರಕಾರ ಉಳಿಯಲಿದೆ. ಇಲ್ಲದಿದ್ದರೆ ಬಿ.ಎಸ್. ಯಡಿಯೂರಪ್ಪ ಅವರು ನಾಲ್ಕೈದು ದಿನಗಳಲ್ಲಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಭವಿಷ್ಯ ನುಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತೃಪ್ತ ಶಾಸಕರ ಮನವೊಲಿಸಲು ಮುಂಬೈಗೆ ಹೊರಟಿದ್ದೇವೆ. ಶಾಸಕ ಮುನಿರತ್ನ ರಾಮಲಿಂಗರೆಡ್ಡಿ ಸೇರಿದಂತೆ ಹಲವರು ಇರಲಿದ್ದಾರೆ. ಎಲ್ಲರನ್ನೂ ವಾಪಸ್ಸು ಕರೆದುಕೊಂಡು ಬಂದು ಸರಕಾರ ಉಳಿಸುವ ಪ್ರಯತ್ನ ಮಾಡುತ್ತೇವೆ ಎಂದರು.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡುವುದಾಗಿ ದೇವೇಗೌಡರು ಹೇಳಿದ್ದರು. ಆದರೆ, ಅವರು ಹೇಳಿದಂತೆ ಯಾವತ್ತೂ ನಡೆದುಕೊಂಡಿಲ್ಲ. ಅವರು ಹೇಳಿದ್ದೆಲ್ಲಾ ಭಗವದ್ಗೀತೆ ನಾ. ಇನ್ನೂ ಕೂಡಾ ನಾಲ್ಕೈದು ಶಾಸಕರು ರಾಜೀನಾಮೆ ಕೊಡಲಿದ್ದಾರೆ ಎಂದು ಹೇಳಿದರು.
ಶಾಸಕರ ರಾಜೀನಾಮೆ ಆಪರೇಷನ್ ಕಮಲವಲ್ಲ. ಸರಕಾರದ ಮೇಲಿನ ಅಸಮಾಧಾನದಿಂದ ರಾಜೀನಾಮೆ ಕೊಟ್ಟಿದ್ದಾರೆ. ಖರ್ಗೆ ಅವರನ್ನು ಸಿಎಂ ಮಾಡೋದಾದರೂ ಸ್ವಾಗತ ಎಂದ ಕೆ.ಎನ್. ರಾಜಣ್ಣ ಅವರು, ಮುಂಬೈಗೆ ಹೋಗಿ ಅತೃಪ್ತರನ್ನು ವಾಪಸ್ಸು ಕರೆದುಕೊಂಡು ಬಂದು ಜೀರೋ ಟ್ರಾಫಿಕ್ ಉಳಿಸುವ ಹಾಗೆ ಮಾಡುತ್ತೇವೆ ಎಂದು ವ್ಯಂಗ್ಯ ಮಾಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತೃಪ್ತ ಶಾಸಕರ ಮನವೊಲಿಸಲು ಮುಂಬೈಗೆ ಹೊರಟಿದ್ದೇವೆ. ಶಾಸಕ ಮುನಿರತ್ನ ರಾಮಲಿಂಗರೆಡ್ಡಿ ಸೇರಿದಂತೆ ಹಲವರು ಇರಲಿದ್ದಾರೆ. ಎಲ್ಲರನ್ನೂ ವಾಪಸ್ಸು ಕರೆದುಕೊಂಡು ಬಂದು ಸರಕಾರ ಉಳಿಸುವ ಪ್ರಯತ್ನ ಮಾಡುತ್ತೇವೆ ಎಂದರು.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡುವುದಾಗಿ ದೇವೇಗೌಡರು ಹೇಳಿದ್ದರು. ಆದರೆ, ಅವರು ಹೇಳಿದಂತೆ ಯಾವತ್ತೂ ನಡೆದುಕೊಂಡಿಲ್ಲ. ಅವರು ಹೇಳಿದ್ದೆಲ್ಲಾ ಭಗವದ್ಗೀತೆ ನಾ. ಇನ್ನೂ ಕೂಡಾ ನಾಲ್ಕೈದು ಶಾಸಕರು ರಾಜೀನಾಮೆ ಕೊಡಲಿದ್ದಾರೆ ಎಂದು ಹೇಳಿದರು.
ಶಾಸಕರ ರಾಜೀನಾಮೆ ಆಪರೇಷನ್ ಕಮಲವಲ್ಲ. ಸರಕಾರದ ಮೇಲಿನ ಅಸಮಾಧಾನದಿಂದ ರಾಜೀನಾಮೆ ಕೊಟ್ಟಿದ್ದಾರೆ. ಖರ್ಗೆ ಅವರನ್ನು ಸಿಎಂ ಮಾಡೋದಾದರೂ ಸ್ವಾಗತ ಎಂದ ಕೆ.ಎನ್. ರಾಜಣ್ಣ ಅವರು, ಮುಂಬೈಗೆ ಹೋಗಿ ಅತೃಪ್ತರನ್ನು ವಾಪಸ್ಸು ಕರೆದುಕೊಂಡು ಬಂದು ಜೀರೋ ಟ್ರಾಫಿಕ್ ಉಳಿಸುವ ಹಾಗೆ ಮಾಡುತ್ತೇವೆ ಎಂದು ವ್ಯಂಗ್ಯ ಮಾಡಿದರು.