ಆ್ಯಪ್ನಗರ

ಕೊಡಿಗೇನಹಳ್ಳಿ ಮುಖ್ಯ ರಸ್ತೆಯಲ್ಲಿ ಗೊಬ್ಬರದ ಅಂಗಡಿ: ಸಾರ್ವಜನಿಕರಿಗೆ ತೊಂದರೆ, ಸ್ಥಳಾಂತರಕ್ಕೆ ಆಗ್ರಹ!

ಕೊಡಿಗೇನಹಳ್ಳಿಯ ಗ್ರಾಮದ ಮಧ್ಯ ಭಾಗದಲ್ಲಿರುವ ಗೊಬ್ಬರದ ಅಂಗಡಿಯನ್ನು ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಹೋಬಳಿಯ 1ನೇ ಬ್ಲಾಕ್ ನ ಮುಖ್ಯ ರಸ್ತೆಯಲ್ಲಿರುವ ಗೊಬ್ಬರದ ಅಂಗಡಿಯಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Vijaya Karnataka Web 15 Sep 2020, 3:15 pm
ಕೊಡಿಗೇನಹಳ್ಳಿ (ಮಧುಗಿರಿ ತಾ): ಗ್ರಾಮದ ಮಧ್ಯ ಭಾಗದಲ್ಲಿರುವ ಗೊಬ್ಬರದ ಅಂಗಡಿ ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Vijaya Karnataka Web ಕೊಡಿಗೇನಹಳ್ಳಿ


ಹೋಬಳಿಯ 1ನೇ ಬ್ಲಾಕ್ನ ಮುಖ್ಯ ರಸ್ತೆಯಲ್ಲಿರುವ ಗೊಬ್ಬರದ ಅಂಗಡಿಯಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ಸಂಬಂಧಪಟ್ಟವರು ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತ ರಾಜಗೋಪಾಲ ರೆಡ್ಡಿ ಒತ್ತಾಯಿಸಿದ್ದಾರೆ.

ಅಂಗಡಿಯು ಮುಖ್ಯ ರಸ್ತೆಯ ಅಂಚಿನಲ್ಲಿದ್ದು ನಿತ್ಯ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ಇನ್ನೂ ಲಾರಿ ಲೋಡಿಂಗ್ ಬಂದರೆ ಸಂಪೂರ್ಣ ಟ್ರಾಫಿಕ್ ನಿಂದ ಕಿರಿಕಿರಿಯಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಅಂಗಡಿ ಮಾಲಿಕರು ಜನಜಂಗುಳಿ ಮಾಡಿಕೊಂಡು ರೈತರಿಗೆ ಬಿಲ್ ನೀಡದೆ ಗೊಬ್ಬರ ಮಾರಾಟ ಮಾಡುತ್ತಿದ್ದು, ಪ್ರಶ್ನಿಸಿದರೆ ಗೊಬ್ಬರ ಸ್ಟಾಕ್ ಇಲ್ಲ ಎಂದು ಮೌನವಾಗುತ್ತಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ