ಆ್ಯಪ್ನಗರ

ಕಾಲು ಜಾರಿ ಬಾವಿಗೆ ಬಿದ್ದು ಟೈಮ್ಸ್‌ ಆಫ್‌ ಇಂಡಿಯಾ ಪತ್ರಕರ್ತ ನಿಧನ

39 ವರ್ಷ ಪ್ರಾಯದ ರೋಹಿತ್ ‘ಟೈಮ್ಸ್ ಆಫ್ ಇಂಡಿಯಾ’ ವರದಿಗಾರರಾಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ರಜೆ ಇದ್ದ ಕಾರಣಕ್ಕೆ ತಮ್ಮ ತಂದೆಯ‌ ಊರಾದ ಸದರನಹಳ್ಳಿಗೆ ಬಂದಿದ್ದರು.

Vijaya Karnataka 22 Feb 2020, 6:08 pm
ತುಮಕೂರು: ರಜೆ ಕಳೆಯಲು ಊರಿಗೆ ಬಂದಿದ್ದ ಪತ್ರಕರ್ತ ರೋಹಿತ್ (39) ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ತುಮಕೂರಿನ ಕ್ಯಾತ್ಸಂದ್ರದಲ್ಲಿ ನಡೆದಿದೆ.
Vijaya Karnataka Web Rohit


ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಸಮೀಪದ ಸದರನಹಳ್ಳಿಯಲ್ಲಿ ತೋಟವೊಂದರ ಬಾವಿಯಲ್ಲಿ ರೋಹಿತ್‌ ಈಜಲು ತೆರಳಿದ್ದಾಗ ಈ ಘಟನೆ ಸಂಭವಿಸಿದೆ.

ರೋಹಿತ್ ‘ಟೈಮ್ಸ್ ಆಫ್ ಇಂಡಿಯಾ’ ವರದಿಗಾರರಾಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ರಜೆ ಇದ್ದ ಕಾರಣಕ್ಕೆ ತಮ್ಮ ತಂದೆಯ‌ ಊರಾದ ಸದರನಹಳ್ಳಿಗೆ ಬಂದಿದ್ದರು.

ಭಾನುವಾರ ಸ್ನೇಹಿತರೊಂದಿಗೆ ತಮ್ಮ ತೋಟದ ಬಾವಿಗೆ ಈಜಲು ತೆರಳಿದ್ದಾಗ, ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ. ಈ ವೇಳೆ ಬಾವಿಯ ಕಲ್ಲು ತಲೆಗೆ ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ, ಕ್ಯಾತ್ಸಂದ್ರ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಶವವನ್ನು ಮೇಲಕ್ಕೆತ್ತಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ