ಆ್ಯಪ್ನಗರ

ವೈಕುಂಠ ಏಕಾದಶಿ; ವೆಂಕಟೇಶ್ವರನಿಗೆ ವಿಶೇಷ ಪೂಜೆ

ನಗರದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದ್ದು, ಹಲವು ದೇವಾಲಯಗಳು ಮಂಗಳವಾರ ಭಕ್ತರಿಂದ ತುಂಬಿ ತುಳುಕುತ್ತಿದ್ದವು. ಚಾಂದ್ರಮಾನ ಪುಷ್ಯಮಾಸ ಏಕಾದಶಿಯ ಈ ವಿಶೇಷ ದಿನದಂದು ಶ್ರೀವೆಂಕಟೇಶ್ವರ, ಶ್ರೀನಿವಾಸ, ವಿಷ್ಣು ದೇವಸ್ಥಾನಗಳಲ್ಲಿ ಭಕ್ತಾಧಿಗಳು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Vijaya Karnataka 19 Dec 2018, 5:00 am
ತುಮಕೂರು: ನಗರದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದ್ದು, ಹಲವು ದೇವಾಲಯಗಳು ಮಂಗಳವಾರ ಭಕ್ತರಿಂದ ತುಂಬಿ ತುಳುಕುತ್ತಿದ್ದವು. ಚಾಂದ್ರಮಾನ ಪುಷ್ಯಮಾಸಏಕಾದಶಿಯ ಈ ವಿಶೇಷ ದಿನದಂದು ಶ್ರೀವೆಂಕಟೇಶ್ವರ, ಶ್ರೀನಿವಾಸ, ವಿಷ್ಣು ದೇವಸ್ಥಾನಗಳಲ್ಲಿ ಭಕ್ತಾಧಿಗಳು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.
Vijaya Karnataka Web vaikuntha ekadashi special worship for venkateswara
ವೈಕುಂಠ ಏಕಾದಶಿ; ವೆಂಕಟೇಶ್ವರನಿಗೆ ವಿಶೇಷ ಪೂಜೆ


ವೈಕುಂಠ ಏಕಾದಶಿ ದಿನ ಯಾವುದೇ ಆಹಾರ ಸೇವಿಸದೆ ಉಪವಾಸ ವ್ರತ ಮಾಡುವ ಸಂಪ್ರದಾಯವಿದೆ. ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ ಎಂಬ ನಂಬಿಕೆಯಿದ್ದು ವೆಂಕಟೇಶ್ವರ, ಶ್ರೀನಿವಾಸ, ವಿಷ್ಣು ದೇವರ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ಭಾವನೆ ಭಕ್ತರಲ್ಲಿದೆ. ಏಕಾದಶಿ ಸಂಭ್ರಮದ ಅಂಗವಾಗಿ ನಗರದ ವಿವಿಧ ದೇವಸ್ಥಾನಗಳಲ್ಲಿ ಭಕ್ತರ ದಂಡೇ ನೆರೆದಿತ್ತು. ಬೆಳಗ್ಗೆ 5 ಗಂಟೆಯಿಂದಲೇ ಭಕ್ತರು ದೇವಾಲಯಗಳಲ್ಲಿ ಸಾಲುಗಟ್ಟಿ ನಿಂತು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಮಹಾಲಕ್ಷ್ಮೀ ಬಡಾವಣೆಯ ಶ್ರೀವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆ 3ರಿಂದ ಸಂಜೆ ಗಂಟೆಯವರೆಗೆ ಪೂಜೆ, ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ದೇವರ ದರ್ಶನಕ್ಕೆ ಭಕ್ತರು ಸಾಲುಗಟ್ಟಿ ನಿಂತಿದ್ದರು. ಬೆಳಗ್ಗೆ 6ಕ್ಕೆ ಶ್ರೀಸ್ವಾಮಿಯ ದಿವ್ಯ ದರ್ಶನ ಮತ್ತು ಮಹಾಮಂಗಳಾರತಿ ನಡೆಸಿ, ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

ಇನ್ನು ನಗರದ ಸಿರಾಗೇಟ್‌ನಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಯಿತು. ಭಕ್ತರು ಸ್ವಾಮಿಯ ದರ್ಶನ ಪಡೆದು ಇಷ್ಟಾರ್ಥ ಈಡೇರಿಸುವಂತೆ ಕೋರಿಕೆ ಸಲ್ಲಿಸಿದರು. ಅದೇ ರೀತಿ ಚಿಕ್ಕಪೇಟೆಯ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲೂ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿತ್ತು. ಬೆಳಗ್ಗೆಯಿಂದಲೇ ಭಕ್ತರು ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು.

ನಗರದ ಬಿಎಚ್‌ ರಸ್ತೆಯ ಟಿಜಿಎಂಸಿ ಬ್ಯಾಂಕ್‌ ಆವರಣದ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಪುಣ್ಯ ಕಾರ್ಯ ಹಾಗೂ ದೇವಾಲಯದ ಎಲ್ಲಾ ಪೂಜಾ ಕಾರ್ಯಗಳನ್ನು ನಡೆಸಿ, ಉತ್ಸವ ಮೂರ್ತಿಯನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಜಯನಗರದ ಶ್ರೀ ಪದ್ಮಾವತಿ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ