ಆ್ಯಪ್ನಗರ

ಶಿರಾ: ರಸ್ತೆ ದಾಟುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ಚಿರತೆ ಸ್ಥಳದಲ್ಲೇ ಸಾವು..!

ವೇಗವಾಗಿ ಬರುತ್ತಿದ್ದ ಲಾರಿ ಲಾರಿ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ತೀವ್ರತೆಗೆ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ. ಚಿರತೆಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಪರಾರಿಯಾದ ಕಾರಣ, ಯಾವ ಲಾರಿ ಡಿಕ್ಕಿ ಹೊಡೆದಿದೆ ಅನ್ನೋದು ಇನ್ನೂ ತಿಳಿದು ಬಂದಿಲ್ಲ.

Vijaya Karnataka Web 23 Dec 2020, 9:05 am
ಶಿರಾ: ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದಿದೆ.
Vijaya Karnataka Web leopard died in


ಶಿರಾ ತಾಲೂಕಿನ ತಾವರೆಕೆರೆ ಬಳಿಯ ಕದಂಬ ಹೋಟೆಲ್‌ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ವೇಗವಾಗಿ ಬರುತ್ತಿದ್ದ ಲಾರಿ ಲಾರಿ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ತೀವ್ರತೆಗೆ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ. ಚಿರತೆಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಪರಾರಿಯಾದ ಕಾರಣ, ಯಾವ ಲಾರಿ ಡಿಕ್ಕಿ ಹೊಡೆದಿದೆ ಅನ್ನೋದು ಇನ್ನೂ ತಿಳಿದು ಬಂದಿಲ್ಲ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್‌-19 ಪರೀಕ್ಷಾ ಸೌಲಭ್ಯ ಆರಂಭ

ಕಳೆದ ಕೆಲವು ದಿನಗಳಿಂದ ಲಕ್ಷಿಸಾಗರ ಗ್ರಾಮದ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿದ್ದ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅಲ್ಲದೇ ಮಕ್ಕಳು ಹಿರಿಯರು ಮನೆಯಿಂದ ಹೊರಬರೋಕೂ ಹೆದರುತ್ತಿದ್ದರು. ಭಯಭೀತರಾಗಿದ್ದ ಗ್ರಾಮಸ್ಥರ ಅಳಲಿಗೆ ಸ್ಪಂದಿಸಿದ ಅರಣ್ಯ ಇಲಾಖೆ, ಚಿರತೆಯನ್ನು ಹಿಡಿಯಲು ಬೋನನ್ನು ತಂದು ಇಟ್ಟಿತ್ತು. ಆದರೆ ಸದ್ಯ ಚಿರತೆ ಅಪಘಾತದಲ್ಲಿ ಮೃತಪಟ್ಟಿದೆ.

ಘಟನೆ ಸಂಬಂಧ ಸ್ಥಳಕ್ಕೆ ಅರಣ್ಯಾಧಿಕಾರಿ ರಾಧ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ