ಆ್ಯಪ್ನಗರ

ಸರಕಾರಿ ಶಾಲೆಯಲ್ಲಿ ಓದಿದವರು ಎಂದಿಗೂ ದೇಶದ್ರೋಹದ ಕೆಲಸಕ್ಕೆ ಮುಂದಾಗುವುದಿಲ್ಲ- ಸುರೇಶ್ ಕುಮಾರ್

​ರಾಜ್ಯದಲ್ಲಿ ಇತ್ತೀಚೆಗೆ ಅಮೂಲ್ಯ ಎಂಬ ಯುವತಿ ಸಭೆಯೊಂದರಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿದ್ದರು. ಇವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತು. ನಮ್ಮ ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದರೆ ಈ ರೀತಿಯ ವಿಕೃತ ಮನಸ್ಸಿನ ಭಾವನೆಗಳು ಬರುತ್ತಿರಲಿಲ್ಲ ಎಂದು ಸುರೇಶ್‌ ಕುಮಾರ್‌ ಹೇಳಿದರು.

Vijaya Karnataka 22 Feb 2020, 3:18 pm
ಮಧುಗಿರಿ (ತುಮಕೂರು): ಸರಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಎಂದಿಗೂ ದೇಶದ್ರೋಹದ ಕೆಲಸ ಮಾಡುವುದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದರು.
Vijaya Karnataka Web Suresh Kumar S


ತಾಲೂಕಿನ ಸಿದ್ದಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶತಮಾನೋತ್ಸವ ಆಚರಣೆ, ಸ್ಮರಣ ಸಂಚಿಕೆ ಬಿಡುಗಡೆ, ಕಟ್ಟಡ ಉದ್ಘಾಟನೆ ಹಾಗೂ ಹಳೇ ವಿಧ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಇತ್ತೀಚೆಗೆ ಅಮೂಲ್ಯ ಎಂಬ ಯುವತಿ ಸಭೆಯೊಂದರಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿದ್ದರು. ಇವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತು. ನಮ್ಮ ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದರೆ ಈ ರೀತಿಯ ವಿಕೃತ ಮನಸ್ಸಿನ ಭಾವನೆಗಳು ಬರುತ್ತಿರಲಿಲ್ಲ ಎಂದರು.

ರಾಜ್ಯದ ಕೆಲ‌ ನಾಯಕರಿಗೆ ರಾಜ್ಯೋತ್ಸವ ಎಂಬ ಪದ ಉಚ್ಚಾರಣೆ ಇನ್ನೂ ಕಷ್ಟವಾಗಿದೆ. ಇನ್ನು ರಾಜ್ಯದಲ್ಲಿ ಕೆಲ ನಾಯಕರಿಗೆ ರಾಜ್ಯೋತ್ಸವ ಪದ ಉಚ್ಚಾರಿಸಲು ಬರುತ್ತಿಲ್ಲ. ಹೀಗಿರುವಾಗ ಇತ್ತೀಚೆಗೆ ರಾಜ್ಯದ ಪ್ರಾಥಮಿಕ ಶಾಲೆಯ ಓರ್ವ ಶಿಕ್ಷಕರು ಒಂದು ಮಗುವಿಗೆ ಪಕ್ಕೆಲುಬು ಎಂಬ ಪದ ಉಚ್ಚಾರಣೆ ಮಾಡದೆ ಇರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಆ ವಿಡಿಯೋದಲ್ಲಿನ ಅಮಾನವೀಯ ಕೃತ್ಯ ಗಮನಿಸಿ ಆ ಶಿಕ್ಷಕನನ್ನು ಅಮಾನತ್ತು ಮಾಡಲಾಗಿದೆ ಎಂದರು.

ಈ ರೀತಿಯ ಕೃತ್ಯಗಳನ್ನು ಗಮನಿಸುತ್ತಾ ಹೋದರೆ, ನಮ್ಮ ರಾಜ್ಯದ ಕೆಲ ನಾಯಕರಿಗೆ ಕೆಲ ಕನ್ನಡ ಪದಗಳ ಉಚ್ಚಾರಣೆ ಬರುತ್ತಿಲ್ಲ ಹಾಗೂ ತುಂಬ ಕಷ್ಟ ಸಾಧ್ಯವಾಗುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ಶಿಕ್ಷಕರು ಈ ರೀತಿಯಲ್ಲಿ ಬಲವಂತವಾಗಿ ಕಲಿಕೆ ಮಾಡಿಸಲು ಮುಂದಾಗಬಾರದು ಎಂದು ಕಿವಿ ಮಾತು ಹೇಳಿದರು.

ಶಿಕ್ಷಣ ಇಲಾಖೆಯ ಋಣ ನನ್ನ ಮೇಲಿದೆ. ಶಿಕ್ಷಣ ಇಲಾಖೆಯಲ್ಲಿ ನನ್ನ ತಾಯಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ನಾನು ಈ ಮಟ್ಟಕ್ಕೆ ಬೆಳೆಯಲು ನನ್ನ ತಾಯಿಯೇ ಕಾರಣ. ಆದ್ದರಿಂದ ಶಿಕ್ಷಣ ಇಲಾಖೆಯ ಋಣ ನನ್ನ ಮೇಲೆ ಸದಾ ಇರುತ್ತದೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ