ಆ್ಯಪ್ನಗರ

ಒಣ, ಹಸಿ ಕಸ ಬೇರ್ಪಡಿಸಿ ನೀಡುವುದು ಕಡ್ಡಾಯ

ಪಾಲಿಕೆಯ ಕಸ ಸಂಗ್ರಹಣೆ ವಾಹನಕ್ಕೆ ಕಸ ಹಾಕುವ ನಗರ ನಿವಾಸಿಗಳು ಒಣ ಹಾಗೂ ಹಸಿ ಕಸವನ್ನು ಬೇರ್ಪಡಿಸಿ ನೀಡಬೇಕೆಂದು ಪಾಲಿಕೆಯ ಸಾರ್ವಜನಿಕ ಆರೋಗ್ಯ ಶಿಕ್ಷ ಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್‌ ನಯಾಜ್‌ ಅಹಮದ್‌ ಮನವಿ ಮಾಡಿದರು.

Vijaya Karnataka 12 Jul 2019, 5:00 am
ತುಮಕೂರು: ಪಾಲಿಕೆಯ ಕಸ ಸಂಗ್ರಹಣೆ ವಾಹನಕ್ಕೆ ಕಸ ಹಾಕುವ ನಗರ ನಿವಾಸಿಗಳು ಒಣ ಹಾಗೂ ಹಸಿ ಕಸವನ್ನು ಬೇರ್ಪಡಿಸಿ ನೀಡಬೇಕೆಂದು ಪಾಲಿಕೆಯ ಸಾರ್ವಜನಿಕ ಆರೋಗ್ಯ ಶಿಕ್ಷ ಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್‌ ನಯಾಜ್‌ ಅಹಮದ್‌ ಮನವಿ ಮಾಡಿದರು.
Vijaya Karnataka Web tumkur its mandatory to separate dry and wet waste
ಒಣ, ಹಸಿ ಕಸ ಬೇರ್ಪಡಿಸಿ ನೀಡುವುದು ಕಡ್ಡಾಯ


ಸ್ಮಾರ್ಟ್‌ಸಿಟಿ ಮತ್ತು ಮಹಾನಗರ ಪಾಲಿಕೆ ಸಹಯೋಗದಲ್ಲಿ ಅನುಷ್ಠಾನಗೊಳಿಸುತ್ತಿರುವ ಮಾಹಿತಿ ಶಿಕ್ಷ ಣ ಮತ್ತು ಸಂವಹನ ಕಾರ್ಯಕ್ರಮದ ಅಂಗವಾಗಿ 4ನೇ ವಾರ್ಡ್‌ನ ಮಾರುತಿ ಸರ್ಕಲ್‌ನಲ್ಲಿ ಮನೆ ಮನೆ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಗರದಲ್ಲಿ ಗುರುವಾರ ಮನೆ ಮಾಲೀಕರಿಗೆ ಕರಪತ್ರ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಹಸಿ ಕಸ ಮತ್ತು ಒಣ ಕಸನ್ನು ಬೇರ್ಪಡಿಸಿ ಪಾಲಿಕೆಯ ವಾಹನಗಳಿಗೆ ನೀಡುವುದು ಕಡ್ಡಾಯ. ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ನಗರ ನೈರ್ಮಲ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕೋರಿದರು.

4ನೇ ವಾರ್ಡ್‌ ಸದಸ್ಯೆ ದೀಪಶ್ರೀ ಮಾತನಾಡಿ, ಪ್ರತಿಯೊಬ್ಬರೂ ಕಸವನ್ನು ಪ್ರತ್ಯೇಕಗೊಳಿಸಬೇಕು ಹಾಗೂ ಪ್ಲಾಸ್ಟಿಕ್‌ ಬಳಸುವುದನ್ನು ತ್ಯಜಿಸಬೇಕು ಎಂದರು.

ಈ ಸಂದರ್ಭದಲ್ಲಿ ಪಾಲಿಕೆಯ ಪರಿಸರ ಅಭಿಯಂತರರಾದ ಮೃತ್ಯುಂಜಯ, ಮೋಹನಕುಮಾರ್‌, ನಿಖಿತಾ ಹಾಗೂ ಆರೋಗ್ಯ ನಿರೀಕ್ಷ ಕರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ