ಆ್ಯಪ್ನಗರ

ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಎಐಟಿಯುಸಿ ರಾಷ್ಟ್ರೀಯ ಸಮಿತಿಯ ಕರೆಯ ಮೇರೆಗೆ ರಾಷ್ಟ್ರಾದ್ಯಂತ ಇಂದು ಬೇಡಿಕೆ ದಿನದ ಅಂಗವಾಗಿ ಕಾರ್ಮಿಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಆಲ್‌ ಇಂಡಿಯಾ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌ ಜಿಲ್ಲಾ ಸಮಿತಿ (ಎಐಟಿಯುಸಿ) ಯಿಂದ ಸೋಮವಾರ ಪ್ರತಿಭಟನೆ ನಡೆಯಿತು.

Vijaya Karnataka 26 Feb 2019, 5:00 am
ತುಮಕೂರು: ಎಐಟಿಯುಸಿ ರಾಷ್ಟ್ರೀಯ ಸಮಿತಿಯ ಕರೆಯ ಮೇರೆಗೆ ರಾಷ್ಟ್ರಾದ್ಯಂತ ಇಂದು ಬೇಡಿಕೆ ದಿನದ ಅಂಗವಾಗಿ ಕಾರ್ಮಿಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಆಲ್‌ ಇಂಡಿಯಾ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌ ಜಿಲ್ಲಾ ಸಮಿತಿ (ಎಐಟಿಯುಸಿ) ಯಿಂದ ಸೋಮವಾರ ಪ್ರತಿಭಟನೆ ನಡೆಯಿತು.
Vijaya Karnataka Web tumkur labours protest pressing many demands
ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ


ನಗರದ ಟೌನ್‌ಹಾಲ್‌ ವೃತ್ತದಲ್ಲಿ ಸಮಾವೇಶಗೊಂಡ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದರು.

ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್‌, ಕಳೆದ 20 ವರ್ಷಗಳಿಂದ ಕೇಂದ್ರ ಕಾರ್ಮಿಕ ಸಂಘಟನೆಗಳ ಸಮಿತಿ ರಚಿಸಿಕೊಂಡು ಎಐಟಿಯುಸಿ ನೇತೃತ್ವದಲ್ಲಿ ಕಾರ್ಮಿಕರ ಕನಿಷ್ಠ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸುತ್ತಾ ಬರುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರ್ಮಿಕರನ್ನು ಕಡೆಗಣಿಸುತ್ತಾ ಬಂದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಸಂಘ ಸ್ಥಾಪಿಸಿ; ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್‌.ರೇವಣ್ಣ ಮಾತನಾಡಿ, ಕಾರ್ಮಿಕರ ಹಿತರಕ್ಷ ಣೆಗಾಗಿ ಕಾರ್ಮಿಕ ಸಂಘ ಸ್ಥಾಪಿಸಿ ಅವರ ರಕ್ಷ ಣೆಗೆ ಮುಂದಾಗುವ ಕ್ರಮಕ್ಕೆ ಕಂಪನಿಗಳ ಮಾಲೀಕರು ಸಂಘ ಸ್ಥಾಪನೆಗೆ ಅಡ್ಡಿ ಮಾಡುತ್ತಿರುವುದನ್ನು ಕೈಬಿಟ್ಟು ಸಂಘ ಸ್ಥಾಪನೆಗೆ ಮಾನ್ಯತೆ ನೀಡಬೇಕು ಎಂದು ತಿಳಿಸಿದರು.

ಎಐಟಿಯುಸಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಶ್ವತ್ಥನಾರಾಯಣ ಮಾತನಾಡಿ, ಕಾರ್ಮಿಕರ ಕನಿಷ್ಟ ಬೇಡಿಕೆಗಳಾದ ಮಾಸಿಕ 18 ಸಾವಿರ ರೂ. ನೀಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ, ಪ್ರತಿಯೊಬ್ಬ ಕಾರ್ಮಿಕನಿಗೂ ಕನಿಷ್ಠ 3000 ರೂ. ಮಾಸಿಕ ಪಿಂಚಣಿ, ನಿಗದಿತ ಕಾಲಾವಧಿ ಕೆಲಸ ನಿಗದಿ ಮಾಡಬೇಕು, ಕಾರ್ಪೊರೇಟ್‌ ಪರ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ, ಶೀಘ್ರ ಇದನ್ನು ವಾಪಸ್‌ ಪಡೆಯಬೇಕು ಎದು ಒತ್ತಾಯಿಸಿದರು.

ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳ ಪರವಾಗಿ ತಹಸೀಲ್ದಾರ್‌ ಮುರಳೀಧರ್‌ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ನರಸಿಂಹಮೂರ್ತಿ, ಕಾಂತರಾಜು ಮಾತನಾಡಿದರು. ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

25ಟಿಎಂವಿ7: ಕಾರ್ಮಿಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಆಲ್‌ ಇಂಡಿಯಾ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌ ಜಿಲ್ಲಾ ಸಮಿತಿಯಿಂದ ಸೋಮವಾರ ನಗರದ ಟೌನ್‌ಹಾಲ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ