ಆ್ಯಪ್ನಗರ

ಸಿದ್ದಗಂಗಾ ಶ್ರೀಗಳ ಶ್ವಾಸಕೋಶದಲ್ಲಿ ನೀರು: ವೈದ್ಯರಿಂದ ಚಿಕಿತ್ಸೆ

ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದ್ದರಿಂದ ಸಮಸ್ಯೆಯಾಗಿತ್ತು. ಇದೀಗ ನೀರನ್ನು ಹೊರ ತೆಗೆಯಲಾಗುತ್ತಿದೆ. ಶ್ರೀಗಳ ನಾಡಿ ಮಿಡಿತವೂ ಉತ್ತಮ ಸ್ಥಿತಿಗೆ ತಲುಪಿದೆ.

Vijaya Karnataka Web 31 Dec 2018, 8:53 pm
ತುಮಕೂರು: ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಬಿಜಿಎಸ್‌ ವೈದ್ಯರಾದ ಡಾ. ರವೀಂದ್ರ ಹಾಗೂ ಡಾ. ವೆಂಕಟರಮಣ ತಿಳಿಸಿದ್ದಾರೆ.
Vijaya Karnataka Web siddaganga shree


ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದ್ದರಿಂದ ಸಮಸ್ಯೆಯಾಗಿತ್ತು. ಇದೀಗ ನೀರನ್ನು ಹೊರ ತೆಗೆಯಲಾಗುತ್ತಿದೆ. ಶ್ರೀಗಳ ನಾಡಿ ಮಿಡಿತವೂ ಉತ್ತಮ ಸ್ಥಿತಿಗೆ ತಲುಪಿದೆ. ಶ್ವಾಸಕೋಶದಲ್ಲಿ ಶೇಖರಣೆಯಾಗಿದ್ದ ನೀರಿನಿಂದಾಗಿ ಸೋಂಕು ಉಂಟಾಗಿತ್ತು ಎಂದು ಅವರು ಹೇಳಿದ್ದಾರೆ.

ಶ್ವಾಸಕೋಶದಲ್ಲಿ ಶೇಖರಣೆಯಾಗುವ ನೀರನ್ನು 2 ದಿನಕ್ಕೊಮ್ಮೆ ತೆಗೆಯಲಾಗುತ್ತಿದೆ. ಸುಮಾರು 150ರಿಂದ 200 ಎಂಎಲ್‌ ನೀರು ಹೊರ ತೆಗೆಯಲಾಗುತ್ತಿದೆ. ಸ್ವಾಮೀಜಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ದೇಹದಲ್ಲಿ ಪ್ರೊಟೀನ್‌ ಅಂಶ ಕಡಿಮೆಯಾಗಿದ್ದರಿಂದ ಈ ರೀತಿ ಆಗಿದೆ. ಆಂಟಿಬಯೋಟಿಕ್‌ ಮಾತ್ರಗಳನ್ನೂ ನೀಡಲಾಗಿದೆ. ಮಠದಲ್ಲೇ ಆಸ್ಪತ್ರೆಯ ರೀತಿಯ ವ್ಯವಸ್ಥೆ ಮಾಡಲಾಗಿದ್ದು, ಆಸ್ಪತ್ರೆಗೆ ಸಾಗಿಸುವ ಯಾವುದೇ ಅವಶ್ಯಕತೆ ಇಲ್ಲ. ಭಕ್ತರು ಆತಂಕಪಡುವ ಅವಶ್ಯಕತೆಯೇ ಇಲ್ಲ ಎಂದಿದ್ದಾರೆ.

ಸೋಮವಾರ ಮಧ್ಯಾಹ್ನದ ವೇಳೆಗೆ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಬಗ್ಗೆ ಸುದ್ದಿ ಹಬ್ಬಿತ್ತು. ಅಲ್ಲದೆ ಮಠದ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ