ಆ್ಯಪ್ನಗರ

Shocking News: ದುಬೈ ಮೋಹಕ್ಕೆ ಸಂಸಾರ ಮರೆತ ಹೆಂಡತಿ? ಗಂಡ ಆತ್ಮಹತ್ಯೆ, ಮಕ್ಕಳ ಸ್ಥಿತಿ ಗಂಭೀರ

Tumakuru Crime News: ದುಬೈನಲ್ಲಿದ್ದ ಪತ್ನಿಯನ್ನು ಹಲವು ಬಾರಿ ಕರೆದರೂ ವಾಪಸ್ ಬರುತ್ತಿಲ್ಲವೆಂದು ನೊಂದು ತನ್ನ ಮೂವರು ಮಕ್ಕಳೊಂದಿಗೆ ಪತಿ ವಿಷ ಸೇವಿಸಿದ್ದಾನೆ. ಆಸ್ಪತ್ರೆಗೆ ಸಾಗಿಸುವ ವೇಳೆ ಸಮಿವುಲ್ಲಾ ಮೃತ ಪಟ್ಟಿದ್ದು, ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ. ವಿಷ ಸೇವನೆಗೂ ಮುನ್ನ ಮಕ್ಕಳು ಸಾಹೆರಾ ಬಾನುಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದು, ತಮ್ಮೊಂದಿಗೆ ಮಾತನಾಡುವಂತೆ ಗೋಗರೆದಿದ್ದಾರೆ. ಆದರೆ ತಾಯಿಯ ಕಲ್ಲು ಹೃದಯ ಕರಗಲಿಲ್ಲ. ಆತ್ಮಹತ್ಯೆಗೂ ಮುನ್ನ ಸಮಿವುಲ್ಲಾ ತನ್ನ ಪತ್ನಿಯ ನಡೆಯ ಬಗ್ಗೆ ಸಂಬಂಧಿಕರಿಗೆ ಮಾಹಿತಿ ನೀಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.

Edited byದಿಲೀಪ್ ಡಿ. ಆರ್. | Vijaya Karnataka Web 18 Aug 2022, 7:55 pm

ಹೈಲೈಟ್ಸ್‌:

  • ತುಮಕೂರು ನಗರದ ಪಿ. ಎಚ್. ಕಾಲೋನಿಯ ನಿವಾಸಿ ಸಮೀವುಲ್ಲಾ ಸಾವು
  • ಈತನೊಂದಿಗೆ ವಿಷ ಸೇವಿಸಿದ್ದ ಮೂವರು ಮಕ್ಕಳ ಸ್ಥಿತಿ ಚಿಂತಾಜನಕ
  • ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web tumakuru suicide
ದುಬೈ ಮೋಹಕ್ಕೆ ಸಂಸಾರ ಮರೆತ ಹೆಂಡತಿ? ಗಂಡ ಆತ್ಮಹತ್ಯೆ, ಮಕ್ಕಳ ಸ್ಥಿತಿ ಗಂಭೀರ
ತುಮಕೂರು: ವಿವಾಹಿತ ಮಹಿಳೆಯೊಬ್ಬರು ಕೆಲಸಕ್ಕಾಗಿ ಸೌದಿ ಅರೇಬಿಯಾಗೆ ಹೋದವರು, ಅಲ್ಲಿ ಮೋಜಿನ ಜೀವನಕ್ಕೆ ದಾಸರಾಗಿ ತಮ್ಮ ಪತಿ ಹಾಗೂ ಮೂವರು ಮಕ್ಕಳ ಕರೆಗೆ ಓಗೊಡಲಿಲ್ಲ ಎಂಬ ಕಾರಣಕ್ಕೆ, ತುಮಕೂರಿನಲ್ಲಿದ್ದ ಆಕೆಯ ಗಂಡ ಹಾಗೂ ಮಕ್ಕಳು ವಿಷ ಸೇವಿಸಿದ ದಾರುಣ ಘಟನೆ ನಡೆದಿದೆ. ಹೆಂಡತಿಯ ಕಲ್ಲು ಹೃದಯಕ್ಕೆ ಬೇಸತ್ತು ವಿಷ ಸೇವಿಸಿದ ಪತಿ ಸಾವನ್ನಪ್ಪಿದ್ರೆ, ಮಕ್ಕಳು ಸಾವು - ಬದುಕಿನ ಮಧ್ಯೆ ಹೋರಾಡ್ತಿದ್ದಾರೆ.
ಏನಿದು ಘಟನೆ?: ತುಮಕೂರು ನಗರದ ಪಿ. ಎಚ್. ಕಾಲೋನಿಯ ನಿವಾಸಿ ಸಮೀವುಲ್ಲಾ ಮೃತ ದುರ್ದೈವಿ. ಈತನೊಂದಿಗೆ ವಿಷ ಸೇವಿಸಿದ್ದ ಮೂವರು ಮಕ್ಕಳು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು, ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಸಮಿವುಲ್ಲಾನ ಪತ್ನಿ ಸಾಹೇರಾ ಬಾನು ಪತಿಯ ವಿರೋಧದ ನಡುವೆಯೂ ಮನೆ ಕೆಲಸಕ್ಕೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದಳು.

ಅಪಘಾತದಲ್ಲಿ ಪ್ರಾಣಬಿಟ್ಟ ಪ್ರಿಯಕರ.. ಮನನೊಂದ ಪ್ರಿಯತಮೆ ಆತ್ಮಹತ್ಯೆ: ಸಾವಲ್ಲೂ ಒಂದಾದ ಪ್ರೇಮಿಗಳು..!​
ವಿದೇಶಕ್ಕೆ ತೆರಳಿದ ಬಳಿಕ ಪತ್ನಿಯ ವರ್ತನೆ ಬದಲಾಗಿತ್ತು. ದುಬೈನಲ್ಲಿ ಸಿರಿವಂತರ ಮನೆ ಕೆಲಸಕ್ಕೆಂದು ಹೋಗಿದ್ದ ಪತ್ನಿ ಸಾಹೆರಾ ಬಾನು, ವಾಪಸ್ ಭಾರತಕ್ಕೆ ಬರಲು ನಿರಾಕರಿಸಿದ್ದಳು. ಸಾಲದಕ್ಕೆ ಪತಿ ಕರೆ ಮಾಡಿದಾಗಲೆಲ್ಲಾ ಕರೆ ಸ್ವೀಕರಿಸುತ್ತಿರಲಿಲ್ಲ. ಅಲ್ಲದೇ ಮೋಜು ಮಸ್ತಿ ಮಾಡುತ್ತ ಪತಿಗೆ ವಿಡಿಯೋ ಕಾಲ್ ಮಾಡಿ ರೇಗಿಸುತ್ತಿದ್ದಳು ಎನ್ನಲಾಗಿದೆ.


ಕುಣಿಗಲ್‌ನಲ್ಲಿ ಪ್ರಿಯತಮೆ ಆತ್ಮಹತ್ಯೆಯಿಂದ ಮನನೊಂದ ಪ್ರಿಯಕರನೂ ಆತ್ಮಹತ್ಯೆಗೆ ಶರಣು..
ಇದರಿಂದಾಗಿ ಬೇಸತ್ತ ಪತಿ, ಹಲವು ಬಾರಿ ಕರೆದರೂ ಪತ್ನಿ ವಾಪಸ್ ಬರುತ್ತಿಲ್ಲವೆಂದು ನೊಂದು ತನ್ನ ಮೂವರು ಮಕ್ಕಳೊಂದಿಗೆ ವಿಷ ಸೇವಿಸಿದ್ದಾನೆ. ಆಸ್ಪತ್ರೆಗೆ ಸಾಗಿಸುವ ವೇಳೆ ಸಮಿವುಲ್ಲಾ ಮೃತ ಪಟ್ಟಿದ್ದು, ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ. ವಿಷ ಸೇವನೆಗೂ ಮುನ್ನ ಮಕ್ಕಳು ಸಾಹೆರಾ ಬಾನುಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದು, ತಮ್ಮೊಂದಿಗೆ ಮಾತನಾಡುವಂತೆ ಗೋಗರೆದಿದ್ದಾರೆ. ಆದರೆ ತಾಯಿಯ ಕಲ್ಲು ಹೃದಯ ಕರಗಲಿಲ್ಲ. ಆತ್ಮಹತ್ಯೆಗೂ ಮುನ್ನ ಸಮಿವುಲ್ಲಾ ತನ್ನ ಪತ್ನಿಯ ನಡೆಯ ಬಗ್ಗೆ ಸಂಬಂಧಿಕರಿಗೆ ಮಾಹಿತಿ ನೀಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ