ಆ್ಯಪ್ನಗರ

ಮಾಧ್ಯಮದ ನಾಲ್ವರ ಮೇಲೆ ಹಲ್ಲೆ

ನಗರ ಹೊರವಲಯದ ಸತ್ಯಮಂಗಲದ ಬೇಳೂರು ಬಾಯ್ಲರ್‌ ಬ್ಲಾಸ್ಟ್‌ ಬಗ್ಗೆ ಸಂಕ್ಷಿಪ್ತ ಸುದ್ದಿ ಮಾಡಲು ತೆರಳಿದ್ದ ಖಾಸಗಿ ವಾಹಿನಿಯ ಇಬ್ಬರು ವರದಿಗಾರರು ಹಾಗೂ ಇಬ್ಬರು ಕ್ಯಾಮೆರಾಮನ್‌ಗಳ ಮೇಲೆ ಬಾಯ್ಲರ್‌ನ ಸಿಬ್ಬಂದಿ ಹಲ್ಲೆ ಮಾಡಿದ ಘಟನೆ ನಡೆದಿದೆ.

Vijaya Karnataka 12 Jun 2019, 5:00 am
ತುಮಕೂರು: ನಗರ ಹೊರವಲಯದ ಸತ್ಯಮಂಗಲದ ಬೇಳೂರು ಬಾಯ್ಲರ್‌ ಬ್ಲಾಸ್ಟ್‌ ಬಗ್ಗೆ ಸಂಕ್ಷಿಪ್ತ ಸುದ್ದಿ ಮಾಡಲು ತೆರಳಿದ್ದ ಖಾಸಗಿ ವಾಹಿನಿಯ ಇಬ್ಬರು ವರದಿಗಾರರು ಹಾಗೂ ಇಬ್ಬರು ಕ್ಯಾಮೆರಾಮನ್‌ಗಳ ಮೇಲೆ ಬಾಯ್ಲರ್‌ನ ಸಿಬ್ಬಂದಿ ಹಲ್ಲೆ ಮಾಡಿದ ಘಟನೆ ನಡೆದಿದೆ.
Vijaya Karnataka Web tumkur assault on 6 media persons by boiler factory employees
ಮಾಧ್ಯಮದ ನಾಲ್ವರ ಮೇಲೆ ಹಲ್ಲೆ


ಇತ್ತೀಚೆಗಷ್ಟೇ ವಿಷಾನಿಲ ಸೋರಿಕೆಯಿಂದ ಬಾಯ್ಲರ್‌ ಬ್ಲಾಸ್ಟ್‌ ಆಗಿತ್ತು. ಈ ಬಗ್ಗೆ ಸಂಕ್ಷಿಪ್ತ ಮಾಹಿತಿ ಕಲೆಹಾಕಲು ಮಂಗಳವಾರ ವರದಿಗಾರರು ಹಾಗೂ ಕ್ಯಾಮೆರಾಮನ್‌ಗಳು ಬೇಳೂರು ಬಾಯ್ಲರ್‌ ಬಳಿ ತೆರಳಿದ್ದರು. ಈ ಸಂದರ್ಭದಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ್ದಾರೆ.

ಅಲ್ಲದೇ ಮಾಧ್ಯಮದವರು ತೆಗೆದುಕೊಂಡು ಹೋಗಿದ್ದ ಕ್ಯಾಮೆರಾ, ಟ್ರೈಪಾಡ್‌ ಹಾಗೂ ಮೊಬೈಲ್‌ಗಳನ್ನು ಕಸಿದು ಜಖಂ ಮಾಡಿದ್ದಾರೆ. ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ ಅವರು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಷಯ ತಿಳಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೋನ ವಂಶಿಕೃಷ್ಣ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಘಟನೆಯ ಸಂಪೂರ್ಣ ಮಾಹಿತಿ ಪಡೆದರು. ಪೊಲೀಸರು ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ನಡೆಸಿದ್ದು, ಸದ್ಯ ನಾಲ್ವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಲ್ಲದೇ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಶಫಿ ಅಹಮದ್‌ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ